ಸಂಗ್ರಹ ಚಿತ್ರ 
ದೇಶ

ಪನ್ಸಾರೆ ಹತ್ಯೆ ಪ್ರಕರಣ: ಮಹಾರಾಷ್ಟ್ರ ಎಸ್ ಐಟಿಯಿಂದ ಗೌರಿ ಹತ್ಯೆ ಆರೋಪಿ ಕಾಳೆ ವಿಚಾರಣೆ

ಕಮಿನಿಸ್ಟ್ ಮುಖಂಡ ಗೋವಿಂದ ಪನ್ಸಾರೆ ಹತ್ಯೆ ಪ್ರಕರಣ ಆರೋಪಿ ಅಮೋಲ್ ಅರವಿಂದ್ ಕಾಳೆಯನ್ನು ನ್ಯಾಯಾಲಯ ಪೋಲೀಸ್ ಕಸ್ಟಡಿಗೆ ಹಸ್ತಾಂತರಿಸಿದೆ.

ಕೊಲ್ಹಾಪುರ: ಕಮಿನಿಸ್ಟ್ ಮುಖಂಡ ಗೋವಿಂದ ಪನ್ಸಾರೆ ಹತ್ಯೆ ಪ್ರಕರಣ ಆರೋಪಿ ಅಮೋಲ್ ಅರವಿಂದ್ ಕಾಳೆಯನ್ನು ನ್ಯಾಯಾಲಯ ಪೋಲೀಸ್ ಕಸ್ಟಡಿಗೆ ಹಸ್ತಾಂತರಿಸಿದೆ.
ಸೆಷೆನ್ಸ್ ನ್ಯಾಯಾಲಯದ ನ್ಯಾಯಾಧೀಶ ಎಸ್.ಎಸ್.ರಔಲ್ ಕಾಳೆಯನ್ನು ನವೆಂಬರ್ 22ರವರೆಗೆ ಮಹಾರಾಷ್ಟ್ರದ ಪೊಲೀಸ್ ವಿಶೇಷ ತನಿಖಾ ತಂಡದ (ಎಸ್ ಐಟಿ) ವಶಕ್ಕೆ ಒಪ್ಪಿಸಿದ್ದಾರೆ.
ಇದಕ್ಕೆ ಮುನ್ನ ಕಾಳೆ ಕರ್ನಾಟಕದ ಪ್ರಸಿದ್ದ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ಎಸ್ ಐಟಿ ವಶದಲ್ಲಿದ್ದನು.
ಪನ್ಸಾರೆ ಹತ್ಯೆ ಪ್ರಕರಣದಲ್ಲಿ ಕಾಳೆ ಪಾತ್ರದ ಕುರಿತಂತೆ ಅವನ ವಿಚಾರಣೆ ನಡೆಸುವುದು ಅಗತ್ಯ ಎಂದು ಎಸ್ ಐಟಿ ನ್ಯಾಯಾಲಯಕ್ಕೆ ಹೇಳಿದೆ.
ವಿಚಾರವಾದಿ ಚಿಂತಕ, ಕಮಿನಿಸ್ಟ್ ಪಾರ್ಟಿ ಆಫ್ ಇಂಡಿಯಾ ನಾಯಕ ಪನ್ಸಾರೆ ಫೆಬ್ರವರಿ 2015ರಲ್ಲಿ ತಮ್ಮ ಮನೆ ಸಮೀಪದಲ್ಲೇ ಗುಂಡಿನ ದಾಳಿಗೆ ಬಲಿಯಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT