25 Indian labourers held captive in Malaysia: NGO 
ದೇಶ

ಮಲೇಷ್ಯಾದಲ್ಲಿ ಸಿಲುಕಿದ ಭಾರತದ 25 ಕಾರ್ಮಿಕರು!

ಕಟ್ಟಡ ನಿರ್ಮಾಣ ಕಾಮಗಾರಿಗಾಗಿ ಮಲೇಷ್ಯಾಗೆ ತೆರಳಿದ್ದ ಭಾರತದ 25 ಕಾರ್ಮಿಕರನ್ನು ನೇಮಕ ಮಾಡಿದ್ದ ಸಂಸ್ಥೆಯೇ ಸೆರೆಯಲ್ಲಿಟ್ಟುಕೊಂಡಿರುವುದು ಈಗ ಬಹಿರಂಗವಾಗಿದೆ.

ಕೋಲ್ಕತ್ತಾ: ಕಟ್ಟಡ ನಿರ್ಮಾಣ ಕಾಮಗಾರಿಗಾಗಿ ಮಲೇಷ್ಯಾಗೆ ತೆರಳಿದ್ದ ಭಾರತದ 25 ಕಾರ್ಮಿಕರನ್ನು ನೇಮಕ ಮಾಡಿದ್ದ ಸಂಸ್ಥೆಯೇ ಸೆರೆಯಲ್ಲಿಟ್ಟುಕೊಂಡಿರುವುದು ಈಗ ಬಹಿರಂಗವಾಗಿದೆ. 
ಕೋಲ್ಕತ್ತಾದ ಎನ್ ಜಿಒ ಈ ಮಾಹಿತಿಯನ್ನು ಬಹಿರಂಗಪಡಿಸಿದ್ದು, ರಾಷ್ಟ್ರೀಯ ಮಾನವ ಸಾಗಣೆ ವಿರೋಧಿ ಸಮಿತಿ ಕಾರ್ಮಿಕರನ್ನು ವಾಪಸ್ ಕರೆತರುವುದಕ್ಕೆ ವಿದೇಶಾಂಗ ಇಲಾಖೆಯ ನೆರವು ಕೇಳಿದೆ. ಮಲೇಷ್ಯಾದಲ್ಲಿ ಸಿಲುಕಿರುವ ಇಬ್ಬರು ಕಾರ್ಮಿಕರು ವಿಡಿಯೋ ಮಾಡಿದ ಬಳಿಕ ಈ ಮಾಹಿತಿ ಬಹಿರಂಗವಾಗಿದ್ದು, ಸಂಸ್ಥೆ ಕೇಂದ್ರ ವಿದೇಶಾಂಗ ಇಲಾಖೆಯ ನೆರವು ಕೇಳಿದೆ. ಕಾರ್ಮಿಕರನ್ನು ರಕ್ಷಿಸುವಂತೆ ಪ್ರಧಾನಿಗೆ ಪತ್ರವನ್ನೂ ಬರೆದಿರುವ ಸಂಸ್ಥೆ  ಮಲೇಷ್ಯಾದಲ್ಲಿ ಸಿಲುಕಿರುವ ಇಬ್ಬರು ಕಾರ್ಮಿಕರು ಜೀವ ಉಳಿಸುವುದಕ್ಕೆ ಯತ್ನಿಸುತ್ತಿರುವುದನ್ನು ವಿಡಿಯೋ ಮೂಲಕ ಬಹಿರಂಗಪಡಿಸಿದ್ದು, ಕೂಡಲೇ ಕಾರ್ಮಿಕರ ರಕ್ಷಣೆಗೆ ಸ್ಪಂದಿಸಬೇಕೆಂದು ಮನವಿ ಮಾಡಲಾಗಿದೆ. 
ಕನಿಷ್ಟ 25 ಕಾರ್ಮಿಕರು ಬಂಧನದಲ್ಲಿರುವ ಸಾಧ್ಯತೆ ಇದ್ದು, ಜೀವನ ಪರ್ಯಂತ ಬಂಧನಕ್ಕೊಳಪಡಿಸುವುದಾಗಿ ನೇಮಕ ಮಾಡಿಕೊಂಡಿರುವ ಸಂಸ್ಥೆ ಬೆದರಿಕೆ ಹಾಕುತ್ತಿದೆ ಎಂದು ಕಾರ್ಮಿಕರು ಮಾಹಿತಿ ನೀಡಿದ್ದಾರೆ. ಪಶ್ಚಿಮ ಬಂಗಾಳದ ಮ್ಯಾನ್ ಪವರ್ ಕನ್ಸ್ಟ್ರಕ್ಷನ್ಸ್ ಎಂಬ ಏಜೆನ್ಸಿ ಮೂಲಕ ಈ ಕಾರ್ಮಿಕರು ಮಲೇಷ್ಯಾಗೆ ಟೂರಿಸ್ಟ್ ವೀಸಾ ಪಡೆದು ಕೆಲಸಕ್ಕೆ ತೆರಳಿದ್ದರು ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸೌದಿ ಮೇಲೆ ಕ್ಷಿಪಣಿ ದಾಳಿ; Houthi ಉಗ್ರರ ವಿರುದ್ಧ ಸಿಡಿದೆದ್ದ ಭಾರತ, 'ನೌಕಾಯಾನ ಸ್ವಾತಂತ್ರ್ಯಕ್ಕೆ ಬೆದರಿಕೆ ಒಡ್ಡುವ ದಾಳಿ ಒಪ್ಪಲ್ಲ' ಎಂದು ಗುಡುಗು

CJPಗೆ ಬಿಗ್ ಶಾಕ್; 2 ಕೋಟಿ ಮಾನನಷ್ಟ ಮೊಕದ್ದಮೆ, ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಹಿರಿಯ ವಕೀಲ Gaurav Bhatia!

ಮಂಡ್ಯ ಸಕ್ಕರೆ ಕಾರ್ಖಾನೆಯಲ್ಲಿ ದುರಂತ: ಕುದಿಯುವ ನೀರಿನ ಹೊಂಡಕ್ಕೆ ಬಿದ್ದು ಕಾರ್ಮಿಕ ಸಾವು

ಸಚಿವ ಸತೀಶ್ ಜಾರಕಿಹೊಳಿ ನಿವಾಸ ಮೇಲೆ ದಾಳಿ ಏಕೆ; ED ಹೇಳಿದ್ದೇನು? Video

ಮಂಡ್ಯ: ಕಬ್ಬಿಣದ ಆಂಗಲ್ ತುಂಬಿದ್ದ ಟ್ರ್ಯಾಕ್ಟರ್‌ಗೆ KSRTC ಬಸ್ ಡಿಕ್ಕಿ; ಭೀಕರ ಅಪಘಾತದಲ್ಲಿ ಚಾಲಕ ಸಾವು!