ಮಂಜು ವರ್ಮಾ 
ದೇಶ

ಬಿಹಾರ ಸೆಕ್ಸ್ ಹಗರಣ: ಮಾಜಿ ಸಚಿವೆ ಮಂಜು ವರ್ಮಾ ಬಂಧಿಸಿದ ಪೊಲೀಸರಿಗೆ ಸುಪ್ರೀಂ ತರಾಟೆ

ಮುಜಾಫರಪುರ್ ಶೆಲ್ಟರ್ ಹೋಮ್ ಸೆಕ್ಸ್ ಹಗರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ಬಿಹಾರ ಮಾಜಿ....

ನವದೆಹಲಿ: ಮುಜಾಫರಪುರ್ ಶೆಲ್ಟರ್ ಹೋಮ್ ಸೆಕ್ಸ್ ಹಗರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ಬಿಹಾರ ಮಾಜಿ ಸಚಿವೆ ಮಂಜು ವರ್ಮಾ ಅವರನ್ನು ಬಂಧಿಸಿದ ಬಿಹಾರ ಪೊಲೀಸರಿಗೆ ಸುಪ್ರೀಂ ಕೋರ್ಟ್ ಸೋಮವಾರ ತೀವ್ರ ತರಾಟೆಗೆ ತೆಗೆದುಕೊಂಡಿದೆ.
'ಅದ್ಭುತ! ಒಬ್ಬ ಕ್ಯಾಬಿನೆಟ್​ ಸಚಿವರೊಬ್ಬರು ಇನ್ನೂ ಓಡುತ್ತಲೇ ಇದ್ದಾರೆ…  ಸಚಿವರೊಬ್ಬರು ತಲೆ ಮರೆಸಿಕೊಳ್ಳುತ್ತಾರೆ ಮತ್ತು ಅವರು ಎಲ್ಲಿದ್ದಾರೆ ಎಂಬುದು ಯಾರೊಬ್ಬರಿಗೂ ತಿಳಿದಿಲ್ಲ. ಇದು ಹೇಗೆ ಸಾಧ್ಯ? ಸಚಿವರೊಬ್ಬರನ್ನು ಪತ್ತೆ ಹಚ್ಚಲು ಸಾಧ್ಯವಾಗುತ್ತಿಲ್ಲ ಎಂಬುದರ ಗಂಭೀರತೆ ಎಂಥದ್ದು ಎಂದು ನಿಮಗೆ ಗೊತ್ತಿದೆ. ಇದು ಅತಿಯಾಯಿತು, ಎಂದು ನ್ಯಾಯಮೂರ್ತಿ ಮದನ್​ ಬಿ.ಲೋಕುರ್​ ಅವರು ಪೊಲೀಸರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಮಂಜು ವರ್ಮಾ ಅವರನ್ನು ಒಂದು ತಿಂಗಳಿಂದ ಪತ್ತೆಹಚ್ಚಲು ಸಾಧ್ಯವಾಗಿಲ್ಲ ಎಂಬುದನ್ನು ಕೇಳಿ ನಮಗೆ ಶಾಕ್​ ಆಗಿದೆ. ಪ್ರಮುಖ ವ್ಯಕ್ತಿಯೊಬ್ಬರನ್ನು ಪತ್ತೆ ಹಚ್ಚಲು ಏಕೆ ಸಾಧ್ಯವಾಗುತ್ತಿಲ್ಲ ಎಂಬುದರ ಬಗ್ಗೆ ಪೊಲೀಸ್​ ಇಲಾಖೆ ನ್ಯಾಯಾಲಯದ ಮುಂದೆ ಬಂದು ಸ್ಪಷ್ಟೀಕರಣ ನೀಡಬೇಕು. ಮುಂದಿನ ವಿಚಾರಣೆಗೆ ಪೊಲೀಸ್​ ಮಹಾ ನಿರ್ದೇಶಕರು ನ್ಯಾಯಾಲಯದ ಮುಂದೆ ಹಾಜರಾಗಬೇಕು ಎಂದು ತಾಕೀತು ಮಾಡಿದ ಸುಪ್ರೀಂ ಕೋರ್ಟ್, ವಿಚಾರಣೆಯನ್ನು ನ.27ಕ್ಕೆ ಮುಂದೂಡಿದೆ.
ಶೆಲ್ಟರ್​ ಹೋಮ್​ ಸೆಕ್ಸ್ ಹಗರಣದಲ್ಲಿ ತಮ್ಮ ಪತಿಯ ಪಾತ್ರವಿರುವ ಹಿನ್ನೆಲೆಯಲ್ಲಿ ಮಂಜು ವರ್ಮಾ ಅವರು ಕೆಲ ತಿಂಗಳ ಹಿಂದೆ ಸಚಿವ ಸ್ಥಾನಕ್ಕೆ ರಾಜೀನಾಮೆಯನ್ನೂ ಸಲ್ಲಿಸಿದ್ದರು.
ತನಿಖೆಗೆಂದು ಸಿಬಿಐ ಅಧಿಕಾರಿಗಳು ಮಂಜು ವರ್ಮಾ ಅವರ ಪಾಟ್ನಾ ಮತ್ತು ಬೇಗುಸರಾಯಿ ನಿವಾಸದ ಮೇಲೆ ದಾಳಿ ನಡೆಸಿದಾಗ ಅವರ ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರಗಳು ಪತ್ತೆಯಾಗಿದ್ದವು. ಈ ವಿಚಾರವಾಗಿ ಮಂಜು ವರ್ಮಾ ಅವರನ್ನು ಬಂಧಿಸಿ ಕರೆತರುವಂತೆ ಸುಪ್ರೀಂಕೋರ್ಟ್​ ಬಿಹಾರ ಪೊಲೀಸರಿಗೆ ಸೂಚನೆ ನೀಡಿದೆ. ಆದರೆ, ಅವರ ಪತ್ತೆಗಾಗಿ ತಿಂಗಳಿಂದ ಪ್ರಯತ್ನಿಸುತ್ತಿರುವ ಪೊಲೀಸರು ಆ ಕಾರ್ಯದಲ್ಲಿ ವಿಫಲರಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

SCROLL FOR NEXT