ಬಂದರು ಉದ್ಘಾಟಿಸುತ್ತಿರುವ ಪ್ರಧಾನಿ ಮೋದಿ 
ದೇಶ

ವಾರಣಾಸಿಯಲ್ಲಿ ದೇಶದ ಮೊದಲ ಒಳನಾಡು ಬಂದರು ಉದ್ಘಾಟಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸ್ವಕ್ಷೇತ್ರ ವಾರಣಾಸಿಯಲ್ಲಿ ದೇಶದ ಮೊದಲ ಒಳನಾಡು ಬಂದರನ್ನು....

ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸ್ವಕ್ಷೇತ್ರ ವಾರಣಾಸಿಯಲ್ಲಿ ದೇಶದ ಮೊದಲ ಒಳನಾಡು ಬಂದರನ್ನು ಸೋಮವಾರ ಲೋಕಾರ್ಪಣೆ ಮಾಡಿದರು. 
ದೇಶದಲ್ಲಿ ಸಮುದ್ರ ಮಾರ್ಗದಲ್ಲಿ ಸಾರಿಗೆ ಸಾಮಾನ್ಯ. ಆದರೆ ಇದೀಗ ಒಳನಾಡಿನ ಜಲ ಮಾರ್ಗಗಳ ಸದ್ಬಳಕೆಗೆ ಕೇಂದ್ರ ಸರ್ಕಾರ ಕ್ರಾಂತಿಕಾರಕ ಯೋಜನೆ ರೂಪಿಸಿದ್ದು, ಅದರ ಭಾಗವಾಗಿ ಪ್ರಧಾನಿ ಮೋದಿ ಹಾಗೂ ಬಂದರು ಸಚಿವ ನಿತಿನ್ ಗಡ್ಕರಿ ಅವರು ಇಂದು ಗಂಗಾ ನದಿಯ ಮೇಲೆ  ನಿರ್ಮಾಣಗೊಂಡಿರುವ ಒಳನಾಡು ಬಂದರನ್ನು ಉದ್ಘಾಟಿಸಿದರು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಈ ಒಳನಾಡು ಬಂದರು ಉತ್ತರ ಪ್ರದೇಶದ ಹಾಲ್ದಿಯಾ ದಿಂದ ಆರಂಭಗೊಂಡು ಪಶ್ಚಿಮ ಬಂಗಾಳದವರೆಗೆ ಸಾಗುತ್ತದೆ.
ಅಕ್ಟೋಬರ್ 30ರಂದು ಪೆಪ್ಸಿಕೋ ಇಂಡಿಯಾಗೆ ಸೇರಿದ ಭಾರತದ ಮೊಟ್ಟ ಮೊದಲ ಒಳನಾಡು ಸರಕು ಹಡಗು, ಸರಕು ತುಂಬಿಕೊಂಡು ಕೋಲ್ಕತ್ತಾದಿಂದ ಸಾಗಿ ಬಂದಿದೆ. ಇಂದು ಈ ಹಡಗು​ ವಾರಣಾಸಿಗೆ ಬಂದು ತಲುಪಿದ್ದು, ಮೋದಿ ಇದನ್ನು ಬರಮಾಡಿಕೊಂಡರು. 
ಈ ಮಾರ್ಗ ರಾಷ್ಟ್ರೀಯ ಜಲ ಮಾರ್ಗ-1 ಎಂದು ಹೆಸರು ಪಡೆದಿದ್ದು, ಭಾರತ ತನ್ನೆಲ್ಲ ಒಳ ನಾಡಿನ ಜಲ ಮಾರ್ಗಗಳನ್ನು ಬಳಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel