ಶಬರಿಮಲೆ ದೇವಾಲಯ 
ದೇಶ

ಶಬರಿಮಲೆ ದೇವಾಲಯ ಭಕ್ತಾದಿಗಳಿಗೆ ಮುಕ್ತ: 2 ತಿಂಗಳ ಕಾಲ ಮಂಡಲ ಪೂಜೆಗೆ ಸಕಲ ಸಿದ್ದತೆ

ಕೇರಳದ ಪ್ರಸಿದ್ದ ಶಬರಿಮಲೆ ಅಯ್ಯಪ್ಪ ದೇವಸ್ಥಾನದ ಬಾಗಿಲು ತೆರೆದಿದೆ. ಮುಂದಿನ ಎರಡು ತಿಂಗಳ ಕಾಲ (62ದಿನ) ನಡೆಯುವ ವಾರ್ಷಿಕ ಮಂಡಲ ಪೂಜಾ ಮಹೋತ್ಸವಕ್ಕೆ ದೇವಾಲಯ ಸಾಕ್ಷಿಯಾಗಲ್ದೆ.

ಶಬರಿಮಲೆ: ಕೇರಳದ ಪ್ರಸಿದ್ದ ಶಬರಿಮಲೆ ಅಯ್ಯಪ್ಪ ದೇವಸ್ಥಾನದ ಬಾಗಿಲು ತೆರೆದಿದೆ. ಮುಂದಿನ ಎರಡು ತಿಂಗಳ ಕಾಲ (62ದಿನ) ನಡೆಯುವ ವಾರ್ಷಿಕ ಮಂಡಲ ಪೂಜಾ ಮಹೋತ್ಸವಕ್ಕೆ ದೇವಾಲಯ ಸಾಕ್ಷಿಯಾಗಲಿದೆ.
ಶುಕ್ರವಾರ ಸಂಜೆಯಿಂದಲೇ ದೇವಾಲಯದಲ್ಲಿ ವಿಧಿವತ್ತಾದ ಪೂಜಾ ಕೈಂಕರ್ಯಗಳು ಪಾರಂಭಗೊಂಡಿದ್ದು ಮುಂದಿನ ವರ್ಷ ಮಕರ ಸಂಕ್ರಮಣದ ಮಕರ ಜ್ಯೋತಿ ದರ್ಶನದ ವರೆಗೂ ದೇವಾಲಯ ಭಕ್ತಾದಿಗಳಿಗೆ ತೆರೆದಿರಲಿದೆ.
ಇಂದು ಸಂಜೆಯಿಂಡ ರಾತ್ರಿ ವರೆಗೆ ವಿಶೇಷ ಪೂಜೆಗಳಿದ್ದುಯ್ ಇದಕ್ಕೆ ಸಾರ್ವಜನಿಕರಿಗೆ, ಭಕ್ತರಿಗೆ ಪ್ರವೇಶವಿಲ್ಲ. ಶನಿವಾರದಿಂದ ಭಕ್ತರು ಅಯ್ಯಪ್ಪಸ್ವಾಮಿಯ ದರ್ಶನ ಪಡೆದುಕೊಳ್ಳಬಹುದಾಗಿದೆ.
ಶಬರಿಮಲೆಗೆ ಮಹಿಳೆಯರು ಪ್ರವೇಶಿಸುವುದುಅರ ಕುರಿತು ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಬಳಿಕ ಮೂರನೇ ಬಾರಿ ದೇವಾಲಯದ ಬಾಗಿಲು ತೆರೆದಿದೆ. ಈ ವೇಳೆ ಹಲವು ಮಹಿಳೆಯರು ದೇವಾಲಯದಲ್ಲಿ ಅಯ್ಯಪ್ಪನ ದರ್ಶನಕ್ಕಾಗಿ ಪ್ರಯತ್ನಿಸಿದ್ದರೂ ಇದುವರೆಗೆ ಪ್ರತಿಭಟನಾಕಾರರು,  ಮತ್ತು ಭಕ್ತರ ವಿರೋಧದಿಂಡ ನಿರ್ಬಂಧಿತ ವಯೋಮಾನದ ಯಾವೊಬ್ಬ ಮಹಿಳೆಯೂ ದೇವಸ್ಥಾನ ಪ್ರವೇಶಿಸಲು ಸಾಧ್ಯವಾಗೊರಲಿಲ್ಲ.
ಇದೇ ವೇಳೆ ತಿರುವಾಂಕೂರು ದೇವಸ್ವಂ ಮಂಡಳಿ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್ ತೀರ್ಪು ಜಾರಿಗೆ ತರಲು ಇನ್ನಷ್ಟು ಕಾಲಾವಕಾಶ ನೀಡಬೇಕೆಂದು ಕೋರಿಕೆ ಸಲ್ಲಿಸಲು ನಿರ್ಧರಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT