ಸೈನಿಕರಿಂದ ಸಿಹಿ ವಿನಿಮಯದ ಚಿತ್ರ 
ದೇಶ

ದೀಪಾವಳಿ ಪ್ರಯುಕ್ತ ವಾಘಾ ಗಡಿಯಲ್ಲಿ ಭಾರತ- ಪಾಕಿಸ್ತಾನ ಸೈನಿಕರಿಂದ ಸಿಹಿ ವಿನಿಮಯ

ದೀಪಾವಳಿ ಹಬ್ಬದ ಪ್ರಯುಕ್ತ ವಾಘಾ ಗಡಿ ಪ್ರದೇಶದಲ್ಲಿ ಭಾರತದ ಗಡಿ ಭದ್ರತಾ ಪಡೆ ಹಾಗೂ ಪಾಕಿಸ್ತಾನ ಯೋಧರು ಪರಸ್ಪರ ಸಿಹಿ ವಿನಿಮಯ ಮಾಡಿಕೊಂಡು ಶುಭಾಶಯ ಕೋರಿದರು.

ಪಂಜಾಬ್: ದೀಪಾವಳಿ ಹಬ್ಬದ ಪ್ರಯುಕ್ತ ವಾಘಾ ಗಡಿ ಪ್ರದೇಶದಲ್ಲಿ ಭಾರತದ ಗಡಿ ಭದ್ರತಾ ಪಡೆ ಹಾಗೂ ಪಾಕಿಸ್ತಾನ ಯೋಧರು ಪರಸ್ಪರ ಸಿಹಿ ವಿನಿಮಯ ಮಾಡಿಕೊಂಡು ಶುಭಾಶಯ ಕೋರಿದರು.

ಗಡಿಯಲ್ಲಿ ಕದನ ವಿರಾಮ ಉಲ್ಲಂಘನೆ,  ಒಳನುಸುಳುವಿಕೆ ಹೊರತಾಗಿಯೂ  ಗಣರಾಜ್ಯೋತ್ಸವ, ಸ್ವಾತಂತ್ರ್ಯ ದಿನಾಚರಣೆ,  ಈದ್ ಮಿಲಾದ್,  ದೀಪಾವಳಿ ಮತ್ತಿತರ ರಾಷ್ಟ್ರೀಯ ಹಾಗೂ ಧಾರ್ಮಿಕ ಹಬ್ಬಗಳ ಸಂದರ್ಭಗಳಲ್ಲಿ ಭಾರತ ಹಾಗೂ ಪಾಕಿಸ್ತಾನ ಸೈನಿಕರು ಪ್ರತಿವರ್ಷ ಸಿಹಿ ವಿನಿಮಯ ಮಾಡಿಕೊಂಡು ಶುಭಾಶಯ ಕೋರಲಾಗುತ್ತದೆ.

ಇದಕ್ಕೂ ಮುನ್ನ ಭಾರತದ 72 ಸ್ವಾತಂತ್ರ್ಯೋತ್ಸವ ಹಾಗೂ ಈದ್ ಅಲ್ -ಅದ್ಹಾ ಹಬ್ಬದ ಸಂದರ್ಭದಲ್ಲಿ  ಉಭಯ ದೇಶಗಳ ಸೈನಿಕರು ಸಿಹಿ ವಿನಿಮಯ ಮಾಡಿಕೊಂಡಿದ್ದರು.

ಆದಾಗ್ಯೂ, ಗಡಿ ಭಾಗದಲ್ಲಿ ಕದನ ವಿರಾಮ ಉಲ್ಲಂಘನೆಯಂತಹ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ  ಬಾರಿಯ ಗಣರಾಜ್ಯೋತ್ಸವ ಸಂದರ್ಭದಲ್ಲಿ ಶುಭಾಶಯ ವಿನಿಮಯ ಮಾಡಿಕೊಳ್ಳುವುದಿಲ್ಲ ಎನ್ನಲಾಗುತ್ತಿದೆ.

2016ರಲ್ಲಿ ಭಾರತೀಯ ವಾಯುನೆಲೆ ಉರಿ ಮೇಲಿನ ದಾಳಿ ಹಿನ್ನೆಲೆಯಲ್ಲಿ ಆ ವರ್ಷ ಸಂಪ್ರದಾಯಿಕ ಸಿಹಿ ವಿನಿಮಯವನ್ನು ಸ್ಥಗಿತಗೊಳಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

SCROLL FOR NEXT