ಯೋಗಿ ಆದಿತ್ಯನಾಥ್ 
ದೇಶ

ಪಟೇಲರ ಪ್ರತಿಮೆಯಂತೆ ಯುಪಿಯಲ್ಲಿ 100 ಅಡಿ ಎತ್ತರದ ಶ್ರೀರಾಮನ ಪ್ರತಿಮೆ ಪ್ರತಿಷ್ಠಾಪನೆಗೆ ಸಿಎಂ ಯೋಗಿ ಚಿಂತನೆ!

ಗುಜರಾತ್ ನಲ್ಲಿ ಉಕ್ಕಿನ ಮನುಷ್ಯ ಖ್ಯಾತಿಯ ಸರ್ದಾರ್ ವಲ್ಲಭಾಯ್ ಪಟೇಲರ ಪ್ರತಿಮೆ ಪ್ರತಿಷ್ಠಾಪನೆಯಂತೆ ಉತ್ತರಪ್ರದೇಶದಲ್ಲಿ 100 ಅಡಿ ಎತ್ತರದ ಶ್ರೀರಾಮನ ಪ್ರತಿಮೆ...

ಗುಜರಾತ್ ನಲ್ಲಿ ಉಕ್ಕಿನ ಮನುಷ್ಯ ಖ್ಯಾತಿಯ ಸರ್ದಾರ್ ವಲ್ಲಭಾಯ್ ಪಟೇಲರ ಪ್ರತಿಮೆ ಪ್ರತಿಷ್ಠಾಪನೆಯಂತೆ ಉತ್ತರಪ್ರದೇಶದಲ್ಲಿ 100 ಅಡಿ ಎತ್ತರದ ಶ್ರೀರಾಮನ ಪ್ರತಿಮೆ ಪ್ರತಿಷ್ಠಾಪನೆ ಮಾಡಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಚಿಂತನೆ ನಡೆಸಿದ್ದಾರೆ. 
ಅಯೋಧ್ಯೆ ರಾಮ ಜನ್ಮಭೂಮಿ ಒಡೆತನದ ವಿವಾದದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ 2019ರ ಜನವರಿಗೆ ಮುಂದೂಡಿದ ಎರಡೇ ದಿನಗಳ ತರುವಾಯ ಪಾಂಡೆ ಈ ಹೇಳಿಕೆ ನೀಡಿರುವುದು ಗಮನಾರ್ಹವಾಗಿದೆ. 
ಅಯೋಧ್ಯೆಗೆ ಸಂಬಂಧಿಸಿದಂತೆ ಈ ದೀಪಾವಳಿಗೆ ನೀವು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಂದ ಕೆಲವು ಮಹತ್ವದ ಪ್ರಕಟನೆಗಳನ್ನು ಕೇಳಬಹುದಾಗಿದೆ ಎಂದು ಉತ್ತರ ಪ್ರದೇಶ ಬಿಜೆಪಿ ಮುಖ್ಯಸ್ಥ ಮಹೇಂದ್ರನಾಥ್ ಪಾಂಡೆ ಹೇಳಿದ್ದಾರೆ. 
ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ನಿರಾಕರಿಸಿದ ಪಾಂಡೆ, ಅದನ್ನು ಮಹಾನ್ ಸಂತ, ಯೋಗಿ ಆದಿತ್ಯನಾಥ್ ಅವರೇ ಪ್ರಕಟಿಸುವುದು ಸೂಕ್ತ ಎಂದು ಹೇಳಿದ್ದಾರೆ. 
ಸಿಎಂ ಯೋಗಿ ಆದಿತ್ಯನಾಥ್ ಅವರು ಶಾಂತಿ ಮತ್ತು ಸಹೋದರತೆಗಾಗಿ ಅಯೋಧ್ಯೆ ವಿವಾದವನ್ನು ಕ್ಲಪ್ತವಾಗಿ ಇತ್ಯರ್ಥಪಡಿಸುವ ಅಗತ್ಯವಿದೆ ಎಂದು ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

Udaipur: ನಿಜಕ್ಕೂ ಅಚ್ಚರಿ, 55ನೇ ವಯಸ್ಸಿನಲ್ಲಿ 17ನೇ ಮಗುವಿಗೆ ತಾಯಿಯಾದ ಮಹಿಳೆ!

SCROLL FOR NEXT