ಶಶಿ ತರೂರ್ 
ದೇಶ

ಮೋದಿಯನ್ನು ಚೇಳಿಗೆ ಹೋಲಿಸಿದ್ದ ಶಶಿ ತರೂರ್ ವಿರುದ್ಧ ಮಾನಹಾನಿ ಪ್ರಕರಣ ದಾಖಲು!

ಪ್ರಧಾನಿ ನರೇಂದ್ರ ಮೋದಿಯವರನ್ನು "ಚೇಳು" ಎಂದುದ್ದ ಕಾಂಗ್ರೆಸ್ ನಾಯಕ ಶಶಿ ತರೂರ್ ವಿರುದ್ಧ ದೆಹಲಿ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಾಗಿದೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರನ್ನು "ಚೇಳು" ಎಂದುದ್ದ ಕಾಂಗ್ರೆಸ್ ನಾಯಕ ಶಶಿ ತರೂರ್ ವಿರುದ್ಧ ದೆಹಲಿ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಾಗಿದೆ.
ದೆಹಲಿಯ ಭಾರತೀಯ ಜನತಾ ಪಕ್ಷದ ನಾಯಕ ರಾಜೀವ್ ಬಬ್ಬರ್ ಮೊಕದ್ದಮೆ ದಾಖಲಿಸಿದ್ದು ಹಿಂದೂಗಳ ಧಾರ್ಮಿಕ ಭಾವನೆಗೆ ತರೂರ್ ಧಕ್ಕೆ ಉಂಟು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
"ನಾನೊಬ್ಬ ಶಿವಭಕ್ತನಾಗಿದ್ದೇನೆ.ತರೂರ್ ಕೋಟಿಗಟ್ಟಲೆ ಭಕ್ತರ ಭಾವನೆಗಳನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಲ್ಲದೆ ಅವರ ಭಾವನೆಗೆ ಘಾಸಿಯುಂಟು ಂಆಡಿದ್ದಾರೆ" ದೂರಿನಲ್ಲಿ ತಿಳಿಸಲಾಗಿದೆ.
ಮಾನನಷ್ಟಕ್ಕೆ ಸಂಬಂಧಿಸಿದ ಭಾರತೀಯ ದಂಡ ಸಂಹಿತೆಯ  ಸೆಕ್ಷನ್ 499 ಮತ್ತು 500 ರ ಅಡಿಯಲ್ಲಿ ದೂರು ಸಲ್ಲಿಸಲಾಗಿದೆ.
ಕಳೆದ ವಾರ ಬೆಂಗಳೂರಿನಲ್ಲಿ ನಡೆದಿದ್ದ ಬೆಂಗಳೂರು ಸಾಹಿತ್ಯೋತ್ಸವದಲ್ಲಿ ಭಾಗವಹಿಸಿದ್ದ ಶಶಿ ತರೂರ್ "ಆರ್.ಎಸ್.ಎಸ್.ಪಾಲಿಗೆ ನರೇಂದ್ರ ಮೋದಿ ಶಿವಲಿಂಗದ ಮೇಲಿನ ಚೇಳಿನಂತೆ ಅದನ್ನು ಬರಿಗೈನಲ್ಲಿ ಸರಿಸಲು ಸಾಧ್ಯವಿಲ್ಲ, ಚಪ್ಪಲಿಯಿಂದ ಹೊಡೆಯಲೂ ಆಗುವುದಿಲ್ಲ" ಎಂದಿದ್ದರು.ಅಲ್ಲದೆ ಮೋದಿಯವರನ್ನು ನಿಯಂತ್ರಿಸಲಾಗದ ಆರ್ ಎಸ್ ಎಸ್ ನಾಯಕರೊಬ್ಬರು ಈ ಮಾತು ಹೇಳಿದ್ದಾರೆ ಎಂದೂ ಉಲ್ಲೇಖಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT