ಬೆಂಕಿ ಹತ್ತಿಕೊಂಡ ಪ್ಲಾಸ್ಟಿಕ್ ಉತ್ಪನ್ನ ಘಟಕ 
ದೇಶ

ಕೇರಳ: ಪ್ಲಾಸ್ಟಿಕ್ ಘಟಕದಲ್ಲಿ ಬೆಂಕಿ, ಕಾರ್ಮಿಕರು ಅಪಾಯದಿಂದ ಪಾರು

ಮನ್ವಿಲ್ಲಾ ಸಮೀಪ ಪ್ಲಾಸ್ಟಿಕ್ ಉತ್ಪನ್ನ ಘಟಕದಲ್ಲಿ ಭಾರೀ ಪ್ರಮಾಣದ ಅಗ್ನಿ ಅವಘಡವುಂಟಾಗಿದೆ...

ತಿರುವನಂತಪುರ: ಮನ್ವಿಲ್ಲಾ ಸಮೀಪ ಪ್ಲಾಸ್ಟಿಕ್ ಉತ್ಪನ್ನ ಘಟಕದಲ್ಲಿ ಭಾರೀ ಪ್ರಮಾಣದ ಅಗ್ನಿ ಅವಘಡವುಂಟಾಗಿದೆ. ಪ್ರಾಥಮಿಕ ವರದಿಯಿಂದ ಯಾವುದೇ ಸಾವು, ನೋವು ಸಂಭವಿಸಿಲ್ಲ ಎಂದು ವರದಿಯಾಗಿದೆ.

ಹತ್ತಿದ ಬೆಂಕಿಯನ್ನು ಆರಿಸಲು ಕನಿಷ್ಠ 30 ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿದೆ. ನಿನ್ನೆ ಸಾಯಂಕಾಲ 7 ಗಂಟೆ ಸುಮಾರಿಗೆ ಅಗ್ನಿ ಅವಘಡ ಸಂಭವಿಸಿದೆ.

ಬೆಂಕಿ ಸ್ಪೋಟಗೊಂಡು ಹತ್ತಿ ಉರಿಯಲು ಆರಂಭಿಸಿದ ಕೂಡಲೇ ಪ್ಲಾಸ್ಟಿಕ್ ಘಟಕದೊಳಗಿದ್ದ ಕಾರ್ಮಿಕರು ಅಲ್ಲಿಂದ ಓಡಿ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಘಟಕದಿಂದ ಹೊರಗೆ ದಟ್ಟ ಹೊಗೆ ಸೂಸುತ್ತಿತ್ತು. ಅಗ್ನಿ ಶಾಮಕ ಸಿಬ್ಬಂದಿಗೆ ಬೆಂಕಿ ಆರಿಸಲು 4 ಗಂಟೆ ಸಮಯ ಹಿಡಿಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಹೊಗೆ ಸೇವಿಸಿ ಉಸಿರಾಡಲು ಸಾಧ್ಯವಾಗದ ಇಬ್ಬರು ಕಾರ್ಮಿಕರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಘಟಕದ ಹತ್ತಿರದಲ್ಲಿ ವಾಸಿಸುತ್ತಿದ್ದ ಜನರನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT