'ಗೇಟ್' ತೆರೆದರೆ ಮಾತ್ರ ಕೈ ಸೇರಲಿದೆ ಇಂಜಿನಿಯರಿಂಗ್ ಪದವಿ 
ದೇಶ

ಎಕ್ಸಿಟ್ ಪರೀಕ್ಷೆ: 'ಗೇಟ್' ತೆರೆದರೆ ಮಾತ್ರ ಕೈ ಸೇರಲಿದೆ ಇಂಜಿನಿಯರಿಂಗ್ ಪದವಿ!

ಪ್ರತಿ ವರ್ಷವೂ 3,00 ಇಂಜಿನಿಯರಿಂಗ್ ಕಾಲೇಜುಗಳಿಂದ ಹೊರಬರುವ ಇಂಜಿನಿಯರ್ ಗಳ ಸಂಖ್ಯೆ 7 ಲಕ್ಷ ತಲುಪಿದ್ದು, ಇಂಜಿನಿಯರಿಂಗ್ ಪದವೀಧರರಿಗೆ ಉದ್ಯೋಗ ಸಿಗುವುದೇ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ.

ಬೆಂಗಳೂರು: ಪ್ರತಿ ವರ್ಷವೂ 3,00 ಇಂಜಿನಿಯರಿಂಗ್ ಕಾಲೇಜುಗಳಿಂದ ಹೊರಬರುವ ಇಂಜಿನಿಯರ್ ಗಳ ಸಂಖ್ಯೆ 7 ಲಕ್ಷ ತಲುಪಿದ್ದು, ಇಂಜಿನಿಯರಿಂಗ್ ಪದವೀಧರರಿಗೆ ಉದ್ಯೋಗ ಸಿಗುವುದೇ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಈ ಬೆಳವಣಿಗೆಯನ್ನು ಗಮನಿಸಿರುವ ತಾಂತ್ರಿಕ ವಿದ್ಯಾಭ್ಯಾಸಕ್ಕಾಗಿ ಇರುವ ಅಖಿಲ ಭಾರತೀಯ ಪರಿಷತ್ (ಎಐಸಿಟಿಇ) ಗೇಟ್ ಪರೀಕ್ಷೆಯಲ್ಲಿ ತೇರ್ಗಡೆಗೊಂಡವರಿಗೆ ಮಾತ್ರವೇ ಇಂಜಿನಿಯರಿಂಗ್ ಪದವಿ ನೀಡುವುದಕ್ಕೆ ನಿರ್ಧರಿಸಿದೆ. 
2019-2020 ರಿಂದ ತಾಂತ್ರಿಕ ಕೋರ್ಸ್ ಗಳನ್ನು ಓದುವ ವಿದ್ಯಾರ್ಥಿಗಳಿಗೆ ಈ ನಿಯಮ ಅನ್ವಯವಾಗಲಿದ್ದು, ಗ್ರಾಜ್ಯೂಯೇಟ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಇಂಜಿನಿಯರಿಂಗ್ (ಗೇಟ್) ಪರೀಕ್ಷೆಯನ್ನು ತೇರ್ಗಡೆಗೊಳಿಸಿದವರಿಗಷ್ಟೇ ಇನ್ನು ಮುಂದಿನ ದಿನಗಳಲ್ಲಿ ಇಂಜಿನಿಯರಿಂಗ್ ಪದವಿ ಕೈಗೆ ಸೇರಲಿದೆ. ಗೇಟ್ ಪರೀಕ್ಷೆಯಲ್ಲಿ ತೇರ್ಗಡೆಯಾಗದವರು ಮತ್ತೊಮ್ಮೆ ಗೇಟ್ ಪರೀಕ್ಷೆ ಬರೆಯಬೇಕಾಗುತ್ತದೆ. 
ಎಐಟಿಇ ಸಭೆಯಲ್ಲಿ ಈ ನಿರ್ಣಯಕ್ಕೆ ಬರಲಾಗಿದ್ದು, ಒಮ್ಮತ ಮೂಡಿದ ಬಳಿಕ ಈ ಕುರಿತು ಅಧಿಕೃತ ಆದೇಶ ಹೊರಡಿಸಲಾಗುತ್ತದೆ. ಎಐಸಿಟಿಇ ನಿರ್ಧಾರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಕೆಲವರು ಈ ನಿರ್ಧಾರವನ್ನು ಸ್ವಾಗತಿಸಿದ್ದರೆ, ಇನ್ನೂ ಕೆಲವರು ಇದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ ಎಂದು ಹೇಳಿದ್ದಾರೆ. ಆದರೆ ವಿದ್ಯಾರ್ಥಿಗಳು ಮಾತ್ರ ಈ ನಿರ್ಣಯವನ್ನು ವಿರೋಧಿಸುತ್ತಿದ್ದಾರೆ.
ಪದವಿಯ ಅಂತಿಮ ವರ್ಷದಲ್ಲಿ ಉದ್ಯೋಗಕ್ಕೆ ಆಯ್ಕೆಯಾದವರು, ಒಂದು ವೇಳೆ ಗೇಟ್ ಪರೀಕ್ಷೆಯಲ್ಲಿ ತೇರ್ಗಡೆಯಾಗದೇ ಇದ್ದರೆ ಪರಿಸ್ಥಿತಿ ಏನು ಎಂದು ಕಾಲೇಜಿನ ಪ್ರಾಂಶುಪಾಲರು ಎಐಟಿಇ ನಿರ್ಣಯವನ್ನು ಪ್ರಶ್ನಿಸಿದ್ದಾರೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT