ಕೇಂದ್ರ ಮಾಜಿ ಸಚಿವ ಪಿ.ಚಿದಂಬರಂ 
ದೇಶ

ಐಎನ್ಎಕ್ಸ್ ಮೀಡಿಯಾ ಹಗರಣ: ಜು.3ರವರೆಗೆ ಪಿ.ಚಿದಂಬರಂ ಬಂಧನವಿಲ್ಲ

ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಕೇಂದ್ರ ಮಾಜಿ ಸಚಿವ ಪಿ.ಚಿದಂಬರಂ ಅವರಿಗೆ ಜು.3 ವರೆಗೂ ಸಿಬಿಐ ಬಂಧನದಿಂದ ವಿನಾಯಿತಿಯನ್ನು ದೆಹಲಿ ನ್ಯಾಯಾಲಯ ಗುರುವಾರ ನೀಡಿದೆ...

ನವದೆಹಲಿ; ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಕೇಂದ್ರ ಮಾಜಿ ಸಚಿವ ಪಿ.ಚಿದಂಬರಂ ಅವರಿಗೆ ಜು.3 ವರೆಗೂ ಸಿಬಿಐ ಬಂಧನದಿಂದ ವಿನಾಯಿತಿಯನ್ನು ದೆಹಲಿ ನ್ಯಾಯಾಲಯ ಗುರುವಾರ ನೀಡಿದೆ. 
ರೂ.3,500 ಕೋಟಿ ಮೊತ್ತದ ಏರ್'ಸೆಲ್ ಮ್ಯಾಕ್ಸಿಸ್ ಮತ್ತು ರೂ.305 ಕೋಟಿ ಐಎನ್ಎಕ್ಸ್ ಮೀಡಿಯಾ ಹಗರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಹಿರಿಯ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಎರಡೂ ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿ ನಿನ್ನೆಯಷ್ಟೇ ನ್ಯಾಯಾಲಯದ ಮೊರೆ ಹೋಗಿದ್ದರು. 
ಇದರಂತೆ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಎ.ಕೆ.ಪಥಕ್ ಅವರು, ಜು.3ರವರೆಗೂ ಬಂಧನದಿಂದ ವಿನಾಯಿತಿ ನೀಡಿದ್ದು, ಚಿದಂಬರಂ ವಿರುದ್ಧ ಯಾವುದೇ ರೀತಿಯ ಒತ್ತಾಯಪೂರ್ವಕ ಕ್ರಮಗಳನ್ನು ಕೈಗೊಳ್ಳದಂತೆ ಸಿಬಿಐಗೆ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ. 
ಐಎನ್ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ವಿಚಾರಣೆ ನಡೆಸಿದ್ದ ನ್ಯಾಯಾಲಯ ಜೂ.5 ರಂದು ವಿಚಾರಣೆಗೆ ಹಾಜರಾಗುವಂತೆ ಚಿದಂಬರಂಗೆ ಸೂಚಿಸಿತ್ತು. ಜೊತೆಗೆ ಜೂ.5ರವರೆಗೆ ಚಿದಂಬರಂ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ಜಾರಿ ನಿರ್ದೇಶನಾಲಯಕ್ಕೆ ಸೂಚನೆ ನೀಡಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT