ಪ್ರತಿಭಟನಾಕಾರರನ್ನು ತಡೆಯುತ್ತಿರುವ ಪೊಲೀಸರು 
ದೇಶ

13 ಸಾವಿನ ನಂತರ ಸ್ಟೆರ್ಲೈಟ್ ತಾಮ್ರ ಘಟಕ ಶಾಶ್ವತವಾಗಿ ಮುಚ್ಚಲು ತಮಿಳುನಾಡು ಸರ್ಕಾರ ಆದೇಶ

13 ಅಮಾಯಕರ ಸಾವಿನ ನಂತರ ಎಚ್ಚೆತ್ತುಕೊಂಡ ತಮಿಳುನಾಡು ಸರ್ಕಾರ, ತೂತುಕುಡಿಯಲ್ಲಿರುವ ವೇದಾಂತ ಗ್ರೂಪ್...

ಚೆನ್ನೈ: 13 ಅಮಾಯಕರ ಸಾವಿನ ನಂತರ ಎಚ್ಚೆತ್ತುಕೊಂಡ ತಮಿಳುನಾಡು ಸರ್ಕಾರ, ತೂತುಕುಡಿಯಲ್ಲಿರುವ ವೇದಾಂತ ಗ್ರೂಪ್ ನ ಸ್ಟೆರ್ಲೈಟ್ ತಾಮ್ರ ಘಟಕವನ್ನು ಶಾಶ್ವತ ಮುಚ್ಚುವಂತೆ ಸೋಮವಾರ ಆದೇಶಿಸಿದೆ.
ಇಂದು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ನೇತೃತ್ವದಲ್ಲಿ ನಡೆದ ತುರ್ತು ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಉಪ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಅವರು, ಸ್ಟೆರ್ಲೈಟ್ ತಾಮ್ರ ಘಟಕವನ್ನು ಶಾಶ್ವತವಾಗಿ ಮುಚ್ಚಬೇಕು ಎಂಬ ನಾಗರಿಕರ ಒಕ್ಕೊರಲ ಅಭಿಪ್ರಾಯವನ್ನು ಪರಿಗಣಿಸಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಮೇ.22 ರಂದು ತೂತುಕುಡಿಯಲ್ಲಿ ಸ್ಟೆರ್ಲೈಟ್ ತಾಮ್ರ ಘಟಕದ ಕಾರ್ಯನಿರ್ವಹಣೆಯನ್ನು ವಿರೋಧಿಸಿ ರೈತರು ಹಿಂಸಾತ್ಮಕ ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭದಲ್ಲಿ ನಡೆದ ಪೊಲೀಸ್‌ ಗೋಲಿಬಾರ್ ನಲ್ಲಿ 13 ಮಂದಿ ಮೃತಪಟ್ಟಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್; Video

ಸ್ವಾತಂತ್ರ್ಯ ಬಳಿಕ ಇದೇ ಮೊದಲು: ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಕೆಲಸದಿಂದ 6 ಪ್ರಾಧ್ಯಾಪಕರ ವಜಾ

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; 'ಆ' ದೃಶ್ಯಕ್ಕೆ ಆಕ್ಷೇಪ!

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಇರಾನ್ ಸಂಸತ್ ಸ್ಪೀಕರ್ ಖಡಕ್ ವಾರ್ನಿಂಗ್!

SCROLL FOR NEXT