ರಜನಿಕಾಂತ್ 
ದೇಶ

ಸ್ಟೆರ್ಲೈಟ್ ದುರಂತ: ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಿಸಿದ ರಜನಿಕಾಂತ್

ಮಿಳುನಾಡಿನ ತೂತುಕುಡಿ ಜಿಲ್ಲೆ ಸ್ಟೆರ್ಲೈಟ್ ತಾಮ್ರ ಘಟಕದ ಕಾರ್ಯನಿರ್ವಹಣೆಯನ್ನು ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ.......

ತೂತುಕುಡಿ(ತಮಿಳುನಾಡು): ತಮಿಳುನಾಡಿನ ತೂತುಕುಡಿ ಜಿಲ್ಲೆ ಸ್ಟೆರ್ಲೈಟ್ ತಾಮ್ರ ಘಟಕದ ಕಾರ್ಯನಿರ್ವಹಣೆಯನ್ನು ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸೂಪರ್ ಸ್ಟಾರ್ ರಜನಿಕಾಂತ್ ತಲಾ  2 ಲಕ್ಷ ರೂ ಪರಿಹಾರವನ್ನು ಘೋಷಿಸಿದ್ದಾರೆ.
ನಟ, ರಾಜಕಾರಣಿ ರಜನಿಕಾಂತ್ ಬುಧವಾರ ತೂತುಕುಡಿ ಘಟನೆಯ ಗಾಯಾಳುಗಳನ್ನು ಜನರಲ್ ಆಸ್ಪತ್ರೆಯಲ್ಲಿ ಭೇಟಿಯಾದರು.
ಕಾನೂನು ಸುವ್ಯವಸ್ಥೆ  ನಿರ್ಲಕ್ಷದ ಕಾರಣ ಈ ದುರಂತ ಸಂಭವಿಸಿದೆ ಎಂದ ರಜನಿಕಾಂತ್ ", ಈ ಘಟನೆಯು ಸರ್ಕಾರದ ನಿರ್ಲಕ್ಷ್ಯವನ್ನು ತೋರುತ್ತದೆ. ನಾನು ಈ ಕುರಿತಂತೆ ಹೆಚ್ಚು ಮಾತನಾಡುವುದಿಲ್ಲ. ಆದರೆ ಸರ್ಕಾರ ಜಾಗರೂಕವಾಗಿರಬೇಕು  ಈ ಘಟನೆ ಒಂದು ದೊಡ್ಡ ಪಾಠವಾಗಿದೆ.ನಾನು ಘಟನೆಯಲ್ಲಿ ನಾವನ್ನಪ್ಪಿದ ಕುಟುಂಬಕ್ಕೆ ತಲಾ  2 ಲಕ್ಷ ರೂ. ಪರಿಹಾರ ನೀಡುತ್ತೇನೆ" ಎಂದರು.
ಮೇ.22 ರಂದು ತೂತುಕುಡಿಯಲ್ಲಿ ಸ್ಟೆರ್ಲೈಟ್ ತಾಮ್ರ ಘಟಕದ ಕಾರ್ಯನಿರ್ವಹಣೆಯನ್ನು ವಿರೋಧಿಸಿ ರೈತರು ಹಿಂಸಾತ್ಮಕ ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭದಲ್ಲಿ ನಡೆದ ಪೊಲೀಸ್‌ ಗೋಲಿಬಾರ್ ನಲ್ಲಿ 13 ಮಂದಿ ಮೃತಪಟ್ಟಿದ್ದರು. ತಾಮ್ರ ಘಟಕದಿಂದ ಅಂತರ್ಜಲ ಮಲಿನವಾಗುತ್ತಿದೆ, ಪರ್ಸರಕ್ಕೆ ಹಾನಿಯಾಗುತ್ತಿದೆ ಎಂದು ಜನತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT