ದೇಶ

ನ.17 ರಂದು ಶಬರಿಮಲೆಗೆ ತೆರಳಲಿರುವ ತೃಪ್ತಿ ದೇಸಾಯಿ

Srinivas Rao BV
ತಿರುವನಂತಪುರಂ: ಶನಿ ಶಿಂಗ್ಣಾಪುರ ದೇವಾಲಯಕ್ಕೆ ಮಹಿಳೆಯರ ಪ್ರವೇಶ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ ಸಾಮಾಜಿಕ ಕಾರ್ಯಕರ್ತೆ ತೃಪ್ತಿ ದೇಸಾಯಿ ನ.17 ರಂದು ಶಬರಿಮಲೆಗೆ ಹೋಗುವುದಾಗಿ ಹೇಳಿದ್ದಾರೆ. 
ಮದಲ-ಮಕರವಿಲಕ್ಕು ಪೂಜೆ ಶನಿವಾರದಿಂದ ಪ್ರಾರಂಭವಾಗಲಿದ್ದು, ವಯಸ್ಸಿನ ಮಿತಿ ಇಲ್ಲದೇ ಮಹಿಳೆಯರಿಗೆ ಪ್ರವೇಶ ನೀಡಲು ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಶಬರಿಮಲೆ ದೇವಾಲಯಕ್ಕೆ ನ.17 ರಂದು ಭೇಟಿ ನೀಡುವುದಾಗಿ ತೃಪ್ತಿ ದೇಸಾಯಿ ಹೇಳಿದ್ದಾರೆ. ದೇವಾಲಯಕ್ಕೆ ಭೇಟಿ ನೀಡಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ತಮಗೆ ಬೆದರಿಕೆ ಬರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಭದ್ರತೆ ನೀಡುವಂತೆ ಕೇರಳ ಸಿಎಂ ವಿಜಯ್ ಪಿಣರಾಯಿ ಅವರಿಗೆ ಇ-ಮೇಲ್ ಮೂಲಕ ಮನವಿ ಸಲ್ಲಿಸಿದ್ದಾರೆ. 
ಶಬರಿಮಲೆ ದೇವಾಲಯ ದರ್ಶನ ಮಾಡದೇ ಮಹಾರಾಷ್ಟ್ರಕ್ಕೆ ವಾಪಸ್ ಬರುವುದಿಲ್ಲ ಎಂದು ತೃಪ್ತಿ ದೇಸಾಯಿ ಹೇಳಿದ್ದು ಸರ್ಕಾರ ನಮಗೆ ಭದ್ರತೆ ನೀಡಲಿದೆ ಎಂಬ ಭರವಸೆಯಲ್ಲಿರುವುದಾಗಿ ಇ-ಮೇಲ್ ನಲ್ಲಿ ಹೇಳಿದ್ದಾರೆ. 
SCROLL FOR NEXT