ತೇಜ್ ಪ್ರತಾಪ್, ಐಶ್ವರ್ಯ ರೈ 
ದೇಶ

ಮದುವೆಯಾದ ಆರು ತಿಂಗಳಲ್ಲೇ ವಿಚ್ಚೇದನ ಅರ್ಜಿ ಸಲ್ಲಿಸಿದ ಲಾಲೂ ಪುತ್ರ ತೇಜ್ ಪ್ರತಾಪ್

ಮದುವೆಯಾದ ಆರು ತಿಂಗಳಲ್ಲೇ ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಹಿರಿಯ ಮಗ ತೇಜ್ ಪ್ರತಾಪ್ ಯಾದವ್ , ತನ್ನ ಪತ್ನಿಯಿಂದ ವಿಚ್ಚೇದನ ಕೋರಿ ಪಾಟ್ನಾದ ಸಿವಿಲ್ ನ್ಯಾಯಾಲದಲ್ಲಿ ವಿಚ್ಚೇದನ ಅರ್ಜಿ ದಾಖಲಿಸಿದ್ದಾರೆ.

ಪಾಟ್ನಾ : ಮದುವೆಯಾದ ಆರು ತಿಂಗಳಲ್ಲೇ  ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್  ಹಿರಿಯ ಮಗ ತೇಜ್ ಪ್ರತಾಪ್ ಯಾದವ್  , ತನ್ನ ಪತ್ನಿಯಿಂದ ವಿಚ್ಚೇದನ ಕೋರಿ ಪಾಟ್ನಾದ ಸಿವಿಲ್ ನ್ಯಾಯಾಲದಲ್ಲಿ  ವಿಚ್ಚೇದನ ಅರ್ಜಿ ದಾಖಲಿಸಿದ್ದಾರೆ.

ಕೆಲ ದಿನಗಳ ಹಿಂದೆಯೇ ತೇಜ್ ಪ್ರತಾಪ್  ವಿಚ್ಚೇದನ ಅರ್ಜಿ ಸಲ್ಲಿಸಿದ್ದಾರೆ. ಆದರೆ, ತಾಂತ್ರಿಕ ಸಮಸ್ಯೆಯಿಂದಾಗಿ ಇಂದು ಮತ್ತೆ ಹೊಸದಾಗಿ ಅರ್ಜಿ ಸಲ್ಲಿಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಆದಾಗ್ಯೂ, ಈ ಬಗ್ಗೆ ಪ್ರತಿಕ್ರಿಯೆ ನೀಡಲು ತೇಜ್ ಪ್ರತಾಪ್ ಯಾದವ್ ಕುಟುಂಬ ಸದಸ್ಯರು ನಿರಾಕರಿಸಿದ್ದಾರೆ.

ಬಹುಕೋಟಿ ಮೇವು ಹಗರಣದಲ್ಲಿ ಲಾಲೂ ಪ್ರಸಾದ್ ಯಾದವ್ ರಾಂಚಿಯ  ಜೈಲಿನಲ್ಲಿದ್ದಾರೆ.  ತೇಜ್ ಪ್ರತಾಪ್ ಪತ್ನಿ ಐಶ್ವರ್ಯ ತಂದೆ ಕೂಡಾ ಹಾಲಿ ಆರ್ ಜೆಡಿ ಶಾಸಕರಾಗಿದ್ದಾರೆ. ಮೇ ತಿಂಗಳಲ್ಲಿ ನಡೆದ ಅದ್ದೂರಿ ವಿವಾಹ ಸಮಾರಂಭದಲ್ಲಿ ಅನೇಕ ಗಣ್ಯರು ಪಾಲ್ಗೊಂಡಿದ್ದರು.

ತೇಜ್ ಪ್ರತಾಪ್  ವೈಶಾಲಿ ಜಿಲ್ಲೆಯ ಮಾನ್ಹಾ ಕ್ಷೇತ್ರದ ಶಾಸಕರಾಗಿದ್ದು, ಮಹಾಮೈತ್ರಿ ಸರ್ಕಾರದಲ್ಲಿ ತೇಜ್ ಪ್ರತಾಪ್  ಆರೋಗ್ಯ ಸಚಿವರಾಗಿದ್ದರು. ಲಾಲೂ ಪ್ರಸಾದ್ ಯಾದವ್  ಅನುಪಸ್ಥಿತಿಯಲ್ಲಿ  ಪಕ್ಷ ಮುನ್ನಡೆಸುತ್ತಿರುವ ತೇಜಸ್ವಿ ಯಾದವ್ ಜೊತೆಗೆ  ತೇಜ್ ಪ್ರತಾಪ್ ಉತ್ತಮ  ಸಂಬಂಧ ಹೊಂದಿಲ್ಲ ಎಂಬುದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT