ಮಲ್ಲಿಕಾರ್ಜುನ ಖರ್ಗೆ 
ದೇಶ

ರಾಫೆಲ್ ಒಪ್ಪಂದ ಸ್ವಾತಂತ್ರ ಭಾರತದ ಅತಿ ದೊಡ್ಡ ಹಗರಣ - ಖರ್ಗೆ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರಸರ್ಕಾರ ರಾಫೆಲ್ ಯುದ್ದ ವಿಮಾನ ಖರೀದಿ ಪ್ರಕ್ರಿಯೆಯನ್ನು ತಿರುಚಿದೆ ಎಂದು ಆರೋಪಿಸಿರುವ ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ರಾಫೆಲ್ ಒಪ್ಪಂದ ಸ್ವಾತಂತ್ರ ಭಾರತದ ಅತಿದೊಡ್ಡ ಹಗರಣ ಎಂದಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರಸರ್ಕಾರ ರಾಫೆಲ್ ಯುದ್ದ ವಿಮಾನ ಖರೀದಿ ಪ್ರಕ್ರಿಯೆಯನ್ನು ತಿರುಚಿದೆ ಎಂದು ಆರೋಪಿಸಿರುವ ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ರಾಫೆಲ್ ಒಪ್ಪಂದ ಸ್ವಾತಂತ್ರ ಭಾರತದ ಅತಿದೊಡ್ಡ ಹಗರಣ ಎಂದಿದ್ದಾರೆ.

ಸುದ್ದಿಸಂಸ್ಥೆಯೊಂದರ ಜೊತೆ ಮಾತನಾಡಿದ ಖರ್ಗೆ, ಎಲ್ಲಾ ದುಡ್ಡು ನೇರವಾಗಿ  ಉದ್ಯಮಿಯೊಬ್ಬರ ಜೇಬು ಸೇರಿದೆ. ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ಈ ವಿಚಾರ ಪ್ರಸ್ತಾಪಿಸಲಾಗುವುದು, ಪ್ರತಿಪಕ್ಷಗಳ ಜೊತೆ ಸೇರಿ ಹೋರಾಟ ನಡೆಸಲಾಗುವುದು ಎಂದು ತಿಳಿಸಿದರು.

ರಾಫೆಲ್ ಒಪ್ಪಂದ ಸಂಬಂಧ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಹಿರಿಯ ನಾಯಕ ಕಪಿಲ್ ಸಿಬಲ್ ,  ಇಂತಹ ಖರೀದಿ ಪ್ರಕ್ರಿಯೆ ದೇಶದಲ್ಲಿಯೇ ನಡೆದಿಲ್ಲ.ಫ್ರಾನ್ಸ್ ಸರ್ಕಾರ   ನೇರವಾಗಿ ಗುತ್ತಿಗೆ ವ್ಯವಹಾರ ನಡೆಸಿಲ್ಲ. ಅಡ್ಡ ಮಾರ್ಗವಾಗಿ ಖರೀದಿ ಪ್ರಕ್ರಿಯೆ ನಡೆಸಿದೆ ಎಂದು ಆರೋಪಿಸಿದರು.

ಈ ಸಂಬಂಧ ಸುಪ್ರೀಂಕೋರ್ಟ್ ಗೆ ಸಲ್ಲಿಕೆಯಾಗಿರುವ ಅರ್ಜಿಗಳ  ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶ ರಂಜನ್ ಗೊಗೊಯ್ ಆರಂಭಿಸಿದ್ದು, ಸುರಕ್ಷತೆ ಹಾಗೂ ಭದ್ರತೆ ಕಾರಣದಿಂದ ವಿಮಾನಗಳ ಖರೀದಿ ಬೆಲೆಯನ್ನು ಬಹಿರಂಗಪಡಿಸಲು ಕೇಂದ್ರಸರ್ಕಾರ ನಿರಾಕರಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT