ಸಾಂದರ್ಭಿಕ ಚಿತ್ರ 
ದೇಶ

ಇನ್ಮುಂದೆ ಚಾಲಕರಿಗೆ ಎಲೆಕ್ಟ್ರಾನಿಕ್ ರೂಪದಲ್ಲಿ ವಾಹನ ದಾಖಲಾತಿ ಕೊಂಡೊಯ್ಯಲು ಅವಕಾಶ

ಕೇಂದ್ರ ಮೋಟಾರು ವಾಹನ ಕಾಯ್ದೆಗೆ ಕೆಲವು ತಿದ್ದುಪಡಿ ತಂದು ಹೆದ್ದಾರಿ ಮತ್ತು ಭೂ ಸಾರಿಗೆ ...

ನವದೆಹಲಿ: ಕೇಂದ್ರ ಮೋಟಾರು ವಾಹನ ಕಾಯ್ದೆಗೆ ಕೆಲವು ತಿದ್ದುಪಡಿ ತಂದು ಹೆದ್ದಾರಿ ಮತ್ತು ಭೂ ಸಾರಿಗೆ ಸಚಿವಾಲಯ ಜಾರಿಗೆ ತಂದಿದೆ.

ಹೊಸ ಕಾನೂನಿನಡಿಯಲ್ಲಿ, 8 ವರ್ಷದವರೆಗಿನ ಸಾಗಾಟ ವಾಹನಗಳಿಗೆ ವರ್ಷಕ್ಕೆ 2 ಬಾರಿ ಫಿಟ್ ನೆಸ್  ಸರ್ಟಿಫಿಕೇಟ್ ನವೀಕರಣ, 8 ವರ್ಷಕ್ಕಿಂತ ಹೆಚ್ಚಾದ ವಾಹನಗಳಿಗೆ ವರ್ಷಕ್ಕೆ ಒಂದು ಬಾರಿ ನವೀಕರಣ ಹೊಂದಿರುತ್ತದೆ. ಹೊಸ ವಾಹನಗಳಿಗೆ ದಾಖಲಾತಿ ಸಂದರ್ಭದಲ್ಲಿ ಯಾವುದೇ ಫಿಟ್ ನೆಸ್ ಸರ್ಟಿಫಿಕೇಟ್ ನ ಅವಶ್ಯಕತೆಯಿರುವುದಿಲ್ಲ. ಅವುಗಳಿಗೆ ದಾಖಲಾತಿಯಾದ ಎರಡು ವರ್ಷಗಳ ನಂತರ ಫಿಟ್ ನೆಸ್ ಸರ್ಟಿಫಿಕೇಟ್ ಮಾಡಿಸಿಕೊಂಡರೆ ಸಾಕಾಗುತ್ತದೆ ಎಂದು ಕೇಂದ್ರ ಸಾರಿಗೆ ಸಚಿವಾಲಯದ ಕರಡು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಸಚಿವಾಲಯದ ಅಧಿಕಾರಿಗಳು ಹೇಳುವ ಪ್ರಕಾರ, ಪ್ರಾಧಿಕಾರದ ಅಗತ್ಯಗಳಿಗೆ ಈ ಕ್ರಮದಿಂದ ನೆರವಾಗುತ್ತದೆ, ಭ್ರಷ್ಟಾಚಾರವನ್ನು ತಡೆಗಟ್ಟಿ ಸಾರಿಗೆ ಇಲಾಖೆಯ ದಕ್ಷತೆಯನ್ನು ಹೆಚ್ಚಿಸುತ್ತದೆ.

138ಬಿ ನಿಯಮಕ್ಕೆ ಸಂಬಂಧಪಟ್ಟಂತೆ ತಿದ್ದುಪಡಿಯಲ್ಲಿ, ಸಾಮಾನುಗಳನ್ನು ಹೊತ್ತೊಯ್ಯುವ ವಾಹನಗಳನ್ನು ಕಾರ್ಗೊ ಹೊತ್ತೊಯ್ಯಲು ಅನುವು ಮಾಡಿಕೊಡಲಾಗುವುದಿಲ್ಲ. ವಾಹನಗಳಿಗೆ ಸಂಬಂಧಪಟ್ಟ ದಾಖಲೆಗಳನ್ನು ಸಲ್ಲಿಸಲು ಕೂಡ ತಿದ್ದುಪಡಿ ಸಹಾಯ ಮಾಡುತ್ತದೆ.

ದಾಖಲಾತಿ, ಇನ್ಸೂರೆನ್ಸ್, ಫಿಟ್ ನೆಸ್, ಅನುಮತಿ, ಜಾರಿ ನಿರ್ದೇಶನಾಲಯ ಅಧಿಕಾರಿಗಳಿಗೆ ಚಾಲನಾ ಪರವಾನಗಿಯನ್ನು ಎಲೆಕ್ಟ್ರಾನಿಕ್ ರೂಪದಲ್ಲಿ ಮಾಡಲಾಗುತ್ತದೆ 138ನೇ ತಿದ್ದುಪಡಿ ಕಾನೂನು ಹೇಳುತ್ತದೆ.

ತಿದ್ದುಪಡಿಯಿಂದಾಗಿ ಇನ್ನು ಮುಂದೆ ವಾಹನ ಚಾಲನೆ ಮಾಡುವಾಗ ದಾಖಲೆಗಳನ್ನು ಹೊತ್ತೊಯ್ಯಬೇಕಾಗಿಲ್ಲ. ಐಟಿ ಕಾಯ್ದೆ ಪ್ರಕಾರ, ದಾಖಲಾತಿಗಳನ್ನು ಎಲೆಕ್ಟ್ರಾನಿಕ್ ರೂಪದಲ್ಲಿ ವಿವರಿಸಲಾಗಿದ್ದರೂ ಕೂಡ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಖಲಾತಿ ರೂಪದಲ್ಲಿ ಕೇಳುತ್ತಾರೆ. ಇನ್ನು ಮುಂದೆ ಈ ಪದ್ಧತಿಯಿರುವುದಿಲ್ಲ ಎಂದು ಅಧಿಕಾರಿಗಳು ಹೇಳುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT