ಅಯ್ಯಪ್ಪ ಸ್ವಾಮಿ ಭಕ್ತಾಧಿಗಳು 
ದೇಶ

ಶಬರಿಮಲೆ ವಿವಾದ: ಕಗ್ಗಂಟು ಬಗೆಹರಿಸುವಲ್ಲಿ ಸರ್ವ ಪಕ್ಷ ಸಭೆ ವಿಫಲ

ಶಬರಿಮಲೆ ವಿವಾದ ಸಂಬಂಧ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ನೇತೃತ್ವದಲ್ಲಿ ಇಂದು ನಡೆದ ಸರ್ವ ಪಕ್ಷ ಸಭೆಯಲ್ಲಿ ಒಮ್ಮತ ಮೂಡದೇ ವಿಫಲವಾಗಿದೆ.

ತಿರುವನಂತಪುರಂ: ಕೇರಳದ ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ನಾಳೆಯಿಂದ ಮಂಡಲ ವಿಳಕ್ಕು ಮಹೋತ್ಸವ ಆರಂಭವಾಗಲಿದ್ದು, ಮಹಿಳೆಯರ ಪ್ರವೇಶ  ಕುರಿತಂತೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಅನುಷ್ಠಾನದ ಕಗ್ಗಂಟು ಬಗೆಹರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ನೇತೃತ್ವದಲ್ಲಿ ಇಂದು ನಡೆದ ಸರ್ವ ಪಕ್ಷ ಸಭೆಯಲ್ಲಿ ಒಮ್ಮತ ಮೂಡದೇ ವಿಫಲವಾಗಿದೆ.

ಪ್ರತಿಪಕ್ಷ ಯುಡಿಎಫ್ ಸಭೆಯನ್ನು ಬಹಿಷ್ಕರಿಸಿತು.  ಸುಪ್ರೀಂಕೋರ್ಟ್ ತೀರ್ಪನ್ನು ಅನುಷ್ಠಾನಗೊಳಿಸದೆ ಇರಲು ಸರ್ಕಾರ ಸಿದ್ಧವಿಲ್ಲ ಎಂದು  ಪಿಣರಾಯ್ ವಿಜಯನ್ ಪಿಣರಾಯ್ ಪುನರುಚ್ಚಸಿದರು. ಸರ್ಕಾರದ ನಿಲುವನ್ನು ಬಿಜೆಪಿ ಟೀಕಿಸಿತು.

ಸಭೆಯಿಂದ ಹೊರಗೆ ಬಂದು ಮಾತನಾಡಿದ  ಪ್ರತಿಪಕ್ಷ ನಾಯಕ ರಮೇಶ್  ಚೆನ್ನಿತಲಾ,  ಶಬರಿಮಲೆ ವಿವಾದವನ್ನು ಬಗೆಹರಿಸುವ ನಿಟ್ಟಿನಲ್ಲಿ ರಾಜ್ಯಸರ್ಕಾರಕ್ಕೆ ಇದು ದೊಡ್ಡ ಅವಕಾಶವಾಗಿದೆ. ಆದರೆ, ಸರ್ಕಾರ ಹಠ ಮಾರಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿದರು.

ಸರ್ಕಾರ ಬಿಜೆಪಿ ಹಾಗೂ ಆರ್ ಎಸ್ ಎಸ್ ಬೆಂಬಲಿಸುತ್ತಿದೆ. ಸರ್ವ ಪಕ್ಷ ಸಭೆ ಕೇವಲ  ಪ್ರಹಸನವಾಗಿದ್ದು, ಶಬರಿಮಲೆ ವಿವಾದಕ್ಕೆ ಸಂಬಂಧಿಸಿದಂತೆ ಏನಾದರೂ ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಅದಕ್ಕೆ ಮುಖ್ಯಮಂತ್ರಿಗಳೇ ಹೊಣೆ ಹೊರಬೇಕಾಗುತ್ತದೆ ಎಂದು ಚೆನ್ನಿತಾಲ ಎಚ್ಚರಿಕೆ ನೀಡಿದರು.

ನಂತರ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಪಿ ಎಸ್ ಶ್ರೀಧರನ್, ಸರ್ವಪಕ್ಷ ಸಭೆ ಸಿಪಿಎಂ ಕೇಂದ್ರ ಕಚೇರಿಯಲ್ಲಿ ರಚಿಸಿರುವ ನಾಟಕವಾಗಿದೆ. ಕೇರಳ ಸ್ಟಾಲಿನ್ ಅವರ ರಷ್ಯಾ ಅಲ್ಲ ಎಂಬುದನ್ನು ತೋರಿಸಲಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ  ಪಿಣರಾಯ್ ವಿಜಯನ್ . ಸುಪ್ರೀಂಕೋರ್ಟ್ ತೀರ್ಪು ಅನುಷ್ಠಾನ ಹಿನ್ನೆಲೆಯಲ್ಲಿ ಸರ್ಕಾರ ಬೇರೆ ನಿಲುವು ತಾಳುವುದಿಲ್ಲ. ಸಂವಿಧಾನದಿಂದ ನೀಡಲ್ಪಟ್ಟಿರುವ ಮೂಲಭೂತ ಹಕ್ಕುಗಳ ಉಲ್ಲಂಘನೆ ಸಾಧ್ಯವಿಲ್ಲ ಎಂದು ಹೇಳಿದರು.

ಮಹಿಳೆಯರಿಗೆ ಪ್ರತ್ಯೇಕ ದಿನಗಳಲ್ಲಿ ಶಬರಿಮಲೆಗೆ ತೆರಳಲು ಅವಕಾಶ ಕೊಡುವಂತೆ ಹೇಳುತ್ತಿದ್ದರೂ  ಪ್ರತಿಪಕ್ಷಗಳು ಕೇಳುತ್ತಿಲ್ಲ. ಸರ್ಕಾರ ಭಕ್ತಾಧಿಗಳೊಂದಿಗೆ ಇದ್ದು, ಎಲ್ಲಾ ರಕ್ಷಣೆ ನೀಡಲಾಗುವುದು ಎಂದು ಪಿಣರಾಯ್  ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT