ಮತದಾನ ಮಾಡಿದ ಮಹಿಳೆಯರು 
ದೇಶ

ಉಪಚುನಾವಣೆ: ಉತ್ತರ ಪ್ರದೇಶದ ಕೈರಾನಾ ಸೇರಿ 10 ವಿಧಾನಸಭೆ, 3 ಲೋಕಸಭೆ ಸ್ಥಾನಕ್ಕೆ ಮತದಾನ

ರಾಜಕೀಯವಾಗಿ ನಿರ್ಣಯಕವಾಗಿರುವ ಕೈರಾನಾ ವಿಧಾನಸಭಾ ಕ್ಷೇತ್ರ ಸೇರಿದಂತೆ ಹತ್ತು ರಾಜ್ಯಗಳ 10 ವಿಧಾನಸಭೆ ಹಾಗೂ ಮೂರು ಲೋಕಸಭೆ ಕ್ಷೇತ್ರಗಳಲ್ಲಿ ಇಂದು ಮತದಾನ ಪ್ರಗತಿಯಲ್ಲಿದೆ.

ಉತ್ತರ ಪ್ರದೇಶ : ರಾಜಕೀಯವಾಗಿ ನಿರ್ಣಯಕವಾಗಿರುವ  ಕೈರಾನ ವಿಧಾನಸಭಾ ಕ್ಷೇತ್ರ ಸೇರಿದಂತೆ  ಹತ್ತು ರಾಜ್ಯಗಳ   10 ವಿಧಾನಸಭೆ ಹಾಗೂ  ಮೂರು ಲೋಕಸಭೆ ಕ್ಷೇತ್ರಗಳಲ್ಲಿ ಇಂದು ಮತದಾನ ಪ್ರಗತಿಯಲ್ಲಿದೆ.

ಕೈರಾನ ಮಾತ್ರವಲ್ಲದೇ ಮಹಾರಾಷ್ಟ್ರದ ಬಾಂದ್ರಾ- ಗೊಂಡಿಯಾ ಮತ್ತು ಫಲ್ ಘರ್  ಹಾಗೂ ನಾಗಲ್ಯಾಂಡಿನಲ್ಲಿ ಒಂದು ಲೋಕಸಭಾ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದೆ. ಕೈರಾನ ಉಪಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಎಲ್ಲಾ ವಿರೋಧಪಕ್ಷಗಳು ಒಗ್ಗೂಡಿ ಪೈಪೋಟಿ ನಡೆಸುತ್ತಿವೆ.

ಬಿಜೆಪಿ ಎಂಪಿ ಹುಕುಂ ಸಿಂಗ್  ನಿಧನ ಹೊಂದಿದ್ದ ನಂತರ ತೆರವಾಗಿರುವ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು, ಅವರ ಮಗಲು ಮೃಗಾಂಕಾ ಸಿಂಗ್ ಈಗ ಬಿಜೆಪಿಯ ಅಭ್ಯರ್ಥಿಯಾಗಿದ್ದಾರೆ. ಅವರ ಎದುರಾಳಿಯಾಗಿ ಆರ್ ಜೆಡಿಯಿಂದ ತಬಾಸಮ್ ಹಸನ್  ಸ್ಪರ್ಧಿಸಿದ್ದು, ಅವರಿಗೆ ಕಾಂಗ್ರೆಸ್, ಎಸ್ ಪಿ, ಬಿಎಸ್ ಪಿ ಬೆಂಬಲ ಘೋಷಿಸಿವೆ.

ಗೋರಖ್ ಪುರ ಮತ್ತು ಫಲ್ಪುರ್  ಲೋಕಸಭಾ ಉಪ ಚುನಾವಣೆಯಲ್ಲಿನ ಯಶಸ್ಸು ಇಲ್ಲಿಯೂ ಮುಂದುವರೆಯಲಿದೆ ಎಂಬುದು ವಿರೋಧಪಕ್ಷಗಳ ಲೆಕ್ಕಾಚಾರವಾಗಿದೆ. ಈ ಕ್ಷೇತ್ರವನ್ನು ಮರಳಿ ತನ್ನ ತೆಕ್ಕೆಗೆ ಪಡೆದುಕೊಳ್ಳಲು ಬಿಜೆಪಿ ಇನ್ನಿಲ್ಲದಂತೆ ಪ್ರಯತ್ನ ನಡೆಸಿದೆ.

ಬಿಜೆಪಿ ಸಂಸದ ಚಿಂತಾಮಣ್ ವಾನಾಗ  ಜನವರಿಯಲ್ಲಿ ನಿಧನ ಹೊಂದಿದ್ದ ಹಿನ್ನೆಲೆಯಲ್ಲಿ ಫಲ್ ಘರ್ ನಲ್ಲಿ ಉಪಚುನಾವಣೆ ನಡೆಯುತ್ತಿದೆ.  ಬಾಂದ್ರಾ- ಗೊಂಡಿಯಾದಲ್ಲಿ ನಾನಾ ಪಟೊಲ್  ಬಿಜೆಪಿ ತ್ಯಜಿಸಿ ಮತ್ತೆ ಕಾಂಗ್ರೆಸ್ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಇಂದು ಚುನಾವಣೆ ನಡೆಯುತ್ತಿದೆ.

 ನಾಗಲ್ಯಾಂಡ್ ನಲ್ಲಿಯೂ ಒಂದು ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು,   ಬಿಗಿ ಭದ್ರತೆ ಕೈಗೊಳ್ಳಲಾಗಿದೆ ಎಂದು  ಕೊಹಿಮಾದಲ್ಲಿ ಮುಖ್ಯ ಚುನಾವಣಾ ಅಧಿಕಾರಿ ಅಭಿಜಿತ್ ಸಿನ್ಹಾ ತಿಳಿಸಿದ್ದಾರೆ.  ಮೇ 31 ರಂದು ಈ ಎಲ್ಲಾ ಕ್ಷೇತ್ರಗಳ ಮತ ಎಣಿಕೆ ನಡೆಯಲಿದೆ.






Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT