ಪತ್ರಕರ್ತರ ವಾಹನದ ಮೇಲೆ ದಾಳಿ ನಡೆಸುತ್ತಿರುವ ಪ್ರತಿಭಟನಾಕಾರರು(ಸಂಗ್ರಹ ಚಿತ್ರ) 
ದೇಶ

ಶಬರಿಮಲೆ ಪ್ರತಿಭಟನೆ ಯೋಜಿತ, ನಮ್ಮ ಪಕ್ಷದ 'ಅಜೆಂಡಾ': ಕೇರಳ ಬಿಜೆಪಿ ಅಧ್ಯಕ್ಷ

ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಯೋಜಿತ...

ಕೊಝಿಕೋಡ್: ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಯೋಜಿತ ಮತ್ತು ನಮ್ಮ ಪಕ್ಷದ ಅಜೆಂಡಾದ ಭಾಗವಾಗಿ ಆಯೋಜಿಸಲಾಗಿತ್ತು ಎಂದು ಕೇರಳ ಬಿಜೆಪಿ ಸೋಮವಾರ ಒಪ್ಪಿಕೊಂಡಿದೆ.
ಕೇರಳ ಬಿಜೆಪಿ ಅಧ್ಯಕ್ಷ ಶ್ರೀಧರನ್ ಪಿಳ್ಳೈ ಅವರು ಯುವ ಮೋರ್ಚಾ ಸಭೆಯಲ್ಲಿ ಮಾತನಾಡಿದ ಆಡಿಯೋ ಈಗ ಬಹಿರಂಗವಾಗಿದ್ದು, 10ರಿಂದ 50 ವರ್ಷದ ಮಹಿಳೆಯರು ಅಯ್ಯಪ್ಪ,ಸ್ವಾಮಿ ದೇವಸ್ಥಾನ ಪ್ರವೇಶಿಸದಂತೆ ತಡೆಯುವ ಬಗ್ಗೆ ದೇಗುಲದ ತಂತ್ರಿ ನನ್ನೊಂದಿಗೆ ಚರ್ಚಿಸಿದ್ದರು ಎಂದು ಹೇಳಿಕೊಂಡಿದ್ದಾರೆ.
ಅಕ್ಟೋಬರ್ 17ರಿಂದ ಅಕ್ಟೋಬರ್ 22ರ ವರೆಗೆ ನಡೆದ ಪ್ರತಿಭಟನೆ ಯೋಜಿತ ಮತ್ತು ಅದನ್ನು ಕಾರ್ಯರೂಪಕ್ಕೆ ತಂದಿದ್ದು ಬಿಜೆಪಿ. ಈ ಸಂಬಂಧ ನಾವು ಒಂದು ಅಜೆಂಡಾವನ್ನು ಮಂಡಿಸಿದ್ದೇವು. ಅದನ್ನು ನಮ್ಮ ಕಾರ್ಯಕರ್ತರು ಒಪ್ಪಿಕೊಂಡರು ಎಂದು ಪಿಳೈ ಹೇಳಿದ್ದಾರೆ.
ನಿರ್ಧಿಷ್ಟ ಸ್ಥಳಗಳಲ್ಲಿ ಕ್ಯಾಂಪ್ ಮಾಡಲು ಇಬ್ಬರು ರಾಜ್ಯ ಪ್ರಧಾನ ಕಾರ್ಯದರ್ಶಿಗಳನ್ನು ನಿಯೋಜಿಸಲಾಗಿತ್ತು ಮತ್ತು ಅವರು ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಮಹಿಳೆಯರು ದೇವಾಲಯ ಪ್ರವೇಶಿಸುವ ಯತ್ನವನ್ನು ವಿಫಲಗೊಳಿಸಿದರು ಶ್ರೀಧರನ್ ಪಿಳ್ಳೈ ತಿಳಿಸಿದ್ದಾರೆ.
ದೇವಾಲಯದ ಮುಖ್ಯ ಅರ್ಚಕ ಕಾಂತರಾರು ರಾಜೀವರು ನನಗೆ ಫೋನ್ ಮಾಡಿ, ಮಹಿಳೆಯರು ದೇವಸ್ಥಾನ ಪ್ರವೇಶಿಸಲು ಸಿದ್ಧರಾಗಿದ್ದಾರೆ. ಅವರಿಗೆ ಪ್ರವೇಶ ನಿರಾಕರಿಸಿದರೆ ನ್ಯಾಯಾಂಗ ನಿಂದನೆಯಾಗುತ್ತದೆ ಎಂದರು. ನಾವು ನಿಮ್ಮೊಂದಿಗೆ ಇದ್ದೇವೆ ಎಂದು ನಾನು ಅವರಿಗೆ ಭರವಸೆ ಕೊಟ್ಟೆ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT