ದಿವಂಗತ ಸುನಂದಾ ಪುಷ್ಕರ್ ಶಶಿ ತರೂರ್ ಅವರೊಂದಿಗೆ (ಫೈಲ್ ಚಿತ್ರ) 
ದೇಶ

ಸುನಂದಾ ಪುಷ್ಕರ್ ಪ್ರಕರಣ: ಶಶಿ ತರೂರ್ ಆರೋಪಿಯೇ ಎನ್ನುವ ಆದೇಶವನ್ನು ಕಾಯ್ದಿರಿಸಿದ ಕೋರ್ಟ್

ಸುನಂದಾ ಪುಷ್ಕರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಶಶಿ ತರೂರ್ ಆರೋಪಿಯೇ ಎನ್ನುವ ಕುರಿತು ಜೂನ್ 5ರಂದು ತೀರ್ಪು ನೀಡುವುದಾಗಿ ದೆಹಲಿ ನ್ಯಾಯಾಲಯ ಹೇಳಿದೆ.

ನವದೆಹಲಿ: ಸುನಂದಾ ಪುಷ್ಕರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಶಶಿ ತರೂರ್ ಆರೋಪಿಯೇ ಎನ್ನುವ ಕುರಿತು  ಜೂನ್ 5ರಂದು ತೀರ್ಪು ನೀಡುವುದಾಗಿ ದೆಹಲಿ ನ್ಯಾಯಾಲಯ ಹೇಳಿದೆ.
ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಸಮರ್ ವಿಶಾಲ್ ಈ ತೀರ್ಪು ನೀಡಿದ್ದು ತರೂರ್ ಅವರನ್ನು ಅಪರಾಧಿ ಎನ್ನಲು ಪ್ರಾಸಿಕ್ಯೂಷನ್ ಬಳಿ ಸಾಕಷ್ಟು ಸಾಕ್ಷಾಧಾರಗಳಿಲ್ಲ ಎಂಬ ಕಾರಣಕ್ಕೆ ತೀರ್ಪು ಕಾಯ್ದಿರಿಸಲಾಗಿದೆ ಎಂದಿದ್ದಾರೆ.
ಸುನಂದಾ ಪುಷ್ಕರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸ್ ಮಾಜಿ ಕೇಂದ್ರ ಸಚಿವ ಶಶಿ ತರೂರ್ ಆರೋಪಿಯಾಗಿದ್ದಾರೆಂದು ದೆಹಲಿ ಪೋಲೀಸರು ಮೇ 14ರಂದು ನ್ಯಾಯಾಲಯಕ್ಕೆ ತಿಳಿಸಿದ್ದರು. ನಾಲ್ಕೂವರೆ ವರ್ಷದ ಹಿಂದಿನ ಪ್ರಕರಣದಲ್ಲಿ ತರೂರ್ ಅವರನ್ನು ಆರೋಪಿಯಾಗಿ ಪರಿಗಣಿಸಬೇಕೆಂದು ಅವರು ಕೋರಿದ್ದರು.
ಸುಮಾರು 3,000 ಪುಟಗಳ ಚಾರ್ಜ್ ಶೀಟ್ ನಲ್ಲಿ ತರೂರ್ ಅವರೌ ಮಾತ್ರವೇ ಆರೋಪಿ ಎಂದು ತೋರಿಸಿದ್ದ ಪೋಲೀಸರು ತರೂರ್ ತಮ್ಮ ಪತ್ನಿಯನ್ನು ಕ್ರೌರ್ಯಕ್ಕೆ ಒಳಪಡಿಸಿದ್ದರೆಂದು ದೂರಿದ್ದಾರೆ. ತರೂರ್ ಅವರ ಮನೆಗೆಲಸದವನಾದ ನಾರಾಯಣ್ ಸಿಂಗ್ ಈ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾಗಿದ್ದಾನೆ.
ಜನವರಿ 17, 2014 ರ ರಾತ್ರಿ ದೆಹಲಿಯ ಐಷಾರಾಮಿ ಹೋಟೆಲ್ ಕೋಣೆಯಲ್ಲಿ ಪುಷ್ಕರ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಇದುವರೆಗೆ ತರೂರ್ ಅವರನ್ನು ಬಂಧಿಸಲಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!