ದಿವಂಗತ ಸುನಂದಾ ಪುಷ್ಕರ್ ಶಶಿ ತರೂರ್ ಅವರೊಂದಿಗೆ (ಫೈಲ್ ಚಿತ್ರ) 
ದೇಶ

ಸುನಂದಾ ಪುಷ್ಕರ್ ಪ್ರಕರಣ: ಶಶಿ ತರೂರ್ ಆರೋಪಿಯೇ ಎನ್ನುವ ಆದೇಶವನ್ನು ಕಾಯ್ದಿರಿಸಿದ ಕೋರ್ಟ್

ಸುನಂದಾ ಪುಷ್ಕರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಶಶಿ ತರೂರ್ ಆರೋಪಿಯೇ ಎನ್ನುವ ಕುರಿತು ಜೂನ್ 5ರಂದು ತೀರ್ಪು ನೀಡುವುದಾಗಿ ದೆಹಲಿ ನ್ಯಾಯಾಲಯ ಹೇಳಿದೆ.

ನವದೆಹಲಿ: ಸುನಂದಾ ಪುಷ್ಕರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಶಶಿ ತರೂರ್ ಆರೋಪಿಯೇ ಎನ್ನುವ ಕುರಿತು  ಜೂನ್ 5ರಂದು ತೀರ್ಪು ನೀಡುವುದಾಗಿ ದೆಹಲಿ ನ್ಯಾಯಾಲಯ ಹೇಳಿದೆ.
ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಸಮರ್ ವಿಶಾಲ್ ಈ ತೀರ್ಪು ನೀಡಿದ್ದು ತರೂರ್ ಅವರನ್ನು ಅಪರಾಧಿ ಎನ್ನಲು ಪ್ರಾಸಿಕ್ಯೂಷನ್ ಬಳಿ ಸಾಕಷ್ಟು ಸಾಕ್ಷಾಧಾರಗಳಿಲ್ಲ ಎಂಬ ಕಾರಣಕ್ಕೆ ತೀರ್ಪು ಕಾಯ್ದಿರಿಸಲಾಗಿದೆ ಎಂದಿದ್ದಾರೆ.
ಸುನಂದಾ ಪುಷ್ಕರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸ್ ಮಾಜಿ ಕೇಂದ್ರ ಸಚಿವ ಶಶಿ ತರೂರ್ ಆರೋಪಿಯಾಗಿದ್ದಾರೆಂದು ದೆಹಲಿ ಪೋಲೀಸರು ಮೇ 14ರಂದು ನ್ಯಾಯಾಲಯಕ್ಕೆ ತಿಳಿಸಿದ್ದರು. ನಾಲ್ಕೂವರೆ ವರ್ಷದ ಹಿಂದಿನ ಪ್ರಕರಣದಲ್ಲಿ ತರೂರ್ ಅವರನ್ನು ಆರೋಪಿಯಾಗಿ ಪರಿಗಣಿಸಬೇಕೆಂದು ಅವರು ಕೋರಿದ್ದರು.
ಸುಮಾರು 3,000 ಪುಟಗಳ ಚಾರ್ಜ್ ಶೀಟ್ ನಲ್ಲಿ ತರೂರ್ ಅವರೌ ಮಾತ್ರವೇ ಆರೋಪಿ ಎಂದು ತೋರಿಸಿದ್ದ ಪೋಲೀಸರು ತರೂರ್ ತಮ್ಮ ಪತ್ನಿಯನ್ನು ಕ್ರೌರ್ಯಕ್ಕೆ ಒಳಪಡಿಸಿದ್ದರೆಂದು ದೂರಿದ್ದಾರೆ. ತರೂರ್ ಅವರ ಮನೆಗೆಲಸದವನಾದ ನಾರಾಯಣ್ ಸಿಂಗ್ ಈ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾಗಿದ್ದಾನೆ.
ಜನವರಿ 17, 2014 ರ ರಾತ್ರಿ ದೆಹಲಿಯ ಐಷಾರಾಮಿ ಹೋಟೆಲ್ ಕೋಣೆಯಲ್ಲಿ ಪುಷ್ಕರ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಇದುವರೆಗೆ ತರೂರ್ ಅವರನ್ನು ಬಂಧಿಸಲಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT