ಐಎನ್ ಎಸ್ ಅರಿಹಂತ್ 
ದೇಶ

ಗಸ್ತು ಮುಗಿಸಿದ ಐಎನ್ಎಸ್ ಅರಿಹಂತ್, ಇನ್ನು ಮುಂದೆ ಪರಮಾಣು ಬೆದರಿಕೆ ಇಲ್ಲ ಎಂದ ಪ್ರಧಾನಿ

ಗಸ್ತು ಪೂರ್ಣಗೊಳಿಸಿದ ದೇಶೀಯ ಪರಮಾಣುಚಾಲಿತ ಜಲಾಂತರ್ಗಾಮಿ ಐಎನ್ಎಸ್ ಅರಿಹಂತ್ ಸಿಬ್ಬಂದಿಯನ್ನ...

ನವದೆಹಲಿ: ತನ್ನ ಪ್ರಥಮ ಭೀತಿಕಾರಕ ಗಸ್ತನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ದೇಶೀಯ ಪರಮಾಣುಚಾಲಿತ ಜಲಾಂತರ್ಗಾಮಿ ಐಎನ್ಎಸ್ ಅರಿಹಂತ್ ಸಿಬ್ಬಂದಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ  ಶ್ಲಾಘಿಸಿದ್ದಾರೆ.
ದೇಶದ ರಕ್ಷಣೆಯಲ್ಲಿ, ವಿರೋಧಿಗಳನ್ನ ನಾಶ ಮಾಡುವ ಶಕ್ತಿಶಾಲಿ ಐಎನ್ಎಸ್ ಅರಿಹಂತ್ ತನ್ನ ಕಾರ್ಯವನ್ನು ಪೂರ್ಣಗೊಳಿಸಿ ವಾಪಸ್​ ಬಂದ ಬಳಿಕ ಮಾತನಾಡಿದ ಪ್ರಧಾನಿ ಮೋದಿ, ದೇಶದ ರಕ್ಷಣೆಗೆ ಈ ನೌಕೆ ದೇಶದ ಆಸ್ತಿ ಎಂದರು.
ನಮ್ಮ ರಾಷ್ಟ್ರದ ರಕ್ಷಣೆ ಅಥವಾ ಭದ್ರತೆಯನ್ನ ಹೆಚ್ಚು ಮಾಡುವ ಪ್ರಕ್ರಿಯೆಯಲ್ಲಿ ಐಎನ್​ಎಸ್​ ಅರಿಹಂತ್ ಮೊದಲ ಹೆಜ್ಜೆಯಾಗಿದೆ.  ಅರಿಹಂತ್ ಗಸ್ತು ಪೂರ್ಣಗೊಳಿಸುವ ಮೂಲಕ ನಮ್ಮ ರಾಷ್ಟ್ರದ ವೈರಿಗಳಿಗೆ ಬಹಿರಂಗ ಸವಾಲು ಹಾಕಿದೆ ಎಂದು ಹೇಳಿದರು.
ಇನ್ನು ಮುಂದೆ ಯಾರೂ ನಮಗೆ ಪರಮಾಣು ಬೆದರಿಕೆ ಹಾಕುವುದಿಲ್ಲ. ಪರಮಾಣು ಬಾಂಬ್​ ಹಾಕುವ ಬೆದರಿಕೆ ಹಾಕುವವರಿಗೆ ಅರಿಹಂತ್​ ಹಂತ ಸ್ಪಷ್ಟ ಉತ್ತರವಾಗಿದೆ ಎಂದು ಮೋದಿ ತಿಳಿಸಿದ್ದಾರೆ.
ದೀಪಾವಳಿಗೂ ಮುನ್ನ ಈ ಸಾಧನೆ ಮಾಡಿದ ಭಾರತೀಯ ನೌಕಾಪಡೆಯನ್ನು ಧನ್‌ತೇರಾ ಸ್ಪೆಷಲ್‌ ಎಂದು ವರ್ಣಿಸಿರುವ ಪ್ರಧಾನಿ ಮೋದಿ, "ಇದು ಭಾರತದ ಹೆಮ್ಮೆ, ಇದರ ಯಶಸ್ಸಿಗೆ ಕಾರಣರಾದವರಿಗೆಲ್ಲ ನನ್ನ ಅಭಿನಂದನೆಗಳು. ಇತಿಹಾಸದಲ್ಲಿ ಇದು ಸದಾ ಸ್ಮರಣೀಯವಾಗಿರುತ್ತದೆ' ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದಳಪತಿ ವಿಜಯ್ ಅಭಿನಯದ 'ಜನ ನಾಯಗನ್'

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

SCROLL FOR NEXT