ಸಾಂದರ್ಭಿಕ ಚಿತ್ರ 
ದೇಶ

ನೋಟು ಅಮಾನ್ಯೀಕರಣಕ್ಕೆ 2 ವರ್ಷ: 'ಕರಾಳ ದಿನ' ಎಂದು ಕರೆದ ಕಾಂಗ್ರೆಸ್

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆರ್ಥಿಕತೆಯಲ್ಲಿ ಜಾರಿಗೆ ತಂದ ನೋಟು ನಗದೀಕರಣಕ್ಕೆ ...

ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆರ್ಥಿಕತೆಯಲ್ಲಿ ಜಾರಿಗೆ ತಂದ ನೋಟು ನಗದೀಕರಣಕ್ಕೆ ಗುರುವಾರಕ್ಕೆ 2 ವರ್ಷವಾಗಿದೆ. ಈ ದಿನವನ್ನು ಪ್ರಜಾಪ್ರಭುತ್ವದಲ್ಲಿ ಕರಾಳ ದಿನ ಎಂದು ಪ್ರತಿಪಕ್ಷ ಕಾಂಗ್ರೆಸ್ ಟೀಕಿಸಿದೆ.

ಅಧಿಕ ಮೌಲ್ಯದ ನೋಟುಗಳ ಅನಾಣ್ಯೀಕರಣದಿಂದ ಆದ ವೆಚ್ಚ ಮತ್ತು ನಷ್ಟವನ್ನು ಈ ದೇಶದ ಪ್ರತಿಯೊಬ್ಬ ಪ್ರಜೆ ಕೂಡ ಭರಿಸಿದ್ದಾರೆ. ಪ್ರಧಾನಿ ಮೋದಿಯವರ ಕೆಲವು ಆಪ್ತ ಉದ್ಯಮಿಗಳಿಗೆ ಮಾತ್ರ ಲಾಭವಾಗಿದೆ. ನಮ್ಮ ದೇಶದ ಆರ್ಥಿಕತೆ ಮತ್ತು ಪ್ರಜಾಪ್ರಭುತ್ವಕ್ಕೆ ಅನಾಣ್ಯೀಕರಣ ಕಪ್ಪು ದಿನವಾಗಿದೆ ಎಂದು ಕಾಂಗ್ರೆಸ್ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಹೇಳಿದೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟ್ವೀಟ್ ಮಾಡಿ, ಅನಾಣ್ಯೀಕರಣ ತತ್ತರದ 2ನೇ ವರ್ಷವಿಂದು. ಕರಾಳ ದಿನವಿಂದು, ಅದು ಘೋಷಣೆಯಾದಾಗಲೇ ನಾನು ಹೇಳಿದ್ದೆ. ಖ್ಯಾತ ಆರ್ಥಿಕ ತಜ್ಞರು, ಸಾಮಾನ್ಯ ಜನರು ಮತ್ತು ಎಲ್ಲಾ ತಜ್ಞರು ಅದನ್ನು ಒಪ್ಪಿಕೊಳ್ಳುತ್ತಾರೆ ಎಂದಿದ್ದಾರೆ.

ನವೆಂಬರ್ 8, 2016ರಂದು ನರೇಂದ್ರ ಮೋದಿಯವರು ನೋಟು ಅನಾಣ್ಯೀಕರಣ ಅಲಿಯಾಸ್ ನೋಟು ಬಂದ್ ನ್ನು ಜಾರಿಗೆ ತಂದರು. ಅದು ಆರ್ಥಿಕತೆ ವಿಚಾರದಲ್ಲಿ ಸೋಲು. ಬ್ಯಾಂಕು ಮುಂದೆ ಸಾಲಿನಲ್ಲಿ ನಿಂತು ಪ್ರತಿದಿನ ನೂರಕ್ಕೂ ಹೆಚ್ಚು ಜನರು ಕಷ್ಟಪಡುತ್ತಿದ್ದರು. ಈ ದಿನ ದಯಮಾಡಿ 2 ನಿಮಿಷ ಮೌನಾಚರಣೆ ಮಾಡಿ ಎಂದು ಹೇಳಿದ್ದಾರೆ,

ಕಾಂಗ್ರೆಸ್ ಇಂದು ಕರಾಳ ದಿನವನ್ನಾಗಿ ಆಚರಿಸಲು ನಿರ್ಧರಿಸಿದೆ. ಕಳೆದ ವರ್ಷ ಕೂಡ ನವೆಂಬರ್ 8ರಂದು ಕಾಂಗ್ರೆಸ್ ಮತ್ತು ವಿವಿಧ ಪ್ರತಿಪಕ್ಷಗಳು ದೇಶದ ಅನೇಕ ಕಡೆಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದವು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

SCROLL FOR NEXT