ಸಂಗ್ರಹ ಚಿತ್ರ 
ದೇಶ

ಶಬರಿಮಲೆ ವಿವಾದ: ತೀರ್ಪು ಮರುಪರಿಶೀಲನಾ ಅರ್ಜಿ ವಿಚಾರಣೆ ಮಧ್ಯಾಹ್ನ 3ಕ್ಕೆ

ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲ ಪ್ರವೇಶಕ್ಕೆ ಎಲ್ಲಾ ವಯೋಮಾನದ ಮಹಿಳೆಯರಿಗೂ ಅವಕಾಶ ನೀಡಿರುವ ತೀರ್ಪು ಆಕ್ಷೇಪಿಸಿ ಸಲ್ಲಿಕೆಯಾಗಿರುವ ಪುನರ್ ಪರಿಶೀಲನಾ ಅರ್ಜಿಗಳ ವಿಚಾರಣೆಯನ್ನು ಮಂಗಳವಾರ ಮಧ್ಯಾಹ್ನ 3 ಗಂಟೆಗೆ ನಡೆಸುವುದಾಗಿ ಸುಪ್ರೀಂಕೋರ್ಟ್ ಹೇಳಿದೆ...

ನವದೆಹಲಿ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲ ಪ್ರವೇಶಕ್ಕೆ ಎಲ್ಲಾ ವಯೋಮಾನದ ಮಹಿಳೆಯರಿಗೂ ಅವಕಾಶ ನೀಡಿರುವ ತೀರ್ಪು ಆಕ್ಷೇಪಿಸಿ ಸಲ್ಲಿಕೆಯಾಗಿರುವ ಪುನರ್ ಪರಿಶೀಲನಾ ಅರ್ಜಿಗಳ ವಿಚಾರಣೆಯನ್ನು ಮಂಗಳವಾರ ಮಧ್ಯಾಹ್ನ 3 ಗಂಟೆಗೆ ನಡೆಸುವುದಾಗಿ ಸುಪ್ರೀಂಕೋರ್ಟ್ ಹೇಳಿದೆ. 
ಮಹಿಳೆಯರ ಪ್ರವೇಶಕ್ಕೆ ನಿರಾಕರಿಸಿದ್ದ ದೇಗುಲದ ನಿಲುವಿನ ವಿರುದ್ಧ ಈ ಹಿಂದೆ ಸುಪ್ರೀಂಕೋರ್ಟ್ ಕಿಡಿಕಾರಿತ್ತು. ಈ ಸಂಬಂಧ ಸೆ.28 ರಂದು ತೀರ್ಪು ನೀಡಿತ್ತು. 
ದೇವಾಲಯ ಸ್ಥಾಪಿಸಿ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ ನೀಡಿದ ಬಳಿಕ ಪ್ರವೇಶಕ್ಕೆ ಸಂಬಂಧಿಸಿದಂತೆ ಯಾರ ಮೇಲೆಯೂ ನಿರ್ಬಂಧ ಹೇರುವಂತಿಲ್ಲ ಎಂದು ಹೇಳಿತ್ತು. ಸುಪ್ರೀಂಕೋರ್ಟ್ ನ ಈ ತೀರ್ಪಿಗೆ ಕೇರಳ ರಾಜ್ಯದಾದ್ಯಂತ ತೀವ್ರ ಪ್ರತಿಭಟನೆ ಹಾಗೂ ಹಿಂಸಾಚಾರ ಸೃಷ್ಟಿಯಾಗಿತ್ತು. 
ಸುಪ್ರೀಂಕೋರ್ಟ್ ತೀರ್ಪು ಆಕ್ಷೇಪಿಸಿ ಈವರೆಗೂ 48 ಅರ್ಜಿಗಳು ಸಲ್ಲಿಕೆಯಾಗಿದ್ದು, ಅವುಗಳ ವಿಚಾರಣೆಯನ್ನು ಮುಖ್ಯ ನ್ಯಾಯಾಮೂರ್ತಿ ರಂಜನ್ ಗೊಗೋಯಿ ಹಾಗೂ ನ್ಯಾಯಾಮೂರ್ತಿಗಳಾದ ಆರ್.ಎಫ್. ನಾರೀಮನ್, ಎ.ಎಂ.ಖಾನ್ವಿಲ್ಕರ್, ಡಿ.ವೈ.ಚಂದ್ರಚೂಡ್ ಮತ್ತು ಇಂದು ಮಲ್ಹೋತ್ರ ಅವರ ಪೀಠ ವಿಚಾರಣೆ ನಡೆಸಲಿದೆ. ಪ್ರಸ್ತುತ ಸಲ್ಲಿಕೆಯಾಗಿರುವ ಮರು ಪರಿಶೀಲನಾ ಅರ್ಜಿಗಳ ವಿಚಾರಣೆ ಬಳಿವಷ್ಟೇ ನಂತರ ಸಲ್ಲಿಕೆಯಾಗಿರುವ ಹೊಸ ಅರ್ಜಿಗಳ ವಿಚಾರಣೆ ನಡೆಸಲಾಗುತ್ತದೆ ಎಂದು ನ್ಯಾಯಾಲಯ ತಿಳಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT