ಕಾಂಗ್ರೆಸ್ ವಕ್ತಾರ ರಂದೀಪ್ ಸಿಂಗ್ ಸುರ್ಜೇವಾಲಾ 
ದೇಶ

ಬಹುಮತ ಸಾಬೀತಿಗೆ ವಿಶೇಷ ಅಧಿವೇಶನ ಕರೆಯಿರಿ: ಗೋವಾ ರಾಜ್ಯಪಾಲರಿಗೆ ಕಾಂಗ್ರೆಸ್

ಬಿಜೆಪಿ ನೇತೃತ್ವದ ಮೈತ್ರಿ ಸರ್ಕಾರ ಬಹುಮತ ಸಾಬೀತು ಪಡಿಸಲು ಕೂಡಲೇ ವಿಶೇಷ ಅಧಿವೇಶನ ಕರೆಯುವಂತೆ ಗೋವಾ ರಾಜ್ಯಪಾಲೆ ಮೃದುಲಾ ಸಿನ್ಹಾ ಅವರಿಗೆ ಕಾಂಗ್ರೆಸ್ ಶನಿವಾರ ಆಗ್ರಹಿಸಿದೆ...

ಪಣಜಿ: ಬಿಜೆಪಿ ನೇತೃತ್ವದ ಮೈತ್ರಿ ಸರ್ಕಾರ ಬಹುಮತ ಸಾಬೀತು ಪಡಿಸಲು ಕೂಡಲೇ ವಿಶೇಷ ಅಧಿವೇಶನ ಕರೆಯುವಂತೆ ಗೋವಾ ರಾಜ್ಯಪಾಲೆ ಮೃದುಲಾ ಸಿನ್ಹಾ ಅವರಿಗೆ ಕಾಂಗ್ರೆಸ್ ಶನಿವಾರ ಆಗ್ರಹಿಸಿದೆ.
ಈ ಕುರಿತಂತೆ ಮಾತನಾಡಿರುವ ಕಾಂಗ್ರೆಸ್ ವಕ್ತಾರ ರಂದೀಪ್ ಸಿಂಗ್ ಸುರ್ಜೇವಾಲಾ ಅವರು, ವೈದ್ಯಕೀಯ ಕಾರಣದಿಂದಾಗಿ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಕಚೇರಿಗೆ ಗೈರು ಹಾಜರಾಗಿದ್ದಾರೆ. ಹೀಗಾಗಿ ಸರ್ಕಾರ ಅಸ್ತವ್ಯಸ್ತಗೊಂಡಿದೆ ಎಂದು ಹೇಳಿದ್ದಾರೆ. 
ಸಂಸತ್ತಿನಲ್ಲಿ ಮುಂಬರುವ ಚಳಿಗಾಲ ಅಧಿವೇಶನದ ವೇಳೆ ಪಕ್ಷ ಈ ವಿಚಾರವನ್ನು ಪ್ರಸ್ತಾಪ ಮಾಡಲಿದೆ. ಗೋವಾ ಸರ್ಕಾರ ಅಸ್ತವ್ಯವಸ್ತಗೊಂಡಿರುವ ಬಗ್ಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೋಗೂ ಗೋವಾ ರಾಜ್ಯಪಾಲರಿಗೆ ಈಗಾಗಲೇ ಪತ್ರ ಬರೆಯಲಾಗಿದೆ. ವಿಶೇಷ ಅಧಿವೇಶನ ಕರೆದು ಆಡಳಿತಾರೂಢ ಪಕ್ಷ ಬಹುಮತ ಸಾಬೀತುಪಡಿಸುವಂತೆ ಸೂಚಿಸುವಂತೆ ರಾಜ್ಯಪಾಲರ ಬಳಿಯೂ ಮನವಿ ಮಾಡಿಕೊಂಡಿದ್ದೇವೆಂದು ತಿಳಿಸಿದ್ದಾರೆ. 
ಚಳಿಗಾಲ ಅಧಿವೇಶನದ ವೇಳೆ ಬಿಜೆಪಿ ನೇತೃತ್ವದ ಕೇಂದ್ರೀಯ ನಾಯಕತ್ವದ ಮೇಲೆ ಒತ್ತಡ ಹೇರುತ್ತೇವೆ. ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಗೋವಾ ಸಂವಿಧಾನವನ್ನು ಬಂಧನಕ್ಕೊಳಪಡಿಸಿದೆ. ಸಿಎಂ ಪರಿಕ್ಕರ್ ಅವರ ಅನುಪಸ್ಥಿತಿಯಲ್ಲಿ ಬಿಜೆಪಿ ಸಂಪುಟ ಸಲಹಾ ಸಮಿತಿಯನ್ನು ರಚನೆ ಮಾಡಿರುವುದು ಸಂವಿಧಾನಕ್ಕೆ ಮಾಡಿರುವ ದೊಡ್ಡ ವಂಚನೆಯಾಗಿದೆ ಎಂದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT