ರಾಜಸ್ಥಾನ: ರಾಷ್ಟ್ರಪತಿಗಳಿಗೆ ದೇವಾಲಯ ಪ್ರವೇಷ ನಿಷೇಧಿಸಿದ್ದಕ್ಕೆ ಅರ್ಚಕನ ಮೇಲೆ ವ್ಯಕ್ತಿಯಿಂದ ಹಲ್ಲೆ 
ದೇಶ

ರಾಜಸ್ಥಾನ: ರಾಷ್ಟ್ರಪತಿಗಳಿಗೆ ಗರ್ಭಗುಡಿ ಪ್ರವೇಶ ನಿರಾಕರಿಸಿದ ಅರ್ಚಕನ ಮೇಲೆ ವ್ಯಕ್ತಿಯಿಂದ ಹಲ್ಲೆ

ರಾಜಸ್ಥಾನದ ಪುಷ್ಕರದಲ್ಲಿರುವ ಪ್ರಸಿದ್ದ ಬ್ರಹ್ಮ ದೇವಾಲಯ ಗರ್ಭಗೃಹ ಪ್ರವೇಶಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಅನುಮತಿ ನೀಡದ ಕಾರಣ...

ಜೈಪುರ(ರಾಜಸ್ಥಾನ): ರಾಜಸ್ಥಾನದ ಪುಷ್ಕರದಲ್ಲಿರುವ ಪ್ರಸಿದ್ದ ಬ್ರಹ್ಮ ದೇವಾಲಯ ಗರ್ಭಗೃಹ ಪ್ರವೇಶಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಅನುಮತಿ ನೀಡದ್ದಕ್ಕೆ  ಭಕ್ತರಂತೆ ವೇಷ ಧರಿಸಿದ ವ್ಯಕ್ತಿಯೊಬ್ಬ ದೇವಾಲಯದ ಅರ್ಚಕರ ಮೇಲೆ ಹಲ್ಲೆ ನಡೆಸಿದ್ದಾನೆ.
ಅಶೋಕ್ ಮೇಘವಾಲ್ ಎನ್ನುವ ವ್ಯಕ್ತಿ ದೇವಾಲಯದ ಸರತಿ ಸಾಲಿನಲ್ಲಿ ನಿಂತಿದ್ದು ತಾನು ದೇವರ ದರ್ಶನಕ್ಕಾಗಿ ಗರ್ಭಗೃಹ  ಸಮೀಪಕ್ಕೆ ಬಂದಾಗ ಅಲ್ಲಿದ್ದ ಅರ್ಚಕ ಮಹದೇವಪುರಿ ಅವರಿಗೆ ಥಳಿಸಿದ್ದಾನೆ ಎಂದು ಪೋಲೀಸರು ತಿಳಿಸಿದರು.
ಪುಷ್ಕರ ದೇವಾಲಯದ ಆಡಳಿತಾಧಿಕಾರಿ ಮಹಾವೀರ ಶರ್ಮಾ ಹೇಳುವಂತೆ ಆರೋಪಿ ಅಶೋಕ್ ಮೇಘವಾಲ್ ತಾನೊಬ್ಬ ವೈದ್ಯನೆಂದು ಹೇಳಿಕೊಂಡಿದ್ದರೂ ಆತ ಮಾನಸಿಕ ಅಸ್ವಸ್ಥನಾಗಿದ್ದಾನೆ.
ರಾಷ್ಟ್ರಪತಿಯವರ ಪತ್ನಿಗೆ ಮೊಣಕಾಲು ಸಮಸ್ಯೆ ಇದ್ದ ಕಾರಣ ರಾಷ್ಟ್ರಪತಿ ಕೋವಿಂದ್ ತಮ್ಮ ಇತ್ತೀಚಿನ ಪುಷ್ಕರ ಭೇಟಿ ವೇಳೆ ದೇವಾಲಯದ ಒಳ ಪ್ರವೇಶಿಸದೆ ಹೊರಗಿನಿಂದ ದೇವರಿಗೆ ನಮಿಸಿ ತೆರಳಿದ್ದರು. ಆದರೆ ಇದೇ ನೆಪ ಮಾಡಿಕೊಂಡ ಕೆಲ ಕಿಡಿಗೇಡಿಗಳು ರಾಷ್ಟ್ರಪತಿಗಳಿಗೆ ದೇವಾಲಯ ಪ್ರವೇಶಿಸಲು ಅವಕಾಶ ನೀಡಲಿಲ್ಲ ಎಂದು ವಾಟ್ಸ್ ಅಪ್ ನಲ್ಲಿ  ತಪ್ಪು ಸಂದೇಶ ಕಳಿಸಿ ಜನರ ದಾರಿ ತಪ್ಪಿಸುವ ಯತ್ನ ನಡೆಸಿದ್ದಾರೆ.
ಆರೋಪಿ ತನ್ನ ಕೈನಲ್ಲಿದ್ದ ಮಾರಕಾಸ್ತ್ರದಿಂದ ಅರ್ಚಕರ ಮೇಲೆ ಹಲ್ಲೆ ನಡೆಸುವ ಚಿತ್ರಗಳು ದೇವಾಲಯದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಇದೀಗ ವೈರಲ್ ಆಗಿದೆ.
ಪುಷ್ಕರದ ಈ ಘಟನೆ ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದ್ದು ದೇವಾಲಯ ಪ್ರವೇಶಿಸುವ ಪ್ರತಿ ಭಕ್ತನೂ ಲೋಹ ಪತ್ತೆ ಪರೀಕ್ಷೆ (ಮೆಟಲ್ ಡಿಟೆಕ್ಟರ್ ಟೆಸ್ಟ್) ಮೂಲಕವೇ ಸಾಗಬೇಕು ಎನ್ನುವುದು ಗಮನಾರ್ಹ ಅಂಶ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT