ನಾಮಪತ್ರ ಸಲ್ಲಿಕೆ ಮಾಡಿದ ಕೆಸಿಆರ್ 
ದೇಶ

20 ಕೋಟಿಗೂ ಹೆಚ್ಚು ಆಸ್ತಿಯ ಒಡೆಯನಾದರೂ, ತೆಲಂಗಾಣ ಸಿಎಂ ಬಳಿ ಸ್ವಂತಕ್ಕೊಂದು ಕಾರಿಲ್ಲ!

20 ಕೋಟಿ ರೂಗೂ ಅಧಿಕ ಆಸ್ತಿಯ ಒಡೆಯನಾದರೂ ತೆಲಂಗಾಣ ಸಿಎಂ ಕೆ ಚಂದ್ರಶೇಖರ ರಾವ್ ಅವರ ಬಳಿ ಸ್ವಂತಕ್ಕೊಂದು ಕಾರು ಕೂಡ ಇಲ್ಲವಂತೆ....

ಹೈದರಾಬಾದ್: 20 ಕೋಟಿ ರೂಗೂ ಅಧಿಕ ಆಸ್ತಿಯ ಒಡೆಯನಾದರೂ ತೆಲಂಗಾಣ ಸಿಎಂ ಕೆ ಚಂದ್ರಶೇಖರ ರಾವ್ ಅವರ ಬಳಿ ಸ್ವಂತಕ್ಕೊಂದು ಕಾರು ಕೂಡ ಇಲ್ಲವಂತೆ....
ಅರೆ ಇದು ನಾವು ಹೇಳುತ್ತಿರುವುದಲ್ಲ.. ಸ್ವತಃ ಅವರೇ ತಮಗೆ ಸ್ವಂತ ಕಾರಿಲ್ಲ ಎಂದು ಪ್ರಮಾಣ ಪತ್ರ ಸಲ್ಲಿಕೆ ಮಾಡಿದ್ದಾರೆ. ಹೌದು.. ತೆಲಂಗಾಣ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಇಂದು ಗಜ್ವೆಲ್ ವಿಧಾನಸಭಾ ಕ್ಷೇತ್ರದಿಂದ ಕೆಸಿಆರ್ ನಾಮಪತ್ರ ಸಲ್ಲಿಕೆ ಮಾಡಿದರು. ಜಿ್ಲಾಧಿಕಾರಿ ಸ್ಮಿತಾ ಸಬರ್ವಾಲ್ ಅವರಿಗೆ ಕೆಸಿಆರ್ ನಾಮಪತ್ರದೊಂದಿಗೆ ತಮ್ಮ ಆಸ್ತಿ ಘೋಷಣೆ ಕುರಿತ ಪ್ರಮಾಣಪತ್ರವನ್ನೂ ಸಲ್ಲಿಕೆ ಮಾಡಿದರು. ಈ ವೇಳೆ ತಮ್ಮ ಆಸ್ತಿ ಘೋಷಣೆ ಮಾಡಿಕೊಂಡಿರುವ ಕೆಸಿಆರ್ ತಮ್ಮ ಬಳಿ ಒಟ್ಟು 22.61 ಕೋಟಿ ರೂ ಮೌಲ್ಯದ ಆಸ್ತಿ ಇದೆ ಎಂದು ಘೋಷಣೆ ಮಾಡಿಕೊಂಡಿದ್ದಾರೆ. ಅಲ್ಲದೆ ತಮ್ಮ ಬಳಿ ಸುಮಾರು 16 ಎಕರೆ ಕೃಷಿ ಭೂಮಿ ಇದ್ದು, ಸ್ವಂತ ಮನೆ ಇದೆ ಎಂದು ಹೇಳಿಕೊಂಡಿದ್ದಾರೆ.
ಕಳೆದ ವರ್ಷಕ್ಕಿಂತೆ ಕೆಸಿಆರ್ ಆಸ್ತಿ ಮೌಲ್ಯದಲ್ಲಿ ಸುಮಾರು 5.5 ಕೋಟಿ ರೂಗಳ ಆಸ್ತಿ ಮೌಲ್ಯ ಹೆಚ್ಚಾಗಿದ್ದು, ಅವರ ಬಳಿ ಒಟ್ಟು 22.61 ಕೋಟಿ ರೂ ಮೌಲ್ಯದ ಸ್ಥಿರ ಮತ್ತು ಚರಾಸ್ತಿಗಳಿವೆಯಂತೆ. 2014ರಲ್ಲಿ ಅವರು 15.95 ಕೋಟಿ ರೂಗಳ ಆಸ್ತಿ ಘೋಷಣೆ ಮಾಡಿದ್ದರು.
ಇಷ್ಟೆಲ್ಲಾ ಇದ್ದರೂ ತೆಲಂಗಾಣ ಸಿಎಂ ಬಳಿ ಸ್ವಂತಕ್ಕೊಂದು ಕಾರು ಇಲ್ಲವಂತೆ. ಅಚ್ಚರಿ ಎಂದರೆ ಅವರ ಪಕ್ಷದ ಚಿನ್ಹೆ ಕೂಡ ಕಾರೇ ಆಗಿದೆ. ಅಂತೆಯೇ ಪ್ರತ್ಯೇಕ ತೆಲಂಗಾಣ ರಾಜ್ಯ ಹೋರಾಟ ನಿಮಿತ್ತ ಅವರು ನಡೆಸಿದ್ದ ಪ್ರತಿಭಟನೆಗಳಿಂದಾಗಿ ಕೆಸಿಆರ್ ಮೇಲೆ ಒಟ್ಟು 64 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆಯಂತೆ. ಇಂದೀಗ ಆ ಪ್ರಕರಣಗಳ ವಿಚಾರಣೆ ನಡೆಯುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT