ಮುಲಾಯಂ ಸಿಂಗ್ ಹಾಗೂ ಅಪರ್ಣ ಯಾದವ್ 
ದೇಶ

'ನಾನು ಬಿಜೆಪಿ ಜತೆ ಇಲ್ಲ. ಆದ್ರೆ ರಾಮನ ಜತೆ ಇದ್ದೇನೆ': ಮುಲಾಯಂ ಸೊಸೆ ಅಪರ್ಣ

ಅಯೋಧ್ಯಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಬೆಂಬಲ ವ್ಯಕ್ತಪಡಿಸಿರುವ ಸಮಾಜವಾದಿ ಪಕ್ಷದ ಸಂಸ್ಥಾಪಕ...

ಲಖನೌ: ಅಯೋಧ್ಯಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಬೆಂಬಲ ವ್ಯಕ್ತಪಡಿಸಿರುವ ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರ ಸೊಸೆ ಅಪರ್ಣ ಯಾದವ್ ಅವರು, 'ನಾನು ಬಿಜೆಪಿ ಜತೆ ಇಲ್ಲ. ಆದ್ರೆ ರಾಮನ ಜತೆ ಇದ್ದೇನೆ' ಎಂದು ಹೇಳಿದ್ದಾರೆ.
ಬಾರಬಂಕಿಯಲ್ಲಿ ದೇವ ಶರಿಫ್ ದರ್ಗಾಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಪರ್ಣ ಯಾದವ್, ನಾನು ರಾಮ ಮಂದಿ ನಿರ್ಮಾಣ ಪರವಾಗಿದ್ದೇನೆ ಮತ್ತು ನ್ಯಾಯಾಂಗದ ಮೇಲೆ ನನಗೆ ಸಂಪೂರ್ಣ ವಿಶ್ವಾಸವಿದೆ ಎಂದಿದ್ದಾರೆ. 
ರಾಮಾಯಣದ ಪ್ರಕಾರ, ರಾಮನ ಜನ್ಮಸ್ಥಳ ಅಯೋಧ್ಯ ಆಗಿದ್ದು ಅಲ್ಲಿಯೇ ರಾಮ ಮಂದಿರ ನಿರ್ಮಾಣ ಮಾಡಬೇಕು ಎಂದು ಮುಲಾಯಂ ಸೊಸೆ ಹೇಳಿದ್ದಾರೆ.
ಇದೇ ವೇಳೆ ನೀವು ಬಿಜೆಪಿ ಜತೆ ಇದ್ದೀರಾ? ಎಂಬ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಅಪರ್ಣ, ನಾನು ಬಿಜೆಪಿ ಜೊತೆ ಇಲ್ಲ. ಆದರೆ ಶ್ರೀರಾಮನ ಜತೆ ಇದ್ದೇನೆ ಎಂದರು.
2017ರ ವಿಧಾನಸಭೆ ಚುನಾವಣೆಯಲ್ಲಿ ಎಸ್ ಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದ ಅಪರ್ಣ ಈಗ ತಮ್ಮ ಚಾಚಾ ಶಿವಪಾಲ್ ಸಿಂಗ್ ಅವರ ಪ್ರಗತಿಶೀಲ ಸಮಾಜವಾದಿ ಪಕ್ಷ ಲೋಹಿಯಾ(ಪಿಎಸ್ ಪಿಎಲ್) ಬೆಂಬಲಿಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

SCROLL FOR NEXT