ದಿವಂಗತ ಸುನಂದಾ ಪುಷ್ಕರ್ ಶಶಿ ತರೂರ್ ಅವರೊಂದಿಗೆ (ಫೈಲ್ ಚಿತ್ರ) 
ದೇಶ

ಸುನಂದಾ ಪುಷ್ಕರ್ ಪ್ರಕರಣ: ಶಶಿ ತರೂರ್ ಆರೋಪಿಯೇ ಎನ್ನುವ ಆದೇಶವನ್ನು ಕಾಯ್ದಿರಿಸಿದ ಕೋರ್ಟ್

ಸುನಂದಾ ಪುಷ್ಕರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಶಶಿ ತರೂರ್ ಆರೋಪಿಯೇ ಎನ್ನುವ ಕುರಿತು ಜೂನ್ 5ರಂದು ತೀರ್ಪು ನೀಡುವುದಾಗಿ ದೆಹಲಿ ನ್ಯಾಯಾಲಯ ಹೇಳಿದೆ.

ನವದೆಹಲಿ: ಸುನಂದಾ ಪುಷ್ಕರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಶಶಿ ತರೂರ್ ಆರೋಪಿಯೇ ಎನ್ನುವ ಕುರಿತು  ಜೂನ್ 5ರಂದು ತೀರ್ಪು ನೀಡುವುದಾಗಿ ದೆಹಲಿ ನ್ಯಾಯಾಲಯ ಹೇಳಿದೆ.
ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಸಮರ್ ವಿಶಾಲ್ ಈ ತೀರ್ಪು ನೀಡಿದ್ದು ತರೂರ್ ಅವರನ್ನು ಅಪರಾಧಿ ಎನ್ನಲು ಪ್ರಾಸಿಕ್ಯೂಷನ್ ಬಳಿ ಸಾಕಷ್ಟು ಸಾಕ್ಷಾಧಾರಗಳಿಲ್ಲ ಎಂಬ ಕಾರಣಕ್ಕೆ ತೀರ್ಪು ಕಾಯ್ದಿರಿಸಲಾಗಿದೆ ಎಂದಿದ್ದಾರೆ.
ಸುನಂದಾ ಪುಷ್ಕರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸ್ ಮಾಜಿ ಕೇಂದ್ರ ಸಚಿವ ಶಶಿ ತರೂರ್ ಆರೋಪಿಯಾಗಿದ್ದಾರೆಂದು ದೆಹಲಿ ಪೋಲೀಸರು ಮೇ 14ರಂದು ನ್ಯಾಯಾಲಯಕ್ಕೆ ತಿಳಿಸಿದ್ದರು. ನಾಲ್ಕೂವರೆ ವರ್ಷದ ಹಿಂದಿನ ಪ್ರಕರಣದಲ್ಲಿ ತರೂರ್ ಅವರನ್ನು ಆರೋಪಿಯಾಗಿ ಪರಿಗಣಿಸಬೇಕೆಂದು ಅವರು ಕೋರಿದ್ದರು.
ಸುಮಾರು 3,000 ಪುಟಗಳ ಚಾರ್ಜ್ ಶೀಟ್ ನಲ್ಲಿ ತರೂರ್ ಅವರೌ ಮಾತ್ರವೇ ಆರೋಪಿ ಎಂದು ತೋರಿಸಿದ್ದ ಪೋಲೀಸರು ತರೂರ್ ತಮ್ಮ ಪತ್ನಿಯನ್ನು ಕ್ರೌರ್ಯಕ್ಕೆ ಒಳಪಡಿಸಿದ್ದರೆಂದು ದೂರಿದ್ದಾರೆ. ತರೂರ್ ಅವರ ಮನೆಗೆಲಸದವನಾದ ನಾರಾಯಣ್ ಸಿಂಗ್ ಈ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾಗಿದ್ದಾನೆ.
ಜನವರಿ 17, 2014 ರ ರಾತ್ರಿ ದೆಹಲಿಯ ಐಷಾರಾಮಿ ಹೋಟೆಲ್ ಕೋಣೆಯಲ್ಲಿ ಪುಷ್ಕರ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಇದುವರೆಗೆ ತರೂರ್ ಅವರನ್ನು ಬಂಧಿಸಲಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

SCROLL FOR NEXT