ಧರ್ಮೇಂದ್ರ ಪ್ರಧಾನ್ 
ದೇಶ

ಕೇಂದ್ರ ಸಚಿವರಿಂದ 'ವೈಯಕ್ತಿಕ ಟಾರ್ಗೆಟ್': ಒಡಿಶಾ ಐಎಎಸ್ ಅಧಿಕಾರಿಗಳ ಸಂಘ ಆರೋಪ

ಇಂಧನ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಹಿರಿಯ ಅಧಿಕಾರಿಗಳನ್ನು 'ವೈಯಕ್ತಿಕ ಟಾರ್ಗೆಟ್' ಮಾಡುತ್ತಿದ್ದಾರೆ....

ನವದೆಹಲಿ: ಇಂಧನ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಹಿರಿಯ ಅಧಿಕಾರಿಗಳನ್ನು 'ವೈಯಕ್ತಿಕ ಟಾರ್ಗೆಟ್' ಮಾಡುತ್ತಿದ್ದಾರೆ ಎಂದು ಒಡಿಶಾ ಐಎಎಸ್ ಅಧಿಕಾರಿಗಳ ಸಂಘ ಮಂಗಳವಾರ ಆರೋಪಿಸಿದೆ.
ಈ ಸಂಬಂಧ ಐಎಎಸ್ ಅಧಿಕಾರಿಗಳ ಸಂಘ ಧರ್ಮೇಂದ್ರ ಪ್ರಧಾನ್ ಅವರ ವಿರುದ್ಧ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರಿಗೆ ಮನವಿ ಸಲ್ಲಿಸಿದ್ದು, ಘಟನೆ ಮತ್ತೆ ಮರುಕಳುಹಿಸದಂತೆ ಸೂಕ್ತ ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿದೆ.
ಇತ್ತೀಚಿಗೆ ರಾಜ್ಯ ಮತ್ತು ದೇಶದ ಇತರೆ ಭಾಗಗಳಲ್ಲಿ ತಮ್ಮ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳ ಮೇಲೆ ರಾಜಕಾರಣಿಗಳು ವೈಯಕ್ತಿಕ ದಾಳಿ ನಡೆಸುವ ಮೂಲಕ ಸಂವಿಧಾನಿಕ ಮೌಲ್ಯಗಳನ್ನು ಹಾಳು ಮಾಡುತ್ತಿದ್ದಾರೆ ಎಂದು ಅಧಿಕಾರಿಗಳ ಆರೋಪಿಸಿದೆ.
ಉದಾಹರಣೆಗೆ, ಮೇ 28ರಂದು ಭುವನೇಶ್ವರದಲ್ಲಿ ಎನ್ಐಸಿ ರಾಷ್ಟ್ರೀಯ ದತ್ತಾಂಶ ಕೇಂದ್ರ ಉದ್ಘಾಟನೆ ವೇಳೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಯೊಬ್ಬರನ್ನು ವೈಯಕ್ತಿಕವಾಗಿ ಟಾರ್ಗೆಟ್ ಮಾಡಿದ್ದರು ಎಂದು ಸಂಘ ದೂರಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT