ಜೈಪುರ್: ರಾಜಸ್ಥಾನದಲ್ಲಿ ಅಧಿಕಾರ ಉಳಿಸಿಕೊಳ್ಳಲು ಶತಾಯಗತಾಯ ಯತ್ನಿಸುತ್ತಿರುವ ಬಿಜೆಪಿ ನಾಲ್ವರು ಸಚಿವರು ಸೇರಿದಂತೆ 43 ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಿದ್ದು, ಟಿಕೆಟ್ ವಂಚಿತ ಹಲವು ಶಾಸಕರು ಈಗಾಗಲೇ ಬೇರೆ ಪಕ್ಷಕ್ಕೆ ಜಿಗಿದಿದ್ದಾರೆ.
200 ಸದಸ್ಯ ಬಲದ ರಾಜಸ್ಥಾನ ವಿಧಾನಸಭೆಗೆ ಡಿಸೆಂಬರ್ 7ರಂದು ಚುನಾವಣೆ ನಡೆಯುತ್ತಿದ್ದು, ಆಡಳಿತರೂಢ ಬಿಜೆಪಿ ಈಗಾಗಲೇ ಅಭ್ಯರ್ಥಿಗಳ ಎರಡು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಶೀಘ್ರದಲ್ಲಿ ಮತ್ತೊಂದು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದೆ.
ಮೊದಲ ಮತ್ತು ಎರಡನೇ ಪಟ್ಟಿಯಲ್ಲಿ ನಾಲ್ವರು ಸಚಿವರು ಸೇರಿದಂತೆ 43 ಹಾಲಿ ಶಾಸಕರಿಗೆ ಕೇಸರಿ ಪಡೆ ಕೊಕ್ ನೀಡಿದ್ದು, ಈಗ ಭಿನ್ನಮತದ ಭೀತಿ ಎದುರಾಗಿದೆ.
ಮೊದಲ ಪಟ್ಟಿಯಲ್ಲಿ ಐದು ಬಾರಿ ಶಾಸಕರಾಗಿದ್ದ ಮಾಜಿ ಸಚಿವ ಸುರೇಂದ್ರ ಗೋಯಲ್ ಅವರಿಗೆ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಅವರು ಈಗಾಗಲೇ ಕಾಂಗ್ರೆಸ್ ಸೇರಿದ್ದು, ಹಲವು ಶಾಸಕರು ಅವರ ದಾರಿಯನ್ನೇ ತುಳಿಯುವ ಸಾಧ್ಯತೆ ಇದೆ.
ಟಿಕೆಟ್ ವಂಚಿತ ಬಿಜೆಪಿ ಶಾಸಕರ ಅಭಿಮಾನಿಗಳು ಮಂಗಳವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದು, ಬಿಜೆಪಿ ಮುಖಂಡರಿಗೆ ತಲೆನೋವಾಗಿ ಪರಿಣಮಿಸಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos