ಓಂ ಪ್ರಕಾಶ್ ರಾಜಭರ್ 
ದೇಶ

ಮೊದಲು ಬಿಜೆಪಿಯಲ್ಲಿರುವ ಮುಸ್ಲಿಂ ನಾಯಕರ ಹೆಸರು ಬದಲಿಸಿ: ಯೋಗಿಗೆ ಯುಪಿ ಸಚಿವ ತರಾಟೆ

ನಗರಗಳ ಹೆಸರು ಬದಲಾವಣೆಗೆ ಸಂಬಂಧಿಸಿದಂತೆ ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ....

ಲಖನೌ: ನಗರಗಳ ಹೆಸರು ಬದಲಾವಣೆಗೆ ಸಂಬಂಧಿಸಿದಂತೆ ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಉತ್ತರ ಪ್ರದೇಶ ಸಚಿವ ಓಂ ಪ್ರಕಾಶ್ ರಾಜಭರ್ ಅವರು, ಮೊದಲು ಬಿಜೆಪಿಯಲ್ಲಿರುವ ಮುಸ್ಲಿಂ ನಾಯಕರ ಹೆಸರು ಬದಲಾವಣೆ ಮಾಡಲಿ ಎಂದು ಶನಿವಾರ ಹೇಳಿದ್ದಾರೆ.
ವಿವಿಧ ನಗರಗಳ ಹಾಗೂ ಸ್ಥಳಗಳ ಹೆಸರು ಬದಲಾವಣೆ ಮಾಡುವ ಮುನ್ನ ಬಿಜೆಪಿ ತನ್ನ ಮುಸ್ಲಿಂ ನಾಯಕರಾದ ಮುಖ್ತಾರ್ ಅಬ್ಬಾಸ್ ನಖ್ವಿ, ಶಹನ್ವಾಜ್ ಹುಸೇನ್ ಉತ್ತರ ಪ್ರದೇಶ ಸಚಿವ ಮೊಹಿಸಿನ್ ರಾಜಾ ಅವರ ಹೆಸರು ಬದಲಾವಣೆ ಮಾಡಲಿ ಎಂದು ಬಿಜೆಪಿ ಮಿತ್ರ ಪಕ್ಷ ಸುಹೆಲ್ದೇವ್ ಭಾರತೀಯ ಸಮಾಜ ಪಕ್ಷದ ಮುಖ್ಯಸ್ಥ ರಾಜಭರ್ ಅವರು ಹೇಳಿದ್ದಾರೆ.
ಹಿಂದೂಳಿದವರ ಮತ್ತು ತುಳಿತಕ್ಕೊಳಗಾದವರ ಗಮನ ಬೆರೆಡೆ ಸೆಳೆಯುವ ಉದ್ದೇಶದಿಂದ ನಗರ ಮತ್ತು ಸ್ಥಳಗಳ ಹೆಸರು ಬದಲಾವಣೆ ಮಾಡುತ್ತಿದೆ ಎಂದಿರುವ ರಾಜಭರ್ ಅವರು, ಮುಸ್ಲಿಮರು ನಿರ್ಮಿಸಿದ ಕೆಂಪು ಕೋಟೆ, ತಾಜ್ ಮಹಲ್ ಅನ್ನು ನಾವು ಬಿಟ್ಟು ಬಿಡಬೇಕೆ? ಎಂದು ಪ್ರಶ್ನಿಸಿದ್ದಾರೆ.
ಕಳೆದ ಮಂಗಳವಾರವಷ್ಟೇ ಯೋಗಿ ಆಧಿತ್ಯನಾಥ್ ಅವರು ಫೈಜಾಬಾದ್ ಅನ್ನು ಅಯೋಧ್ಯ ಎಂದು ಬದಲಾಯಿಸಿದ್ದರು. ಅಲ್ಲದೆ ಮುಗಲ್ ಸರಾಯಿ ರೈಲ್ವೆ ನಿಲ್ಡಾಣವನ್ನು ದೀನ್ ದಯಾಳ್ ಉಪಾಧ್ಯಾಯ ಎಂದು ಮತ್ತು ಅಲಹಬಾದ್ ಅನ್ನು ಪ್ರಯಾಗರಾಜ್ ಎಂದು ಬದಲಾಯಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಧಮ್ ಇದ್ರೆ ನನ್ನ ಕೊಲ್ಲಿ.. ಕನಿಷ್ಠ 1 ಸಾವಿರ ಕ್ಷಿಪಣಿಗಳು ಲೋಡ್ ಆಗಿ ನಿಂತಿವೆ': ಇರಾನ್ ಗೆ Donald Trump ಎಚ್ಚರಿಕೆ

ಭಾರತ–ನ್ಯೂಜಿಲ್ಯಾಂಡ್ ಸಂಬಂಧ ಕಾರ್ಯತಂತ್ರ ಪಾಲುದಾರಿಕೆಗೆ ಉನ್ನತಿ; 5 ವರ್ಷಗಳಲ್ಲಿ 35,000 ಕೋಟಿ ರೂ. ವ್ಯಾಪಾರದ ಗುರಿ

'ಮಟನ್ ಹಾಕ್ತೀವಿ ಅಂತ ಹೇಳಿ ಚಿಕನ್ ಕೊಟ್ರು': ರಣಾಂಗಣವಾಯ್ತು 'ನಿಕಾಹ್ ಸಮಾರಂಭ', 12 ಮಂದಿಗೆ ಗಾಯ, Video

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಬೆಂಗಳೂರು: ತಾಯಿ, ಅಜ್ಜಿ, ಮಾವನನ್ನು ಕೊಂದು ಆರೋಪಿ ಆತ್ಮಹತ್ಯೆ!