ದೇಶ

ತ್ರಾಲ್ ಎನ್ ಕೌಂಟರ್: ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಿದ ಸೇನೆ

Srinivas Rao BV
ಶ್ರೀನಗರ: ಜಮ್ಮು-ಕಾಶ್ಮೀರದ ತ್ರಾಲ್ ನಲ್ಲಿ ನಡೆದಿರುವ ಎನ್ ಕೌಂಟರ್ ನಲ್ಲಿ ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಲಾಗಿದೆ. 
ಜೈಶ್-ಎ-ಮೊಹಮ್ಮದ್ (ಜೆಇಎಂ) ಉಗ್ರ ಸಂಘಟನೆಗೆ ಸೇರಿರುವ ಭಯೋತ್ಪಾದಕರ ಗುಂಡೇಟಿಕೆ ಬಲಿಯಾಗಿದು, ಎನ್ ಕೌಂಟರ್ ಗೆ ಗುರಿಯಾಗಿರುವ ಭಯೋತ್ಪಾದಕನಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.  ದರ್ಗಾನಾಯ್ ಗುಂಡ್ ಗ್ರಾಮದಲ್ಲಿ ನಡೆದ ಶೋಧ ಕಾರ್ಯಾಚರಣೆ ವೇಳೆ ಭಯೋತ್ಪಾದಕರು ಇರುವುದು ಪತ್ತೆಯಾಗಿದ್ದು, ಸೇನಾ ಸಿಬ್ಬಂದಿ ಹಾಗೂ ಭಯೋತ್ಪಾದಕನ ನಡುವೆ ಗುಂಡಿನ ಚಕಮಕಿ ನಡೆದಿದೆ. ವದಂತಿಗಳು ಹಬ್ಬುವುದನ್ನು ತಡೆಗಟ್ಟಲು ಮೊಬೈಲ್ ಇಂಟರ್ ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. 
SCROLL FOR NEXT