25 Indian labourers held captive in Malaysia: NGO 
ದೇಶ

ಮಲೇಷ್ಯಾದಲ್ಲಿ ಸಿಲುಕಿದ ಭಾರತದ 25 ಕಾರ್ಮಿಕರು!

ಕಟ್ಟಡ ನಿರ್ಮಾಣ ಕಾಮಗಾರಿಗಾಗಿ ಮಲೇಷ್ಯಾಗೆ ತೆರಳಿದ್ದ ಭಾರತದ 25 ಕಾರ್ಮಿಕರನ್ನು ನೇಮಕ ಮಾಡಿದ್ದ ಸಂಸ್ಥೆಯೇ ಸೆರೆಯಲ್ಲಿಟ್ಟುಕೊಂಡಿರುವುದು ಈಗ ಬಹಿರಂಗವಾಗಿದೆ.

ಕೋಲ್ಕತ್ತಾ: ಕಟ್ಟಡ ನಿರ್ಮಾಣ ಕಾಮಗಾರಿಗಾಗಿ ಮಲೇಷ್ಯಾಗೆ ತೆರಳಿದ್ದ ಭಾರತದ 25 ಕಾರ್ಮಿಕರನ್ನು ನೇಮಕ ಮಾಡಿದ್ದ ಸಂಸ್ಥೆಯೇ ಸೆರೆಯಲ್ಲಿಟ್ಟುಕೊಂಡಿರುವುದು ಈಗ ಬಹಿರಂಗವಾಗಿದೆ. 
ಕೋಲ್ಕತ್ತಾದ ಎನ್ ಜಿಒ ಈ ಮಾಹಿತಿಯನ್ನು ಬಹಿರಂಗಪಡಿಸಿದ್ದು, ರಾಷ್ಟ್ರೀಯ ಮಾನವ ಸಾಗಣೆ ವಿರೋಧಿ ಸಮಿತಿ ಕಾರ್ಮಿಕರನ್ನು ವಾಪಸ್ ಕರೆತರುವುದಕ್ಕೆ ವಿದೇಶಾಂಗ ಇಲಾಖೆಯ ನೆರವು ಕೇಳಿದೆ. ಮಲೇಷ್ಯಾದಲ್ಲಿ ಸಿಲುಕಿರುವ ಇಬ್ಬರು ಕಾರ್ಮಿಕರು ವಿಡಿಯೋ ಮಾಡಿದ ಬಳಿಕ ಈ ಮಾಹಿತಿ ಬಹಿರಂಗವಾಗಿದ್ದು, ಸಂಸ್ಥೆ ಕೇಂದ್ರ ವಿದೇಶಾಂಗ ಇಲಾಖೆಯ ನೆರವು ಕೇಳಿದೆ. ಕಾರ್ಮಿಕರನ್ನು ರಕ್ಷಿಸುವಂತೆ ಪ್ರಧಾನಿಗೆ ಪತ್ರವನ್ನೂ ಬರೆದಿರುವ ಸಂಸ್ಥೆ  ಮಲೇಷ್ಯಾದಲ್ಲಿ ಸಿಲುಕಿರುವ ಇಬ್ಬರು ಕಾರ್ಮಿಕರು ಜೀವ ಉಳಿಸುವುದಕ್ಕೆ ಯತ್ನಿಸುತ್ತಿರುವುದನ್ನು ವಿಡಿಯೋ ಮೂಲಕ ಬಹಿರಂಗಪಡಿಸಿದ್ದು, ಕೂಡಲೇ ಕಾರ್ಮಿಕರ ರಕ್ಷಣೆಗೆ ಸ್ಪಂದಿಸಬೇಕೆಂದು ಮನವಿ ಮಾಡಲಾಗಿದೆ. 
ಕನಿಷ್ಟ 25 ಕಾರ್ಮಿಕರು ಬಂಧನದಲ್ಲಿರುವ ಸಾಧ್ಯತೆ ಇದ್ದು, ಜೀವನ ಪರ್ಯಂತ ಬಂಧನಕ್ಕೊಳಪಡಿಸುವುದಾಗಿ ನೇಮಕ ಮಾಡಿಕೊಂಡಿರುವ ಸಂಸ್ಥೆ ಬೆದರಿಕೆ ಹಾಕುತ್ತಿದೆ ಎಂದು ಕಾರ್ಮಿಕರು ಮಾಹಿತಿ ನೀಡಿದ್ದಾರೆ. ಪಶ್ಚಿಮ ಬಂಗಾಳದ ಮ್ಯಾನ್ ಪವರ್ ಕನ್ಸ್ಟ್ರಕ್ಷನ್ಸ್ ಎಂಬ ಏಜೆನ್ಸಿ ಮೂಲಕ ಈ ಕಾರ್ಮಿಕರು ಮಲೇಷ್ಯಾಗೆ ಟೂರಿಸ್ಟ್ ವೀಸಾ ಪಡೆದು ಕೆಲಸಕ್ಕೆ ತೆರಳಿದ್ದರು ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಮುಂದಿನ CM ಡಿ.ಕೆ ಶಿವಕುಮಾರ್; ಮಧ್ಯಾಹ್ನ 2.30ಕ್ಕೆ ರಾಜೀನಾಮೆ; ಸಿದ್ದರಾಮಯ್ಯ ಮಾಹಿತಿ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT