ಮಾಜಿ ಕೇಂದ್ರ ಸಚಿವ ಶಶಿತರೂರ್ 
ದೇಶ

'ಚಾಯ್‌ವಾಲಾ ಪ್ರಧಾನಿಯಾಗಿದ್ದಾರೆ ಎಂದರೆ ಅದಕ್ಕೆ ಚಾಚಾ ನೆಹರೂ ಕಾರಣ': ಶಶಿ ತರೂರ್

ಇಂದು ದೇಶಕ್ಕೆ ಓರ್ವ ಚಾಯ್ ವಾಲಾ ಪ್ರಧಾನಿಯಾಗಿದ್ದಾರೆ ಎಂದರೆ ಅದಕ್ಕೆ ಕಾರಣ ಚಾಚಾ ನೆಹರೂ ಎಂದು ಮಾಜಿ ಕೇಂದ್ರ ಸಚಿವ ಶಶಿತರೂರ್ ಹೇಳಿದ್ದಾರೆ.

ನವದೆಹಲಿ: ಇಂದು ದೇಶಕ್ಕೆ ಓರ್ವ ಚಾಯ್ ವಾಲಾ ಪ್ರಧಾನಿಯಾಗಿದ್ದಾರೆ ಎಂದರೆ ಅದಕ್ಕೆ ಕಾರಣ ಚಾಚಾ ನೆಹರೂ ಎಂದು ಮಾಜಿ ಕೇಂದ್ರ ಸಚಿವ ಶಶಿತರೂರ್ ಹೇಳಿದ್ದಾರೆ.
ನೆಹರು ಜನ್ಮದಿನದಂದು ದೆಹಲಿಯಲ್ಲಿ ಆಯೋಜಿಸಿದ್ದ ತಮ್ಮ 'ನೆಹರೂ, ದಿ ಇನ್ವೆಂಷನ್‌ ಆಫ್‌ ಇಂಡಿಯಾ' ಪುಸ್ತಕ ಮರುಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ತರೂರ್, 'ಯಾವುದೇ ಭಾರತೀಯನೂ ಸಹ ಅತ್ಯುನ್ನತ ಮಟ್ಟಕ್ಕೆ ಏರಲು ಅವಕಾಶ ಇರುವ ಮಟ್ಟಿಗಿನ ಸಂಸ್ಥೆಗಳನ್ನು ಹಾಗೂ ವ್ಯವಸ್ಥೆಗಳನ್ನು ಚಾಚಾ ಜವಹರ್ ಲಾಲ್ ನೆಹರೂ ತಂದ ಕಾರಣ ಇಂದು ಚಾಯ್‌ವಾಲಾರಂಥವರು ಪ್ರಧಾನ ಮಂತ್ರಿಯಾಗಿದ್ದಾರೆ ಎಂದು ಹೇಳಿದ್ದಾರೆ.
'ನಾವಿಂದು ಮಾಡುತ್ತಿರುವ ಪ್ರತಿಯೊಂದಕ್ಕೂ ವೇದಿಕೆ ನಿರ್ಮಾಣ ಮಾಡಿಕೊಟ್ಟ ಭಾರತದ ಶ್ರೇಷ್ಠ ಪುತ್ರನ ವಿರುದ್ಧ ಇಂದು ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಮಟ್ಟದಲ್ಲಿ ಕಡೆಗಣಿಸುವ ಕೆಲಸ ನಡೆಯುತ್ತಿದೆ. ಭಾರತ ಇಂದು ಮಂಗಳಯಾನದ ಕುರಿತು ಹೆಮ್ಮೆ ಪಡುತ್ತಿದೆ, ಆದರೆ ಅದಕ್ಕೆ ಕಾರಣವಾದ ಇಸ್ರೋ ಸಂಸ್ಥೆಯನ್ನು ಹುಟ್ಟು ಹಾಕಿದವರು ಯಾರು? ದೇಶದ ಬಡವರೂ ಸಹ ಆಗಸದೆತ್ತರದ ಕನಸು ಕಾಣಲು ಕಲಿಸಿಕೊಟ್ಟವರು ಯಾರು? ಅಸಂಖ್ಯ ಯುವಕರನ್ನು ಸಿಲಿಕಾನ್‌ ವ್ಯಾಲಿಗೆ ಕಳುಹಿಸಿದ ಐಐಟಿಗಳನ್ನು ಸ್ಥಾಪಿಸಿದವರು ಯಾರು? ಅಲ್ಲಿರುವ ಶೇ.40ರಷ್ಟು ಸ್ಟಾರ್ಟಪ್‌ ಕಂಪನಿಗಳು ಇಂದು ಭಾರತೀಯರ ಕೈಯಲ್ಲಿ ಇವೆ ಎಂದರೆ ಅದಕ್ಕೆ ಕಾರಣ ಯಾರು?” ಎಂದು ತರೂರ್ ಕೇಳಿದರು.
ಇದೇ ವೇಳೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಎಐಸಿಸಿ ವರಿಷ್ಠೆ ಸೋನಿಯಾ ಗಾಂಧಿ, 'ನೆಹರೂರ ಅಪರೂಪದ ಇತಿಹಾಸವನ್ನು ಕಡೆಗಣಿಸುವ ಯತ್ನಗಳು ಇಂದು ಆಳುವ ವರ್ಗದಿಂದ ನಡೆಯುತ್ತಿವೆ' ಎಂದು ಹರಿಹಾಯ್ದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT