ಸಾಧ್ವಿ ಪ್ರಾಚಿ 
ದೇಶ

ಏನೇ ಆಗಲಿ ಡಿ.6ರಂದು ರಾಮ ಮಂದಿರಕ್ಕೆ ಶಂಕುಸ್ಥಾಪನೆ ಮಾಡಲಿದ್ದೇವೆ: ಸಾಧ್ವಿ ಪ್ರಾಚಿ

ಸುಪ್ರೀಂ ಕೋರ್ಟ್ ಅಯೋಧ್ಯೆ ಪ್ರಕರಣದ ವಿಚಾರಣೆಯನ್ನು 2019ರ ಜನವರಿಗೆ ಮುಂದೂಡಿದ್ದರಿಂದ ಬೇಸರಗೊಂಡಿರುವ ವಿಶ್ವ ಹಿಂದೂ ಪರಿಷತ್ ನ ಸಾಧ್ವಿ ಪ್ರಾಚಿ ಏನೇ ಆಗಲಿ...

ನವದೆಹಲಿ: ಸುಪ್ರೀಂ ಕೋರ್ಟ್ ಅಯೋಧ್ಯೆ ಪ್ರಕರಣದ ವಿಚಾರಣೆಯನ್ನು 2019ರ ಜನವರಿಗೆ ಮುಂದೂಡಿದ್ದರಿಂದ ಬೇಸರಗೊಂಡಿರುವ ವಿಶ್ವ ಹಿಂದೂ ಪರಿಷತ್ ನ ಸಾಧ್ವಿ ಪ್ರಾಚಿ ಏನೇ ಆಗಲಿ ಡಿಸೆಂಬರ್ 6ರಂದು ರಾಮಮಂದಿರಕ್ಕೆ ಶಂಕುಸ್ಥಾಪನೆ ಮಾಡಲಿದ್ದೇವೆ ಎಂದರು. 
ಸಾಧ್ವಿ ಪ್ರಾಚಿ ಅವರು ರಾಮಮಂದಿರ ನಿರ್ಮಾಣಕ್ಕೆ ಯಾರ ನೆರವೂ ಬೇಡ ಎಂದು ತಿಳಿಸಿದ್ದಾರೆ. ಶ್ರೀರಾಮಚಂದ್ರರ ಮಂದಿರವನ್ನು ಧಾಂ ಧೂಂ ಎಂದು ನಿರ್ಮಾಣ ಮಾಡಲಾಗುವುದು ಎಂದರು. 
ಮುಂದಿನ ತಿಂಗಳ 6ರಂದು ನಾವು ಶಿಲಾನ್ಯಾಸ ಮಾಡಲಿದ್ದೇವೆ. ಹಿಂದೂಸ್ಥಾನದಲ್ಲಿರುವ ಹಿಂದೂಗಳನ್ನು ಅಯೋಧ್ಯೆಗೆ ಬರಹೇಳಿ. ರಾಮಮಂದಿರ ಘೋಷಣೆ ಮಾಡಿ ಎಂದು ಪ್ರಾಚಿ ಹೇಳಿದ್ದಾರೆ. 
ಅಗತ್ಯ ಬಿದ್ದಲ್ಲಿ 1992ರ ಶೈಲಿಯಲ್ಲಿ ಇನ್ನೊಂದು ಆಂದೋಲನಕ್ಕೆ ಚಾಲನೆ ನೀಡಲಾಗುವುದು ಎಂದು ಆರ್ಎಸ್ಎಸ್ ನ ಮಹಾ ಕಾರ್ಯದರ್ಶಿ ಭಯ್ಯಾಜಿ ಜೋಶಿ ಹೇಳಿದ ಬೆನ್ನಲ್ಲೇ ಪ್ರಾಚಿ ಈ ಹೇಳಿಕೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

Encounter: ಮಹಾರಾಷ್ಟ್ರ-ಛತ್ತೀಸ್‌ಗಢ ಗಡಿಯಲ್ಲಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ನಕ್ಸಲೀಯರ ಹತ್ಯೆ!

SCROLL FOR NEXT