ಯೋಗಿ ಆದಿತ್ಯನಾಥ್ 
ದೇಶ

ಅಯೋಧ್ಯ: ದೀಪಾವಳಿಗೆ ಸಿಎಂ ಯೋಗಿಯಿಂದ ಸಿಹಿ ಸುದ್ದಿ - ಯುಪಿ ಬಿಜೆಪಿ ಅಧ್ಯಕ್ಷ

ಅಯೋಧ್ಯಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ...

ಲಖನೌ: ಅಯೋಧ್ಯಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಈ ದೀಪಾವಳಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ನಿಮಗೆ ಸಿಹಿ ಸುದ್ದಿ ನೀಡಲಿದ್ದಾರೆ ಎಂದು ಉತ್ತರ ಪ್ರದೇಶ ಬಿಜೆಪಿ ಅಧ್ಯಕ್ಷ ಮಹೇಂದ್ರನಾಥ್‌ ಪಾಂಡೆ ಅವರು ಶುಕ್ರವಾರ ಹೇಳಿದ್ದಾರೆ.
ಸಿಹಿ ಸುದ್ದಿ ಬಗ್ಗೆ ಹೆಚ್ಚಿನ ವಿವರ ನೀಡಲು ನಿರಾಕರಿಸಿದ ಪಾಂಡೆ ಅವರು, ಸಿಎಂ ಒಬ್ಬ ಮಹಾನ್ ಸಂತರಾಗಿದ್ದು, ಪ್ರಮುಖ ನಿರ್ಧಾರಗಳನ್ನು ಯೋಗಿ ಆದಿತ್ಯನಾಥ್‌ ಅವರೇ ಪ್ರಕಟಿಸುವುದೇ ಸೂಕ್ತ' ಎಂದರು.
ದೀಪಾವಳಿ ಬರಲಿ. ಅಯೋಧ್ಯಯ ಬಗ್ಗೆ ನಿಮಗೆಲ್ಲ ಸಂತೋಷದ ಸುದ್ದಿ ಸಿಗಲಿದೆ ಎಂದು ಪಾಂಡೆ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಅಯೋಧ್ಯ ರಾಮ ಜನ್ಮಭೂಮಿ ವಿವಾದದಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ 2019ರ ಜನವರಿಗೆ ಮುಂದೂಡಿದ ಎರಡೇ ದಿನಗಳಲ್ಲಿ ಪಾಂಡೆ ಈ ಹೇಳಿಕೆ ನೀಡಿರುವುದು ಹೆಚ್ಚುಮಹತ್ವ ಪಡೆದುಕೊಂಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT