ಪ್ರಧಾನಿ ಮೋದಿ 
ದೇಶ

ಕನಿಷ್ಟ 5 ವರ್ಷ ಗಾಂಧಿ ಕುಟುಂಬಕ್ಕೆ ಹೊರತಾದವರು ಕಾಂಗ್ರೆಸ್ ಅಧ್ಯಕ್ಷರಾಗಲಿ: ಕೈ ನಾಯಕರಿಗೆ ಮೋದಿ ಸವಾಲು

ಕನಿಷ್ಟ ಐದು ವರ್ಷಗಳ ಕಾಲ ಗಾಂಧಿ ಕುಟುಂಬದ ಹೊರತಾಗಿ ಯಾರನ್ನಾದರೂ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ನೇಮಕ ಮಾಡಿ ತೋರಿಸಿ ಎಂದು ಕೈ ಪಾಳಯದ ನಾಯಕರಿಗೆ ಪ್ರಧಾನಿ ಮೋದಿ ಸವಾಲೆಸೆದಿದ್ದಾರೆ.

ಅಂಬಿಕಾಪುರ: ಕನಿಷ್ಟ ಐದು ವರ್ಷಗಳ ಕಾಲ ಗಾಂಧಿ ಕುಟುಂಬದ ಹೊರತಾಗಿ ಯಾರನ್ನಾದರೂ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ನೇಮಕ ಮಾಡಿ ತೋರಿಸಿ ಎಂದು ಕೈ ಪಾಳಯದ ನಾಯಕರಿಗೆ ಪ್ರಧಾನಿ ಮೋದಿ ಸವಾಲೆಸೆದಿದ್ದಾರೆ.
ಕನಿಷ್ಟ ಐದು ವರ್ಷಗಳ ಕಾಲ ಕಾಂಗ್ರೆಸ್ ಪಕ್ಷ ಗಾಂಧಿ ಕುಟುಂಬಕ್ಕೆ ಸೇರಿಲ್ಲದವರನ್ನು ಪಕ್ಷದ ರಾಷ್ಟ್ರಾಧ್ಯಕ್ಷರನ್ನಾಗಿಸಿದರೆ ತಾನು ಪಂಡಿತ್ ಜವಾಹರಲಾಲ್ ನೆಹರೂ ನಿಜವಾಗಿಯೂ ಪ್ರಜಾತಂತ್ರ ವ್ಯವಸ್ಥೆಯ ನಿಜವಾದ ಕರ್ತೃ ಎಂದು ನಂಬುವೆನು ಎಂದು ಮೋದಿ ಹೇಳಿದ್ದಾರೆ.
ಛತ್ತೀಸ್ ಗಢದ ಎರಡನೇ ಹಂತದ ಮತದಾನ ನಡೆಯುವ ಕ್ಷೇತ್ರಗಳಲ್ಲಿ ಪ್ರಚಾರ ಕಾರ್ಯ ಕೈಗೊಂಡಿರುವ ಪ್ರಧಾನಿ ಶುಕ್ರವಾರ ನಡೆದ ಸಮಾವೇಶವೊಂದರಲ್ಲಿ "ನಾನು ಈ ಮೂಲಕ ಕೈ ನಾಯಕರಿಗೆ ಸವಾಲೆಸೆಯುತ್ತೇನೆ, ಗಾಂಧಿ ಕುಟುಂಬದ ಹೊರಗಿನ ಕೆಲ ಒಳ್ಳೆಯ ನಾಯಕರನ್ನು ಪಕ್ಷದ ರಾಷ್ಟ್ರಾಧ್ಯಕ್ಷರನ್ನಾಗಿ ಕನಿಷ್ಟ ಐದು ವರ್ಷಗಳ ಕಾಲ ನೇಮಕ ಮಾಡಿ ತೋರಿಸಿರಿ.ಹಾಗೆ ಮಾಡಿದರೆ ನಾನು ನೆಹರೂ ನಿಜವಾಗಿಯೂ ಇಲ್ಲಿ ಒಳ್ಳೆಯ ಪ್ರಜಾಪ್ರಭುತ್ವ ವ್ಯವಸ್ಥೆ ರಚಿಸಿದ್ದರೆಂದು ನಂಬುತ್ತೇನೆ" ಎಂದರು.
ಕಾಂಗ್ರೆಸ್ ನ ನಾಲ್ಕು ತಲೆಮಾರು ದೇಶವನ್ನು ಆಳಿದೆ. ಆದರೆ ದೇಶಕ್ಕೆ ತಾವೇನನ್ನು ನೀಡಿದ್ದೇವೆನ್ನುವುದನ್ನು ಅವರು ಹೇಳಬೇಕು.ದೆಹಲಿ ಕೆಂಪುಕೋಟೆಯ ಅಖಾಡದಿಂದ ಮಾತನಾಡಲು ಕೇವಲ ಒಂದೇ ಕುಟುಂಬಕ್ಕೆ ಹಕ್ಕಿದೆ ಎನ್ನುವ ಅವರ ನಿಲುವನ್ನು ಜನರು ವಿರೋಧಿಸಿದ್ದಾರೆ.
ನೀವು ದೇಶದ ಬಡವರು ಎಂತಹಾ ಕಠಿಣ ಸಮಸ್ಯೆ ಎದುರಿಸುತ್ತಿದ್ದಾರೆ ಎನ್ನುವುದನ್ನು ಅರಿಯಲಾರಿರಿ. ಆದರೆ ಚಾಯ್ ವಾಲಾ ಇದನ್ನು ಅರಿತಿದ್ದಾನೆ ಎಂದು ಮೋದಿ ಕಾಂಗ್ರೆಸ್ ಹಾಗೂ ಗಾಂಧಿ ಕುಟುಂಬದ ಮೇಲೆ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.
"ಕಾಂಗ್ರೆಸ್ ಪಕ್ಷವು ತಮ್ಮಮನಸ್ಸಿನಲ್ಲಿ ಬೇರುಬಿತ್ಟಿರುವ ಸುಳ್ಳಿನ ಕಥೆಗಳನ್ನೇ ಹೇಳಿ ದೇಶವನ್ನು ಕತ್ತಲಲ್ಲಿರಿಸಿದ್ದಾರೆ." ಅವರು ಹೇಳಿದ್ದಾರೆ.
"ಛತ್ತೀಸ್ ಗಢದಲ್ಲಿನ ಮೊದಲ ಹಂತದ ಚುನಾವಣೆಯಲ್ಲಿ ದಾಖಲೆಯ ಮತದಾನವಾಗಿದೆ, ಈ ಮೂಲಕ ಈ ರಾಜ್ಯದ ಜನ ನಕ್ಸಲರಿಗೆ ಬಲವಾದ ಉತ್ತರ ನೀಡಿದ್ದಾರೆ ಎಂದು ಮೋದಿ ಅಭಿಪ್ರಾಯಪಟ್ಟರು.
ನಕ್ಸಲ್ ಸಮಸ್ಯೆಯಿರುವ ರಾಜ್ಯ ಛತ್ತೀಸ್ ಗಢದಲ್ಲಿ ಇದೇ ನವೇಂಬರ್ 20ರಂದು ಎರಡನೇ ಹಂತದ  ಚುನಾವಣೆ ಮಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!