ರಾಹುಲ್ ಗಾಂಧಿ 
ದೇಶ

ನೋಟು ಅಮಾನ್ಯೀಕರಣ ಸ್ವಾತಂತ್ರ ಭಾರತದ ಅತಿದೊಡ್ಡ ಹಗರಣ: ರಾಹುಲ್ ಗಾಂಧಿ

ನೋಟು ಅಮ್ಯಾನೀಕರಣ ಸ್ವಾತಂತ್ರ ಭಾರತದ ಅತಿ ದೊಡ್ಡ ಹಗರಣ ಎಂದಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಬಡವರ ಹಣವನ್ನು ಲೂಟಿ ಮಾಡಿ ಅದನ್ನು ಕೆಲವೇ ಶ್ರೀಮಂತರಿಗೆ ನೀಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಡಿಯೋರಿ : ನೋಟು ಅಮ್ಯಾನೀಕರಣ ಸ್ವಾತಂತ್ರ ಭಾರತದ ಅತಿ ದೊಡ್ಡ ಹಗರಣ ಎಂದಿರುವ ಎಐಸಿಸಿ  ಅಧ್ಯಕ್ಷ ರಾಹುಲ್ ಗಾಂಧಿ  ಪ್ರಧಾನಿ ನರೇಂದ್ರ ಮೋದಿ ಬಡವರ ಹಣವನ್ನು ಲೂಟಿ ಮಾಡಿ ಅದನ್ನು  ಕೆಲವೇ ಶ್ರೀಮಂತರಿಗೆ ನೀಡುತ್ತಿದ್ದಾರೆ  ಎಂದು ಗಂಭೀರ ಆರೋಪ ಮಾಡಿದ್ದಾರೆ.

ನವೆಂಬರ್ 28 ರಂದು  ಚುನಾವಣೆ ನಡೆಯಲಿರುವ ಮಧ್ಯಪ್ರದೇಶ ಚುನಾವಣೆ ಹಿನ್ನೆಲೆಯಲ್ಲಿ ಡಿಯೋರಿಯಲ್ಲಿಂದು  ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲಿನ ಭ್ರಷ್ಟಾಚಾರ ತಡೆಗಟ್ಟುವ ಬಗ್ಗೆ ಹಾಗೂ ದೇಶದ ಕಾವಲುಗಾರ ಎಂಬ ಬಗ್ಗೆ ಮಾತನಾಡುವುದಿಲ್ಲ. ಒಂದು ವೇಳೆ ಮೋದಿ ಚೌಕಿದಾರ ಎಂದರೆ ಚೌಕಿದಾರ ಕಳ್ಳ ಎಂದು ದೇಶದ ಜನತೆ ಹೇಳುತ್ತಾರೆ ಎಂದರು.

ವಾಯುಪಡೆ ಮುಖ್ಯಸ್ಥರು ಹಾಗೂ ರಕ್ಷಣಾ ಸಚಿವರಿಗೆ ಮಾಹಿತಿ ನೀಡಿದೆ ನರೇಂದ್ರ ಮೋದಿ ಹೆಚ್ ಎಎಲ್ ನಿಂದ ಕಡಿಮೆ ಬೆಲೆಯಲ್ಲಿ ವಿಮಾನ ಖರೀದಿಸದೆ ಡೆಸಾಲ್ಟ್ ವಿಮಾನಯಾನ ಕಂಪನಿಯಿಂದ ದೊಡ್ಡ ಮೊತ್ತದಲ್ಲಿ  ರಾಫೇಲ್ ಯುದ್ದ ವಿಮಾನ ಖರೀದಿಸುತ್ತಿದ್ದಾರೆ ಎಂದು ಹೇಳಿದರು.

ರಾಫೆಲ್ ಯುದ್ದ ವಿಮಾನ ಖರೀದಿ ಒಪ್ಪಂದದಲ್ಲಿ ಪ್ರಧಾನಿ ನರೇಂದ್ರ ಮೋದಿ  ಅನಿಲ್ ಅಂಬಾನಿಗೆ 30 ಸಾವಿರ ಕೋಟಿ ರೂಪಾಯಿ ನೀಡಿದ್ದಾರೆ. ಇದನ್ನ ದೇಶದ ಕಾವಲುದಾರರೇ ಮಾಡಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

Udaipur: ನಿಜಕ್ಕೂ ಅಚ್ಚರಿ, 55ನೇ ವಯಸ್ಸಿನಲ್ಲಿ 17ನೇ ಮಗುವಿಗೆ ತಾಯಿಯಾದ ಮಹಿಳೆ!

SCROLL FOR NEXT