ನರೇಂದ್ರ ಮೋದಿ 
ದೇಶ

ಮೋದಿಗೆ ಮುಜುಗರ ತಪ್ಪಿಸಲು ರಾಫೆಲ್, ನೋಟ್ ಬ್ಯಾನ್ ಬಗ್ಗೆ ಸಿಎಜಿ ವರದಿ ಉದ್ದೇಶಪೂರ್ವಕ ವಿಳಂಬ: ಮಾಜಿ ಅಧಿಕಾರಿಗಳು

ನೋಟು ಅಮಾನ್ಯೀಕರಣ ಮತ್ತು ರಾಫೆಲ್ ಡೀಲ್ ಬಗ್ಗೆ ವರದಿ ನೀಡಲು ಸಿಎಜಿ ಉದ್ದೇಶಪೂರ್ವಕವಾಗಿಯೇ ವಿಳಂಬ ಮಾಡುತ್ತಿದೆ...

ನವದೆಹಲಿ: ನೋಟು ಅಮಾನ್ಯೀಕರಣ ಮತ್ತು ರಾಫೆಲ್ ಡೀಲ್ ಬಗ್ಗೆ ವರದಿ ನೀಡಲು ಸಿಎಜಿ ಉದ್ದೇಶಪೂರ್ವಕವಾಗಿಯೇ ವಿಳಂಬ ಮಾಡುತ್ತಿದೆ ಎಂದು ಸುಮಾರು 60 ನಿವೃತ್ತ ಅಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಸಿಎಜಿಗೆ ಪತ್ರ ಬರೆದಿರುವ ನಿವೃತ್ತ ಅಧಿಕಾರಿಗಳು, ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರಕ್ಕೆ ಮುಜುಗರ ಉಂಟು ಮಾಡಬಾರದು ಎಂಬ ಉದ್ದೇಶದಿಂದ ನೋಟ್ ಬ್ಯಾನ್ ಮತ್ತು ರಾಫೆಲ್ ಡೀಲ್ ಕುರಿತು ಸಿಎಜಿ ವರದಿ ವಿಳಂಬ ಮಾಡಲಾಗುತ್ತಿದೆ ಎಂದು ದೂರಿದ್ದಾರೆ.
ರಾಫೆಲ್ ಯುದ್ಧ ವಿಮಾನ ಖರೀದಿಯ ಕುರಿತು ಮತ್ತು ನೋಟು ಅಮಾನ್ಯೀಕರಣದ ಆಡಿಟ್ ವರದಿಯನ್ನು ಅನಧಿಕೃತವಾಗಿ ವಿಳಂಬ ಮಾಡುತ್ತಿರುವುದಕ್ಕೆ ತೀವ್ರ ಕಳವಳ ವ್ಯಕ್ತಪಡಿಸಿರುವ ನಿವೃತ್ತ ಅಧಿಕಾರಿಗಳು, ಈ ಕುರಿತ ಸಿಎಜಿ ವರದಿಯನ್ನು ಸಂಸತ್ ಚಳಿಗಾಲದ ಅಧಿವೇಶನದಲ್ಲಿ ಮಂಡಿಸಬೇಕು ಎಂದು ಒತ್ತಾಯಿಸಿದ್ದಾರೆ.
ನೋಟ್ ಬ್ಯಾನ್ ಮತ್ತು ರಾಫೆಲ್ ಡೀಲ್ ಕುರಿತ ಆಡಿಟ್ ವರದಿಯನ್ನು ಸಕಾಲದಲ್ಲಿ ಮಂಡಿಸುವಲ್ಲಿ ಸಿಎಜೆ ವಿಫಲವಾಗಿದ್ದು, ಇದನ್ನು ಪಕ್ಷಪಾತದ ಕ್ರಮವೆಂದು ಪರಿಗಣಿಸಬಹುದು ಮತ್ತು ಸಂಸ್ಥೆಯ ವಿಶ್ವಾಸರ್ಹತೆಗೆ ಧಕ್ಕೆಯಾಗಲಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ನಿವೃತ್ತ ಅಧಿಕಾರಿಗಳ ಪತ್ರದ ಬಗ್ಗೆ ಮಹಾಲೇಖಪಾಲ(ಸಿಎಜಿ) ಶಶಿಕಾಂತ್ ಶರ್ಮಾ ಅವರು ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT