ಗಡಿ ನಿಯಂತ್ರಣ ರೇಖೆ 
ದೇಶ

ಭಾರತದೊಳಗೆ ನುಸುಳಲು ಕಾಯುತ್ತಿರುವ ಸುಮಾರು 160 ಉಗ್ರರು - ಸೇನೆ

ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿ ಭಾರತದೊಳಗೆ ನುಸುಳಲು ಸುಮಾರು 160 ಉಗ್ರರು ಕಾಯುತ್ತಿದ್ದಾರೆ ಎಂಬ ಆತಂಕಕಾರಿ ಮಾಹಿತಿಯನ್ನು ಸೇನೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರ: ಅಂತಾರಾಷ್ಟ್ರೀಯ  ಗಡಿ ನಿಯಂತ್ರಣ ರೇಖೆ ಬಳಿ ಭಾರತದೊಳಗೆ ನುಸುಳಲು ಸುಮಾರು 160 ಉಗ್ರರು ಕಾಯುತ್ತಿದ್ದಾರೆ ಎಂಬ ಆತಂಕಕಾರಿ ಮಾಹಿತಿಯನ್ನು ಸೇನೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪಾಕಿಸ್ತಾನ ತನ್ನ ನೀತಿ ಹಾಗೂ ಧೋರಣೆಯಲ್ಲಿ ಬದಲಾವಣೆ ಮಾಡಿಕೊಂಡರೆ ಮಾತ್ರ ಭಯೋತ್ಪಾದನೆ ನಿಲ್ಲಲು ಸಾಧ್ಯ ಎಂದು ಲೆಪ್ಟಿನೆಂಟ್ ಜನರಲ್ ಪರಮ್ ಜಿತ್ ಸಿಂಗ್ ಹೇಳಿದ್ದಾರೆ.

ಒಳ ನುಸುಳುವಿಕೆ ತಡೆಯಲು ಭಾರತ ಸೇನೆ ಸಾಕಷ್ಟು  ಸನ್ನದ್ಧವಾಗಿದೆ. ಪಾಕಿಸ್ತಾನದ ವಿವಿಧ ಕಡೆಗಳಿಂದ ಸುಮಾರು  140 ರಿಂದ 160  ಮಂದಿ ಉಗ್ರರನ್ನು  ಭಾರತದೊಳಗೆ ನುಸುಳಲು ಪ್ರಯತ್ನಿಸಲಾಗುತ್ತಿದೆ  ಎಂದು ಅವರು ಸುದ್ದಿ ಸಂಸ್ಥೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿ  ಡಿಜಿಎಂಓ ಮಟ್ಟದ ಮಾತುಕತೆಯ ನಂತರ ಕದನ ವಿರಾಮ ಉಲ್ಲಂಘನೆ ಕಡಿಮೆಯಾಗಿದೆ. ಆದಾಗ್ಯೂ, ಪಾಕಿಸ್ತಾನ ಸೇನೆಯಿಂದ ಅಪ್ರಚೋದಿತ ಗುಂಡಿನ ದಾಳಿ ಮುಂದುವರೆದಿದೆ. ಉದ್ದೇಶಪೂರ್ವಕವಾಗಿ ನಾವು ಗುಂಡಿನ ದಾಳಿ ನಡೆಸುವುದಿಲ್ಲ  ಆದರೆ, ಅವರಿಗೆ ಸೂಕ್ತ ಪ್ರತ್ಯುತ್ತರ ನೀಡುತ್ತಿದ್ದೇವೆ. ಒಳನುಸುಳುವಿಕೆ ತಡೆಗಟ್ಟುವಲ್ಲಿ ಭಾರತ ಸೇನೆ ಸದೃಢವಾಗಿದೆ ಎಂದು ಹೇಳಿದ್ದಾರೆ.

ಚಳಿ ಗಾಲದಲ್ಲಿ ಹೆಚ್ಚಿನ ಹಿಮ ಸುರಿಯುವ ಪ್ರದೇಶ ಹಾಗೂ ಇನ್ನಿತರ ಮಾರ್ಗಗಳ ಮೂಲಕ ಪಾಕಿಸ್ತಾನಿ ಸೈನಿಕರು ದೇಶದೊಳಗೆ ನುಸುಳದಂತೆ ಎಲ್ಲಾ ಕ್ರಮ ಕೈಗೊಳ್ಳಲಾಗಿದೆ. ಎಲ್ಲಾ ಭದ್ರತಾ ಏಜೆನ್ಸಿಗಳೊಂದಿಗೆ ಸಹಕಾರ ಹೊಂದಿರುವುದಾಗಿ ಪರಮ್ ಜಿತ್ ಸಿಂಗ್  ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT