ಮಲ್ಲಿಕಾರ್ಜುನ ಖರ್ಗೆ 
ದೇಶ

ರಾಫೆಲ್ ಒಪ್ಪಂದ ಸ್ವಾತಂತ್ರ ಭಾರತದ ಅತಿ ದೊಡ್ಡ ಹಗರಣ - ಖರ್ಗೆ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರಸರ್ಕಾರ ರಾಫೆಲ್ ಯುದ್ದ ವಿಮಾನ ಖರೀದಿ ಪ್ರಕ್ರಿಯೆಯನ್ನು ತಿರುಚಿದೆ ಎಂದು ಆರೋಪಿಸಿರುವ ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ರಾಫೆಲ್ ಒಪ್ಪಂದ ಸ್ವಾತಂತ್ರ ಭಾರತದ ಅತಿದೊಡ್ಡ ಹಗರಣ ಎಂದಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರಸರ್ಕಾರ ರಾಫೆಲ್ ಯುದ್ದ ವಿಮಾನ ಖರೀದಿ ಪ್ರಕ್ರಿಯೆಯನ್ನು ತಿರುಚಿದೆ ಎಂದು ಆರೋಪಿಸಿರುವ ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ರಾಫೆಲ್ ಒಪ್ಪಂದ ಸ್ವಾತಂತ್ರ ಭಾರತದ ಅತಿದೊಡ್ಡ ಹಗರಣ ಎಂದಿದ್ದಾರೆ.

ಸುದ್ದಿಸಂಸ್ಥೆಯೊಂದರ ಜೊತೆ ಮಾತನಾಡಿದ ಖರ್ಗೆ, ಎಲ್ಲಾ ದುಡ್ಡು ನೇರವಾಗಿ  ಉದ್ಯಮಿಯೊಬ್ಬರ ಜೇಬು ಸೇರಿದೆ. ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ಈ ವಿಚಾರ ಪ್ರಸ್ತಾಪಿಸಲಾಗುವುದು, ಪ್ರತಿಪಕ್ಷಗಳ ಜೊತೆ ಸೇರಿ ಹೋರಾಟ ನಡೆಸಲಾಗುವುದು ಎಂದು ತಿಳಿಸಿದರು.

ರಾಫೆಲ್ ಒಪ್ಪಂದ ಸಂಬಂಧ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಹಿರಿಯ ನಾಯಕ ಕಪಿಲ್ ಸಿಬಲ್ ,  ಇಂತಹ ಖರೀದಿ ಪ್ರಕ್ರಿಯೆ ದೇಶದಲ್ಲಿಯೇ ನಡೆದಿಲ್ಲ.ಫ್ರಾನ್ಸ್ ಸರ್ಕಾರ   ನೇರವಾಗಿ ಗುತ್ತಿಗೆ ವ್ಯವಹಾರ ನಡೆಸಿಲ್ಲ. ಅಡ್ಡ ಮಾರ್ಗವಾಗಿ ಖರೀದಿ ಪ್ರಕ್ರಿಯೆ ನಡೆಸಿದೆ ಎಂದು ಆರೋಪಿಸಿದರು.

ಈ ಸಂಬಂಧ ಸುಪ್ರೀಂಕೋರ್ಟ್ ಗೆ ಸಲ್ಲಿಕೆಯಾಗಿರುವ ಅರ್ಜಿಗಳ  ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶ ರಂಜನ್ ಗೊಗೊಯ್ ಆರಂಭಿಸಿದ್ದು, ಸುರಕ್ಷತೆ ಹಾಗೂ ಭದ್ರತೆ ಕಾರಣದಿಂದ ವಿಮಾನಗಳ ಖರೀದಿ ಬೆಲೆಯನ್ನು ಬಹಿರಂಗಪಡಿಸಲು ಕೇಂದ್ರಸರ್ಕಾರ ನಿರಾಕರಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮಧ್ಯಾಹ್ನ 2.30ಕ್ಕೆ ಸಿದ್ದರಾಮಯ್ಯ ರಾಜೀನಾಮೆ; 3 ಗಂಟೆಗೆ ಪತ್ರಿಕಾಗೋಷ್ಠಿ; ಮುಂದಿನ CM ಡಿ.ಕೆ ಶಿವಕುಮಾರ್

ಮುಂದಿನ CM ಡಿಕೆ.ಶಿವಕುಮಾರ್: ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ, ಅಂದು-ಇಂದು-ಎಂದೆಂದೂ ಒಗ್ಗಟ್ಟೇ ನಮ್ಮ ಶಕ್ತಿ- ಕಾಂಗ್ರೆಸ್

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಕಣ್ಣೀರು ಹಾಕಿದ ಸಚಿವ ಸಂತೋಷ್ ಲಾಡ್; Video

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ನಿರ್ಗಮನ: ಕರ್ನಾಟಕದಲ್ಲಿ ಕಾಂಗ್ರೆಸ್‌ನ 'ಅಹಿಂದ ಮತಬ್ಯಾಂಕ್' ಮೇಲೆ ಪರಿಣಾಮ?

SCROLL FOR NEXT