ಚಮೋಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಸ್ವಾತಿ ಭಡೌರಿಯಾ 
ದೇಶ

ಅಂಗನವಾಡಿಗೆ ತಮ್ಮದೇ ಮಗುವನ್ನು ಸೇರಿಸಿ ಮಾದರಿಯಾದ ಮ್ಯಾಜಿಸ್ಟ್ರೇಟ್!

ಉತ್ತರಾಖಂಡದ ಜಿಲ್ಲಾ ಮ್ಯಾಜಿಸ್ಟ್ರೇಟ್ ತಮ್ಮ ಪುತ್ರನನ್ನೇ ಅಂಗನವಾಡಿಗೆ ಸೇರಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.

ಡೆಹ್ರಾಡೂನ್: ಉತ್ತರಾಖಂಡದ ಜಿಲ್ಲಾ ಮ್ಯಾಜಿಸ್ಟ್ರೇಟ್ ತಮ್ಮ ಪುತ್ರನನ್ನೇ ಅಂಗನವಾಡಿಗೆ ಸೇರಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.
ಉನ್ನತ ಹುದ್ದೆಯಲ್ಲಿರುವವರು ಯಾವತ್ತೂ ತಮ್ಮ ಮಕ್ಕಳನ್ನು ಹೈಫೈ ಶಾಲೆಗಳಿಗೆ ಸೇರಿಸುವುದು ಸಾಮಾನ್ಯ. ಆದರೆ ಅದಕ್ಕೆ ಅಪವಾದವೆಂಬಂತೆ ಜಿಲ್ಲಾಧಿಕಾರಿಯೊಬ್ಬರು ತಮ್ಮ ಮಗನನ್ನು ಅಂಗನವಾಡಿಗೆ ಸೇರಿಸಿದ್ದಾರೆ. ಉತ್ತರಾಖಂಡ ರಾಜ್ಯದ ಚಮೋಲಿ ಜಿಲ್ಲೆಯ  ಮ್ಯಾಜಿಸ್ಟ್ರೇಟ್ ಸ್ವಾತಿ ಭಡೌರಿಯಾ ಅವರು ತಮ್ಮ ಎರಡೂವರೆ ವರ್ಷದ ಮಗ ಅಭ್ಯುದಯ್ ನನ್ನು, ದುಬಾರಿ ಶಾಲೆಯ ಬದಲು ಗೋಪೇಶ್ವರ ಎಂಬ ಗ್ರಾಮದ ಅಂಗನವಾಡಿಗೆ ಸೇರಿಸಿದ್ದಾರೆ.
ಸರ್ಕಾರ ನಡೆಸುತ್ತಿರುವ ಅಂಗನವಾಡಿಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇದ್ದು, ಮಕ್ಕಳ ವಿದ್ಯಾಭ್ಯಾಸವೂ ಅಷ್ಟಕ್ಕಷ್ಟೇ ಎಂಬ ತಪ್ಪು ಕಲ್ಪನೆಯನ್ನು ತೊಡೆದು ಹಾಕಲು ತಾವು ಈ ನಿರ್ಧಾರ ಕೈಗೊಂಡಿರುವುದಾಗಿ ಸ್ವಾತಿ ಅವರು ಹೇಳಿದ್ದಾರೆ. ಅಂಗನವಾಡಿಗಳಲ್ಲಿ ಶಿಕ್ಷಣ, ಆಟೋಟ ಹಾಗೂ ಊಟ-ತಿಂಡಿ ಎಲ್ಲವೂ ಒಟ್ಟೋಟ್ಟಾಗಿರುತ್ತದೆ. ಅಂಗನವಾಡಿಗಳ ಕುರಿತ ತಪ್ಪು ಕಲ್ಪನೆ ಸರಿಯಲ್ಲ. ತನ್ನ ಮಗ ಇತರೊಂದಿಗೆ ಹಂಚುವ, ಸಹಕರಿಸುವ ಅಭ್ಯಾಸ ಬೆಳೆಸಿಕೊಳ್ಳಲಿ ಎಂಬ ಉದ್ದೇಶದಿಂದ ಆ ರೀತಿಯ ವಾತಾವರಣವಿರುವಲ್ಲಿ ಸೇರಿಸಿವುದಾಗಿ ಸ್ವಾತಿ ಹೇಳಿದ್ದಾರೆ.
ಅಂಗನವಾಡಿಯಲ್ಲಿ ಇತರ ಮಕ್ಕಳ ಜೊತೆ ಆತ ಅಂಗನವಾಡಿಯನ್ನು ತಮ್ಮ ಮಗ ಬಹಳವಾಗಿ ಆನಂದಿಸುತ್ತಾನೆ. ಅಂಗನವಾಡಿಗಳ ಬಗ್ಗೆ ನಮಗಿರುವ ದೃಷ್ಟಿಕೋನ ಕೂಡಾ ಬದಲಾಗಬೇಕು  ಎಂದು ಸ್ವಾತಿ  ಹೇಳಿದ್ದಾರೆ. ಸ್ವಾತಿ ಪತಿ, ನಿತಿನ್ ಭಡೌರಿಯಾ ಕೂಡಾ ಐಎಎಸ್ ಅಧಿಕಾರಿಯಾಗಿದ್ದು, ಅಲ್ಮೋರಾ ಜಿಲ್ಲಾಧಿಕಾರಿಯಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ಉಚ್ಚಾಟಿತ AIADMK ಹಿರಿಯ ನಾಯಕ ಸೆಂಗೊಟ್ಟೈಯನ್ ನಾಳೆ ವಿಜಯ್ ಭೇಟಿ; TVK ಸೇರುವ ಸಾಧ್ಯತೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

Punishment: 5 ವರ್ಷದ ಬಾಲಕನನ್ನು ಮರಕ್ಕೆ ನೇತು ಹಾಕಿದ ಶಿಕ್ಷಕಿ!

SCROLL FOR NEXT