ಪವಿತ್ರ 18 ಮೆಟ್ಟಿಲು ಹತ್ತುತ್ತಿರುವ ಭಕ್ತಾಧಿಗಳು 
ದೇಶ

ಮತ್ತೆ ಬಾಗಿಲು ತೆರೆದ ಶಬರಿಮಲೆ ಅಯ್ಯಪ್ಪ ದೇಗುಲ, ಈ ಬಾರಿ ಒಬ್ಬ ಮಹಿಳಾ ಭಕ್ತಾದಿಯೂ ಇಲ್ಲ!

ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ ಇಂದು ಸಂಜೆ 5 ಗಂಟೆ ಸುಮಾರಿನಲ್ಲಿ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದ ಬಾಗಿಲು...

ಕೇರಳ: ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ ಇಂದು ಸಂಜೆ 5 ಗಂಟೆ ಸುಮಾರಿನಲ್ಲಿ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದ ಬಾಗಿಲು ಮತ್ತೆ ತೆರೆದಿದ್ದು, ಭಕ್ತಾಧಿಗಳು ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.  ಈ ಬಾರಿ ಒಬ್ಬ ಮಹಿಳಾ ಭಕ್ತಾಧಿಯೂ ಕಂಡುಬಂದಿಲ್ಲ.

ತಿರುವಂಕೂರು ರಾಜಮನೆತನದ ಕೊನೆಯ ರಾಜ ಚಿತ್ರಾ ತಿರುನಾಲ್ ಬಲರಾಮ ವರ್ಮ ಅವರ ಜನ್ಮದಿನದ ಹಿನ್ನೆಲೆಯಲ್ಲಿ ವಿಶೇಷ ಪೂಜೆಗಾಗಿ ಶಬರಿಮಲೆ ಅಯ್ಯಪ್ಪ ದೇವಾಲಯ ಬಾಗಿಲು ತೆರೆದಿದ್ದು,  ಭಕ್ತಾಧಿಗಳು ಪವಿತ್ರ 18 ಮೆಟ್ಟಿಲುಗಳನ್ನು ಏರುವ ಮೂಲಕ ವಿಶೇಷ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.   ನಾಳೆ ಸಂಜೆ ಮತ್ತೆ ದೇಗುಲದ ಬಾಗಿಲು ಬಂದ್ ಆಗಲಿದೆ.

ಎಲ್ಲಾ ವಯೋಮಾನದ ಮಹಿಳೆಯರಿಗೂ ಅಯ್ಯಪ್ಪ  ದೇಗುಲ ಪ್ರವೇಶಿಸಲು ಅವಕಾಶ ಕಲ್ಪಿಸಬೇಕೆಂಬ ಸುಪ್ರೀಂಕೋರ್ಟ್ ತೀರ್ಪು ಅನುಷ್ಠಾನ ಹಿನ್ನೆಲೆಯಲ್ಲಿ ಕಳೆದ ತಿಂಗಳ ಅಕ್ಟೋಬರ್ 17 ರಿಂದ 22ರವರೆಗೂ ಹಿಂದೂಪರ ಸಂಘಟನೆಗಳು ಕೇರಳ ಸರ್ಕಾರದ ವಿರೋಧ ತೀವ್ರ ಪ್ರತಿಭಟನೆ, ಹಿಂಸಾಚಾರ ನಡೆಸಿದ್ದರಿಂದ ಈ ಬಾರಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಈ ಬಾರಿ 20 ಸದಸ್ಯರನ್ನೊಳಗೊಂಡ ಕಮಾಂಡೊ ಪಡೆ, 100 ಮಹಿಳೆಯರು ಸೇರಿದಂತೆ ಸುಮಾರು 2 ಸಾವಿರದ 300 ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.

ಅಯ್ಯಪ್ಪ ಸ್ವಾಮಿ ದೇಗುಲದ ಸಂಕೀರ್ಣದಲ್ಲಿ 15 ಮಂದಿಗ ಮಹಿಳಾ ಸಿಬ್ಬಂದಿಯೂ ನಿಯೋಜಿಸಿರುವುದಾಗಿ ಎಂದು ಭದ್ರತೆ ಉಸ್ತುವಾರಿ ವಹಿಸಿರುವ ಐಜಿ ಅಜಿತ್  ಕುಮಾರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT