ಚಮೋಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಸ್ವಾತಿ ಭಡೌರಿಯಾ 
ದೇಶ

ಅಂಗನವಾಡಿಗೆ ತಮ್ಮದೇ ಮಗುವನ್ನು ಸೇರಿಸಿ ಮಾದರಿಯಾದ ಮ್ಯಾಜಿಸ್ಟ್ರೇಟ್!

ಉತ್ತರಾಖಂಡದ ಜಿಲ್ಲಾ ಮ್ಯಾಜಿಸ್ಟ್ರೇಟ್ ತಮ್ಮ ಪುತ್ರನನ್ನೇ ಅಂಗನವಾಡಿಗೆ ಸೇರಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.

ಡೆಹ್ರಾಡೂನ್: ಉತ್ತರಾಖಂಡದ ಜಿಲ್ಲಾ ಮ್ಯಾಜಿಸ್ಟ್ರೇಟ್ ತಮ್ಮ ಪುತ್ರನನ್ನೇ ಅಂಗನವಾಡಿಗೆ ಸೇರಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.
ಉನ್ನತ ಹುದ್ದೆಯಲ್ಲಿರುವವರು ಯಾವತ್ತೂ ತಮ್ಮ ಮಕ್ಕಳನ್ನು ಹೈಫೈ ಶಾಲೆಗಳಿಗೆ ಸೇರಿಸುವುದು ಸಾಮಾನ್ಯ. ಆದರೆ ಅದಕ್ಕೆ ಅಪವಾದವೆಂಬಂತೆ ಜಿಲ್ಲಾಧಿಕಾರಿಯೊಬ್ಬರು ತಮ್ಮ ಮಗನನ್ನು ಅಂಗನವಾಡಿಗೆ ಸೇರಿಸಿದ್ದಾರೆ. ಉತ್ತರಾಖಂಡ ರಾಜ್ಯದ ಚಮೋಲಿ ಜಿಲ್ಲೆಯ  ಮ್ಯಾಜಿಸ್ಟ್ರೇಟ್ ಸ್ವಾತಿ ಭಡೌರಿಯಾ ಅವರು ತಮ್ಮ ಎರಡೂವರೆ ವರ್ಷದ ಮಗ ಅಭ್ಯುದಯ್ ನನ್ನು, ದುಬಾರಿ ಶಾಲೆಯ ಬದಲು ಗೋಪೇಶ್ವರ ಎಂಬ ಗ್ರಾಮದ ಅಂಗನವಾಡಿಗೆ ಸೇರಿಸಿದ್ದಾರೆ.
ಸರ್ಕಾರ ನಡೆಸುತ್ತಿರುವ ಅಂಗನವಾಡಿಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇದ್ದು, ಮಕ್ಕಳ ವಿದ್ಯಾಭ್ಯಾಸವೂ ಅಷ್ಟಕ್ಕಷ್ಟೇ ಎಂಬ ತಪ್ಪು ಕಲ್ಪನೆಯನ್ನು ತೊಡೆದು ಹಾಕಲು ತಾವು ಈ ನಿರ್ಧಾರ ಕೈಗೊಂಡಿರುವುದಾಗಿ ಸ್ವಾತಿ ಅವರು ಹೇಳಿದ್ದಾರೆ. ಅಂಗನವಾಡಿಗಳಲ್ಲಿ ಶಿಕ್ಷಣ, ಆಟೋಟ ಹಾಗೂ ಊಟ-ತಿಂಡಿ ಎಲ್ಲವೂ ಒಟ್ಟೋಟ್ಟಾಗಿರುತ್ತದೆ. ಅಂಗನವಾಡಿಗಳ ಕುರಿತ ತಪ್ಪು ಕಲ್ಪನೆ ಸರಿಯಲ್ಲ. ತನ್ನ ಮಗ ಇತರೊಂದಿಗೆ ಹಂಚುವ, ಸಹಕರಿಸುವ ಅಭ್ಯಾಸ ಬೆಳೆಸಿಕೊಳ್ಳಲಿ ಎಂಬ ಉದ್ದೇಶದಿಂದ ಆ ರೀತಿಯ ವಾತಾವರಣವಿರುವಲ್ಲಿ ಸೇರಿಸಿವುದಾಗಿ ಸ್ವಾತಿ ಹೇಳಿದ್ದಾರೆ.
ಅಂಗನವಾಡಿಯಲ್ಲಿ ಇತರ ಮಕ್ಕಳ ಜೊತೆ ಆತ ಅಂಗನವಾಡಿಯನ್ನು ತಮ್ಮ ಮಗ ಬಹಳವಾಗಿ ಆನಂದಿಸುತ್ತಾನೆ. ಅಂಗನವಾಡಿಗಳ ಬಗ್ಗೆ ನಮಗಿರುವ ದೃಷ್ಟಿಕೋನ ಕೂಡಾ ಬದಲಾಗಬೇಕು  ಎಂದು ಸ್ವಾತಿ  ಹೇಳಿದ್ದಾರೆ. ಸ್ವಾತಿ ಪತಿ, ನಿತಿನ್ ಭಡೌರಿಯಾ ಕೂಡಾ ಐಎಎಸ್ ಅಧಿಕಾರಿಯಾಗಿದ್ದು, ಅಲ್ಮೋರಾ ಜಿಲ್ಲಾಧಿಕಾರಿಯಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT