ಶ್ರೀ ಶ್ರೀ ರವಿ ಶಂಕರ್ 
ದೇಶ

ಸಿಬಿಐ ಆಂತರಿಕ ಕಚ್ಚಾಟವನ್ನು ಶಾಂತಗೊಳಿಸಲು ಆರ್ಟ್ ಆಫ್ ಲಿವಿಂಗ್ ಮೊರೆ ಹೋದ ತನಿಖಾ ಸಂಸ್ಥೆ!

ದೇಶದ ಪ್ರತಿಷ್ಠಿತ ತನಿಖಾ ಸಂಸ್ಥೆ ಸಿಬಿಐ ನಲ್ಲಿನ ಆಂತರಿಕ ಕಲಹಗಳಿಂದ ಇತ್ತೀಚೆಗೆ ದೇಶಾದ್ಯಂತ ತೀವ್ರ ಸುದ್ದಿ ಮಾಡಿತ್ತು. ಈಗ ಸಂಸ್ಥೆಯ ಅಧಿಕಾರಿ ವರ್ಗದವರಲ್ಲಿ "ಸಕಾರಾತ್ಮಕ ಮನೋಭಾವನೆ

ನವದೆಹಲಿ: ದೇಶದ ಪ್ರತಿಷ್ಠಿತ ತನಿಖಾ ಸಂಸ್ಥೆ ಸಿಬಿಐ ನಲ್ಲಿನ ಆಂತರಿಕ ಕಲಹಗಳಿಂದ ಇತ್ತೀಚೆಗೆ ದೇಶಾದ್ಯಂತ ತೀವ್ರ ಸುದ್ದಿ ಮಾಡಿತ್ತು. ಈಗ ಸಂಸ್ಥೆಯ ಅಧಿಕಾರಿ ವರ್ಗದವರಲ್ಲಿ "ಸಕಾರಾತ್ಮಕ ಮನೋಭಾವನೆ" ಹೆಚ್ಚಳ ಮಾಡುವುದಕ್ಕಾಗಿ ಮೂರು ದಿನಗಳ ಕಾಲ ಜೀವನ ಕಲೆ (ಆರ್ಟ್ ಆಫ್ ಲಿವಿಂಗ್) ಕಾರ್ಯಾಗಾರ ನಡೆಸಲು ಸಂಸ್ಥೆ ಮುಖ್ಯಸ್ಥರು ತೀರ್ಮಾನಿಸಿದ್ದಾರೆ.
ನಾಳೆ (ನವೆಂಬರ್ 10) ಯಿಂದ ಮೂರು ದಿನಗಳ ಕಾಲ ನವದೆಹಲಿಯಲ್ಲಿ ನಡೆಯಲಿರುವ ಶ್ರೀ ಶ್ರೀ ರವಿಶಂಕರ್ ನೇತೃತ್ವದ ಕಾರ್ಯಾಗಾರದಲ್ಲಿ 150 ಕ್ಕಿಂತ ಹೆಚ್ಚು ಸಿಬಿಐ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎನ್ನಲಾಗಿದೆ.
ಸಿಬಿಐ ಬಿಡುಗಡೆ ಮಾಡಿದ ಹೇಳಿಕೆ ಪ್ರಕಾರ, ಇನ್ಸ್ ಪೆಕ್ಟರ್ ಶ್ರೇಣಿಯ ಅಧಿಕಾರಿಗಳು, ಇನ್ ಚಾರ್ಜ್ ನಿರ್ದೇಶಕರುಗಳು ಶಿಬಿರದಲ್ಲಿ ಬಾಗವಿಸಲಿದ್ದಾರೆ.
ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರ ಮೇಲೆ ಸಿಬಿಐ  ವಿಶೇಷ ನಿರ್ದೇಶಕ ರಾಕೇಶ್ ಅಸ್ತನಾ ಮಾಡಿರುವ ಭ್ರಷ್ಟಾಚಾರ ಆರೋಪಗಳಿಗೆ ಸಂಬಂಧ ಸಿವಿಸಿ ಎದುರು ವಿಚಾರಣೆಗೆ ಹಾಜರಾಗಿದ್ದರು.ಈ ನಡುವೆ ಸಂಸ್ಥೆಯು ಅಸ್ತಾನಾ ಹಾಗೂ ಅಲೋಕ್ ವರ್ಮಾ ಅವರನ್ನು ಸುದೀರ್ಘ ರಜೆ  ಮೇಲೆ ಕಳಿಸಿರುವುದು ತೀವ್ರ ವಿವಾದಕ್ಕೆ ಎಡೆಮಾಡಿದೆ. ಅಲ್ಲದೆ ಪ್ರಧಾನಿ ನೇತೃತ್ವದ ಸಮಿತಿಯು ಎಂ.ನಾಗೇಶ್ವರ ರಾವ್ ಅವರನ್ನು ತನಿಖಾ ಸಂಸ್ಥೆಯ ಮದ್ಯಂತರ ಮುಖ್ಯಸ್ಥರಾಗಿ  ನೇಮಕ ಮಾಡಿ ಸುದ್ದಿಗೆ ಗ್ರಾಸವಾಗಿತ್ತು.
ಸಿವಿಸಿ ವಿಚಾರಣೆಗಾಗಿ  ವರ್ಮಾ ಮತ್ತು ಅಸ್ತಾನಾ ಅವರು ಸಿವಿಸಿ ಅಧಿಕಾರಿ ) ಕೆ.ವಿ.ಚೌಡರಿ ಮುಂದೆ ಹಾಜರಾಗಿದ್ದರು.
ಸಂಸ್ಥೆಯಲ್ಲಿ ನಡೆದ ಈ ಎಲ್ಲಾ ಬೆಳವಣಿಗೆಗಳಿಂದ ಅಧಿಕಾರಿಗಳ ಮನಸ್ಸಿನಲ್ಲಿ ಮೂಡಿದ ನಕಾರಾತ್ಮಕ ಮನೋಭಾವನೆ ತೊಲಗಿಸಲು ಈ ಕಾರ್ಯಾಗಾರ ನೆರವಾಗಲ್ಲಿದೆ ಎಂದು ಸಂಸ್ಥೆಯ ಅಧಿಸೂಚನೆ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT