ಆರ್ ಬಿಐ-ಕೇಂದ್ರ ಸರ್ಕಾರ ನಡುವಿನ ತಿಕ್ಕಾಟ: ಮೋದಿ ಸರ್ಕಾರದ ಬೆನ್ನಿಗೆ ನಿಂತಿದೆ ಮಾಜಿ ಪ್ರಧಾನಿ ಡಾ.ಸಿಂಗ್ ಉಲ್ಲೇಖ! 
ದೇಶ

ಆರ್ ಬಿಐ-ಸರ್ಕಾರ ತಿಕ್ಕಾಟ: ಕೇಂದ್ರದ ಪರ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಉಲ್ಲೇಖ!

ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಳ್ಳುವಂತಹ ಉಲ್ಲೇಖವನ್ನು ಆರ್ಥಿಕ ತಜ್ಞ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಮಾಡಿದ್ದಾರೆ.

ಆರ್ ಬಿಐ ಗೌರ್ನರ್ ಹಾಗೂ ಹಣಕಾಸು ಸಚಿವಾಲಯದ ನಡುವೆ ಉಂಟಾಗಿರುವ ಭಿನ್ನಾಭಿಪ್ರಾಯಗಳ ಬಗ್ಗೆ ವ್ಯಾಪಕ  ಚರ್ಚೆ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಳ್ಳುವಂತಹ ಉಲ್ಲೇಖವನ್ನು ಆರ್ಥಿಕ ತಜ್ಞ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಮಾಡಿದ್ದಾರೆ. 

ಡಾ. ಸಿಂಗ್ ಅವರ ಪುತ್ರಿ ಬರೆದಿರುವ ಸ್ಟ್ರಿಕ್ಟ್ಲಿ ಪರ್ಸನಲ್: ಮನಮೋಹನ್ ಸಿಂಗ್ ಆಡ್ ಗುರ್ಶರಣ್ ಪುಸ್ತಕದಲ್ಲಿ ಡಾ. ಸಿಂಗ್ ಆರ್ ಬಿಐ ಹಾಗೂ ಕೇಂದ್ರ ಸರ್ಕಾರದ ಬಗ್ಗೆ ಮಾತನಾಡುತ್ತಾ, ಆರ್ ಬಿಐ ಹಾಗೂ ಕೇಂದ್ರ ಸರ್ಕಾರದ ನಡುವೆ ಕೊಡುಕೊಳ್ಳುವಿಕೆ ಇದ್ದದ್ದೇ, ಆದರೆ ಹಣಕಾಸು ಸಚಿವರು ನಿರ್ದಿಷ್ಟ ಕ್ರಮ ಕೈಗೊಂಡರೆ ಅದನ್ನು ಮುಂದುವರೆಸಲೇಬೇಕು, ಹಣಕಾಸು ಸಚಿವರು ಹಾಗೂ ಆರ್ ಬಿಐ ಗೌರ್ನರ್ ನಡುವೆ ಎಂದಿಗೂ ಹಣಕಾಸು ಸಚಿವರದ್ದೇ ಮೇಲುಗೈ ಆಗಿರಲಿದೆ ಎಂದು ಡಾ.ಸಿಂಗ್ ಹೇಳಿದ್ದಾರೆ.
 
ಕೇಂದ್ರೀಯ ಬ್ಯಾಂಕ್ ನಲ್ಲಿ ತಮ್ಮ ಅವಧಿಯನ್ನು ನೆನಪಿಸಿಕೊಂಡಿರುವ ಡಾ.ಸಿಂಗ್, ಸರ್ಕಾರ ಹಾಗೂ ಆರ್ ಬಿಐ ನಡುವೆ ಕೊಡುಕೊಳ್ಳುವಿಕೆ ಇದ್ದದ್ದೇ ಕೆಲವೊಮ್ಮೆ ಆರ್ ಬಿಐ ಸರ್ಕಾರವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಾಗುತ್ತದೆ. ಹಣಕಾಸು ಸಚಿವರಿಗಿಂತ ಮೇಲೆ ಆರ್ ಬಿಐ ಗೌರ್ನರ್ ಇರುವುದಿಲ್ಲ. ಹಣಕಾಸು ಸಚಿವರು ಸೂಚನೆ ನೀಡಿದರೆ ಅದನ್ನು ಆರ್ ಬಿಐ ಗೌರ್ನರ್ ನಿರಾಕರಿಸುವುದಕ್ಕೆ ಸಾಧ್ಯವಿಲ್ಲ, ಒಂದು ವೇಳೆ ನಿರಾಕರಿಸಬೇಕಿದ್ದರೆ ಕೆಲಸಕ್ಕೆ ರಾಜೀನಾಮೆ ನೀಡಬೇಕು ಎಂದು ಹೇಳಿದ್ದಾರೆ. ಈ ಮೂಲಕ ಆರ್ ಬಿಐ ಸೆಕ್ಷನ್ 7 ಕ್ಕೆ ಮೋದಿ ಸರ್ಕಾರದ ವಿತ್ತ ಸಚಿವಾಲಯ ಆರ್ ಬಿಐಗೆ ನಿರ್ದೇಶನ ನೀಡಿರುವ ಕ್ರಮವನ್ನು ಸಮರ್ಥಿಸಿಕೊಳ್ಳುವುದಕ್ಕೆ  ಸಂಬಂಧಿಸಿದಂತೆ  ಆರ್ಥಿಕ ತಜ್ಞರೂ ಆಗಿರುವ ಮಾಜಿ ಪ್ರಧಾನಿ ಡಾ. ಸಿಂಗ್ ಅವರ ಹೇಳಿಕೆಯೇ ಬಲವಾದ ಅಂಶವಾಗಿ ಸಿಕ್ಕಿದೆ. 

ಆರ್ ಬಿಐ ಕಾಯ್ದೆಯಲ್ಲಿರುವ ಸೆಕ್ಷನ್ 7 ನ್ನು ಬಳಕೆ ಮಾಡಿ ಕೇಂದ್ರ ಬ್ಯಾಂಕ್ ಗೆ ನಿರ್ದೇಶನ ಮಾಡುವ ಅಧಿಕಾರವನ್ನು ಕೇಂದ್ರ ಸರ್ಕಾರ ಎನ್ ಪಿಎ ವಿಷಯದಲ್ಲಿ ಚಲಾಯಿಸುತ್ತಿದೆ. ಇದು ಚರ್ಚೆಗೆ ಕಾರಣವಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

SCROLL FOR NEXT