ಕಮಲ್ ಹಾಸನ್ 
ದೇಶ

20 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಎಂಎನ್ಎಂ ಸಿದ್ಧ: ಕಮಲ ಹಾಸನ್‌

ಮುಂಬರುವ 20 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಮಕ್ಕಳ ನೀಧಿ ಮಯ್ಯಂ(ಎಂಎನ್ಎಂ) ಸ್ಪರ್ಧಿಸಲಿದೆ ಎಂದು ದಕ್ಷಿಣ ಭಾರತದ....

ಚೆನ್ನೈ: ಮುಂಬರುವ 20 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಮಕ್ಕಳ ನೀಧಿ ಮಯ್ಯಂ(ಎಂಎನ್ಎಂ) ಸ್ಪರ್ಧಿಸಲಿದೆ ಎಂದು ದಕ್ಷಿಣ ಭಾರತದ ಖ್ಯಾತ ನಟ ಹಾಗೂ ರಾಜಕಾರಣಿ ಕಮಲ್ ಹಾಸನ್ ಅವರು ಬುಧವಾರ ಘೋಷಿಸಿದ್ದಾರೆ.
ಎಂಎನ್ ಎಂ ಸಂಸ್ಥಾಪಕ ಕಮಲ್ ಹಾಸನ್ ಅವರು ಇಂದು ಪಕ್ಷದ ಕಚೇರಿಯಲ್ಲಿ ನೂರಾರು ಕಾರ್ಯಕರ್ತರೊಂದಿಗೆ ತಮ್ಮ 64ನೇ ಹುಟ್ಟು ಹಬ್ಬ ಆಚರಿಸಿಕೊಂಡರು. ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕಮಲ್ ಹಾಸನ್, ಉಪ ಚುನಾವಣೆ ನಡೆಯುವ ಎಲ್ಲ 20 ಕ್ಷೇತ್ರದಲ್ಲಿ ತಮ್ಮ ಎಂಎನ್ ಎಂ ಸ್ಪರ್ಧಿಸುತ್ತದೆ ಎಂದರು.
ಉಪ ಚುನಾವಣೆ ನಡೆಯಲಿರುವ ಈ ಕ್ಷೇತ್ರಗಳಲ್ಲಿ ಶೇ. 80ರಷ್ಟು ಪದಾಧಿಕಾರಿಗಳ ನೇಮಕ ಆಗಿದೆ. ನಮ್ಮದು ಜನರ ಪಕ್ಷವಾಗಿದೆ ಎಂದರು. 
ಭ್ರಷ್ಟಾಚಾರ ಎಂಬುದು ಸಂಪೂರ್ಣ ನಿರ್ಮೂಲನೆಯಾದರೆ ಆಡಳಿತ ಪಾರದರ್ಶಕವಾಗಿರುತ್ತದೆ. ಈ ಬಗ್ಗೆ ಎಲ್ಲ ಪಕ್ಷಗಳು ಚಿಂತನೆ ನಡೆಸಬೇಕು ಎಂದು ಕಮಲ್ ಹೇಳಿದರು.
ಇದೇ ವೇಳೆ ಶ್ರೀಲಂಕಾದಲ್ಲಿ ರಾಜಕೀಯ ಅಸ್ಥಿರತೆ ಉಂಟಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಬಹುಭಾಷಾ ನಟ, ನಮ್ಮ ದೇಶದಲ್ಲಿಯೇ ಹಲವಾರು ಸಮಸ್ಯೆಗಳಿವೆ. ಅದನ್ನು ಪರಿಹರಿಸಿಕೊಳ್ಳೋಣ. ಬೇರೆ ದೇಶದ ಬೆಳವಣಿಗೆ ಬಗ್ಗೆ ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದರು.
ತಮಿಳುನಾಡು ವಿಧಾನಸಭೆಯ ಸ್ಪೀಕರ್ ಆಡಳಿತರೂಢ ಎಐಎಡಿಎಂಕೆಯ 18 ಶಾಸಕರನ್ನು ಅನರ್ಹಗೊಳಿಸಿದ್ದು, ಅದನ್ನು ಹೈಕೋರ್ಟ್ ಸಹ ಎತ್ತಿ ಹಿಡಿದಿದೆ. ಹೀಗಾಗಿ ಆ 18 ಕ್ಷೇತ್ರಗಳು ಮತ್ತು ಇಬ್ಬರು ಶಾಸಕರ ನಿಧನದ ಹಿನ್ನೆಲೆಯಲ್ಲಿ ತೆರವಾಗಿರುವ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ. ಚುನಾವಣೆ ಆಯೋಗ ಶೀಘ್ರವೇ ವೇಳಾಪಟ್ಟಿ ಪ್ರಕಟಿಸುವ ನಿರೀಕ್ಷೆ ಇದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT