ಸಂಗ್ರಹ ಚಿತ್ರ 
ದೇಶ

ಮಹಾರಾಷ್ಟ್ರ: ಮಹಿಳೆ ಹೊಟ್ಟೆಯಲ್ಲಿ ಮಂಗಳಸೂತ್ರ, ಬೋಲ್ಟ್, ಪಿನ್'ಗಳು ಸೇರಿ 1.5 ಕೆಜಿ ವಸ್ತು ಪತ್ತೆ!

ಮಂಗಳಸೂತ್ರ, ನಟ್'ಗಳು, ಸೇಫ್ಟಿ ಪಿನ್ ಗಳು, ಯು-ಪಿನ್ ಗಳು, ತಾಮ್ರದ ರಿಂದ್ ಸೇರಿ ಸುಮಾರು 1.5 ಕೆಜಿ ಯಷ್ಟು ವಸ್ತುಗಳು ಮಾನಸಿಕ ಅಸ್ವಸ್ತ ಮಹಿಳೆಯೊಬ್ಬರ ಹೊಟ್ಟೆಯಲ್ಲಿ ಪತ್ತೆಯಾಗಿವೆ...

ಅಹಮದಾಬಾದ್: ಮಂಗಳಸೂತ್ರ, ನಟ್'ಗಳು, ಸೇಫ್ಟಿ ಪಿನ್ ಗಳು, ಯು-ಪಿನ್ ಗಳು, ತಾಮ್ರದ ರಿಂದ್ ಸೇರಿ ಸುಮಾರು 1.5 ಕೆಜಿ ಯಷ್ಟು ವಸ್ತುಗಳು ಮಾನಸಿಕ ಅಸ್ವಸ್ತ ಮಹಿಳೆಯೊಬ್ಬರ ಹೊಟ್ಟೆಯಲ್ಲಿ ಪತ್ತೆಯಾಗಿವೆ. 
ಮಹಾರಾಷ್ಟ್ರದ ಶಿರಡಿ ಮೂಲದವರಾಗಿರುವ ಸಂಗೀತ ಎಂಬ ಮಹಿಳೆ ಅತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. 
ಸಂಗೀತಾ ಅವರು ಮಾನಸಿಕ ಅಸ್ವಸ್ಥರಾಗಿದ್ದು, ಬೀದಿಗಳಲ್ಲಿ ಅಲೆದಾಡುತ್ತಿದ್ದರು. ನ್ಯಾಯಾಲಯದ ಆದೇಶದಂತೆಯೇ ಅವರನ್ನು ಮಾನಸಿಕ ಆರೋಗ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. 
ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಅತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ಬಳಿಕ ಅ.31 ರಂದು ನಾಗರೀಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಳಿಕ ಹೊಟ್ಟೆ ಕಲ್ಲಿನಂತೆ ಗಟ್ಟಿಯಾಗಿರುವುದು ಕಂಡು ಬಂದಿದೆ. ಬಳಿಕ ಎಕ್ಸ್'ರೇ ತೆಗೆದ ವೈದ್ಯರಿಗೆ ಮಹಿಳೆಯ ಶ್ವಾಸಕೋಶದಿಂದ ಸೇಫ್ಟಿ ಪಿನ್ ಗಳು ಹೊರಗೆ ಬಂದಿರುವುದು ಕಂಡು ಬಂದಿದೆ. ಇದರಂತೆ ಪಿನ್ ವೊಂದು ಮಹಿಳೆಯ ಹೊಟ್ಟೆಯನ್ನು ಸೀಳಿದೆ. ಕೂಡಲೇ ಮಹಿಳೆಗೆ ಶಸ್ತ್ರಚಿಕಿತ್ಸೆ ನಡೆಸಲು ವೈದ್ಯರು ಮುಂದಾಗಿದ್ದಾರೆ. 
ಇದರಂತೆ ಸುಮಾರು ಎರಡೂವರೆ ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿರುವ ವೈದ್ಯರು ಸುಮಾರು 1.5 ಕೆಜಿಯಷ್ಟು ಪಿನ್'ಗಳು, ಮಂಗಳಸೂತ್ರ, ಹೇರ್ ಪಿನ್, ಯು ಪಿನ್, ಬಳೆಗಳನ್ನು ಹೊರಗೆ ತೆಗೆದಿದ್ದಾರೆ. 
ಮಹಿಳೆ ಅಕ್ಯೂಫಾಗಿಯಾ ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದು, ಚೂಪಾದ ವಸ್ತುಗಳನ್ನು ತಿನ್ನುವುದು ಈ ರೋಗದ ಲಕ್ಷಣವಾಗಿದೆ. ಈ ಕಾಯಿಲೆ ಸಾಮಾನ್ಯವಾಗಿ ಮಾನಸಿಕ ಅಸ್ವಸ್ತರಲ್ಲಿಯೇ ಹೆಚ್ಚು ಕಾಣಿಸಿಕೊಳ್ಳುತ್ತದೆ ಎಂದು ವೈದ್ಯರು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT